ಕಿನ್ಯ ಸಾಗ್ ಫ್ಯಾಮಿಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ “ಬೃಹತ್ ಮೌಲಿದ್ ಮಜ್ಲಿಸ್ ಮತ್ತು ಕುಟುಂಬ ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಅದ್ದೂರಿಯಾಗಿ ನೆರವೇರಿತು. ಟ್ರಸ್ಟ್ ಅಧ್ಯಕ್ಷರಾದ ಅಬ್ಬುಚ್ಚ ಸಾಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವು ಕಿನ್ಯ ಕೇಂದ್ರ ಮಸೀದಿಯ ಖತೀಬ್ ಉಸ್ತಾದ್ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಮುಸ್ತಫ ಸಅದಿ ಬಳ್ಳಾರಿ ಅವರು ಮೌಲಿದ್ ಮಜ್ಲಿಸ್ ಅನ್ನು ಮುನ್ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಸ್ತಫಾ ಸಅದಿ ಬಳ್ಳಾರಿ ಅವರು, ಕುಟುಂಬದ ಮಹತ್ವ, ಐಕ್ಯತೆ ಮತ್ತು ಹಿರಿಯರಿಗೆ ಗೌರವ ನೀಡುವ ಬಗ್ಗೆ ಉಪದೇಶ ನೀಡಿದರು. ಇಬ್ರಾಹಿಂ ಮುಸ್ಲಿಯಾರ್ ಕೂಡಾರ ಅವರು ಕೂಡ ಕುಟುಂಬದ ಬಾಂಧವ್ಯದ ಬಗ್ಗೆ ಮಾತನಾಡಿದರು.
ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ಪ್ರವಾದಿಯವರ ಜೀವನಕ್ಕೆ ಸಂಬಂಧಿಸಿದ ಹಾಡುಗಳು ಮತ್ತು ಭಾಷಣಗಳು ವಿಶೇಷವಾಗಿ ಮನಸೆಳೆದವು.
ಮಧ್ಯಾಹ್ನ, ರವೂಫ್ ಸಾಗ್ ಮತ್ತು ಖಲಂದರ್ ಸಾಗ್ ಅವರು ತಯಾರಿಸಿದ್ದ ರುಚಿರುಚಿಯಾದ ಬಿರಿಯಾನಿ ಊಟವನ್ನು ಬಡಿಸಲಾಯಿತು. ಕೂಡಾರ ಕುಟುಂಬದ ಸದಸ್ಯರು ನೀಡಿದ ಸ್ವಾಗತ ಜ್ಯೂಸ್ ಎಲ್ಲರನ್ನೂ ತಂಪುಗೊಳಿಸಿತು. ಸಂಜೆ ಸೀರೆ ಮತ್ತು ಸಜ್ಜಿಗೆಯೊಂದಿಗೆ ನೀಡಿದ ಚಹಾ ಎಲ್ಲರಿಗೂ ಹೊಸ ಉತ್ಸಾಹ ತುಂಬಿಸಿತು.
ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ, ಇಸಾಕ್ ಸಾಗ್ ಅವರನ್ನು ಸನ್ಮಾನಿಸಲಾಯಿತು. ಸೆಪ್ಟೆಂಬರ್ 11 ರಂದು ಗ್ರೀಫಿನ್ಸ್ ನಾಟಿಕಲ್ನಲ್ಲಿ ನಡೆದ ಯುವಕರ ಆಟೋಟ ಮತ್ತು ಇಂದು ನಡೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅಂತಿಮವಾಗಿ, ಸಾಗ್ ಫ್ಯಾಮಿಲಿ ಚಾರಿಟೇಬಲ್ ಟ್ರಸ್ಟ್ನ ಕಾರ್ಯದರ್ಶಿ ಸುಹೈಬ್ ಸಾಗ್ ಅವರು ಎಲ್ಲರಿಗೂ ವಂದನೆ ಸಲ್ಲಿಸಿದರು.
ಮಹಿಳೆಯರ ವಿಶೇಷ ಕಾರ್ಯಕ್ರಮ
ಮಹಿಳೆಯರಿಗಾಗಿ ಪ್ರತ್ಯೇಕವಾಗಿ ಏರ್ಪಡಿಸಿದ್ದ ಸ್ಪರ್ಧೆಗಳು, ಕ್ವಿಜ್ಗಳು ಸಾಗ್ ಕುಟುಂಬದ ಮಹಿಳೆಯರ ನಡುವೆ ಪರಸ್ಪರ ಸ್ನೇಹ ಮತ್ತು ಮನಸ್ಸಿಗೆ ಹೊಸ ಚೈತನ್ಯ ನೀಡಿತು. ಕಾರ್ಯಕ್ರಮ ಮುಗಿದು ಮನೆಗೆ ಹಿಂದಿರುಗುವಾಗ, ಎಲ್ಲರೂ ಹೊಸ ಹುಮ್ಮಸ್ಸು ಮತ್ತು ಭರವಸೆಯೊಂದಿಗೆ ಹಿಂದಿರುಗಿದರು. ಈ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ವಿಯಾಯಿತು. ಇದರಲ್ಲಿ ಯುವಕರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, ಕುಟುಂಬದ ಬಾಂಧವ್ಯದ ಮೇಲಿನ ಅವರ ಪ್ರೀತಿಯನ್ನು ತೋರಿಸುತ್ತದೆ.
ಕಾರ್ಯಕ್ರಮಕ್ಕೆ ಬಂದು ಸಹಕರಿಸಿದವರಿಗೆ ಮತ್ತು ಕಾರಣಾಂತರಗಳಿಂದ ಬರಲು ಸಾಧ್ಯವಾಗದಿದ್ದ ಎಲ್ಲರಿಗೂ ಕೃತಜ್ಞತೆಗಳು. ನಮ್ಮ ಈ ಸ್ನೇಹ ಸಂಬಂಧ ಹೀಗೆಯೇ ಮುಂದುವರಿಯಲಿ, ಅದರಲ್ಲಿ ಅಲ್ಲಾಹನು ಬರ್ಕತ್ ನೀಡಲಿ. ಚಿಕ್ಕಪುಟ್ಟ ಅಸಮಾಧಾನಗಳಿದ್ದರೆ, ಅದನ್ನು ಮರೆತು ಮುಂದೆ ಸಾಗೋಣ.
ಸಾಗ್ ಫ್ಯಾಮಿಲಿ ಯೂತ್ ವಿಂಗ್ ಸ್ಥಾಪನೆ
ಸಂಜೆ ನಡೆದ ವಾರ್ಷಿಕ ಮಹಾಸಭೆಯಲ್ಲಿ, ಕುಟುಂಬದ ಐಕ್ಯತೆ ಮತ್ತು ಇತರ ವಿಷಯಗಳ ಬಗ್ಗೆ ಚರ್ಚಿಸಿ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಯಿತು. ಸಾಗ್ ಫ್ಯಾಮಿಲಿ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ, ಹಿರಿಯರ ಮಾರ್ಗದರ್ಶನದೊಂದಿಗೆ, ಸಾಗ್ ಫ್ಯಾಮಿಲಿ ಯೂತ್ ವಿಂಗ್ ಅನ್ನು ಸ್ಥಾಪಿಸಲು ನಿರ್ಧರಿಸಲಾಯಿತು. ಈ ಯುವ ಘಟಕವು ಯುವಕರ ಆಲೋಚನೆಗಳಿಗೆ ಪ್ರಾತಿನಿಧ್ಯ ನೀಡಿ, ಕುಟುಂಬವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಸಹಾಯ ಮಾಡಲಿದೆ. ಈ ಉತ್ತಮ ಕಾರ್ಯಕ್ಕೆ ಸಹಕರಿಸಿದ ಮತ್ತು ಆರ್ಥಿಕ ಬೆಂಬಲ ನೀಡಿದ ಎಲ್ಲರಿಗೂ ಪ್ರಾರ್ಥಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)