ಕೆಸಿಎಫ್ ಸಲ್ಮಾಬಾದ್ ಸೆಕ್ಟರ್ ಮಾಸಿಕ ಸ್ವಲಾತ್ ಹಾಗೂ ಮೌಲಿದ್ ಮಜ್ಲಿಸ್ ಐಸಿ ಶಿಕ್ಷಣ ವಿಭಾಗದ ಕಾರ್ಯದರ್ಶಿ ಖಲಂದರ್ ಉಸ್ತಾದ್ ರವರ ನೇತೃತ್ವದಲ್ಲಿ ನವಾಝ್ ಮುಡಿಮಾರ್ ರವರ ಅಧ್ಯಕ್ಷತೆಯಲ್ಲಿ ಫೖಝಲ್ ಮಾದಾಪುರ ಅವರ ನಿವಾಸದಲ್ಲಿ ಇಷಾಟೌನಿನಲ್ಲಿ ಯಶಸ್ವಿಯಾಗಿ ನಡೆಯಿತು. ರಾಷ್ಟ್ರೀಯ ಸಮಿತಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಅಶ್ರಫ್ ರೆಂಜಾಡಿಯವರು ಸ್ವಾಗತಿಸಿದರು. ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಲ್ಲಾಹು ಈ ಪ್ರಪಂಚದಲ್ಲಿ ಸರ್ವ ಸೃಷ್ಟಿಗಳನ್ನು ಸೃಷ್ಟಿಸುವುದಕ್ಕಿಂತ ಮೊತ್ತ ಮೊದಲಾಗಿ ಪ್ರವಾದಿ ﷺ ರವರ ಪ್ರಕಾಶವನ್ನಾಗಿದೆ ಸೃಷ್ಟಿಸಿರುವುದು. ಪ್ರವಾದಿ ﷺ ರವರ ಮೌಲಿದ್ ಮಜ್ಲಿಸಿನಲ್ಲಿ ಶಿಸ್ತು ಪಾಲನೆ ಅತೀ ಮುಖ್ಯವಾಗಿರಬೇಕು. ಇನ್ನಿತರ ಯಾವುದೇ ಕಾರ್ಯಗಳಲ್ಲಿ ತೊಡಗಿ ಕೊಳ್ಳವುದು ಒಮ್ಮೆಯೂ ಸಲ್ಲದು. ಕಾರಣ ಪ್ರವಾದಿ ﷺ ರವರನ್ನು ಗೌರವಿಸುವುದು, ಪ್ರೀತಿಸುವುದು ಸತ್ಯ ವಿಶ್ವಾಸಿಗೆ ಕಡ್ಡಾಯವಾಗಿದೆ ಎಂದು ಕೆಸಿಎಫ್ ನೋರ್ತ್ ಝೋನ್ ಶಿಕ್ಷಣ ಇಲಾಖೆಯ ಅಧ್ಯಕ್ಷರಾದ ಮುಹಮ್ಮದ್ ಸಖಾಫಿ ಉಸ್ತಾದರು ಉದ್ಭೋದನೆ ನೀಡಿದರು.

ಐಸಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಖಲಂದರ್ ಉಸ್ತಾದ್ ರವರನ್ನು ಸಲ್ಮಾಬಾದ್ ಸೆಕ್ಟರ್ ಕಾರ್ಯಕರ್ತರು ಶಾಲು ಹೊದಿಸಿ ಸನ್ಮಾನಿಸಿದರು. ರಾಷ್ಟ್ರೀಯ ಸಮಿತಿ ಎಕ್ಸಿಕ್ಯೂಟಿವ್ ಸದಸ್ಯರಾದ ಅಬೂಬಕರ್ ಮದನಿ ಮಂಚಿ, ಹನೀಫ್ ಮುಸ್ಲಿಯಾರ್ ರೆಂಜ, ಸಂಘಟನಾ ಇಲಾಖೆ ಅಧ್ಯಕ್ಷರಾದ ಮನ್ಸೂರ್ ಬೆಳ್ಮ, ವೃತ್ತಿಪರ ಇಲಾಖೆಯ ಕಾರ್ಯದರ್ಶಿ ತೌಫೀಖ್ ಬೆಳ್ತಂಗಡಿ, ಪಬ್ಲಿಕೇಶನ್ ವಿಂಗ್ ಅಧ್ಯಕ್ಷರಾದ ಫಝಲ್ ಸುರತ್ಕಲ್, ಕಾರ್ಯದರ್ಶಿ ಶಾಫಿ ಮಾದಾಪುರ, ಎಡ್ಮಿನ್ ವಿಂಗ್ ಅಧ್ಯಕ್ಷರಾದ ಮೂಸಾ ಪೖಂಬಚ್ಚಾಲ್ ಹಾಗೂ ಸಲ್ಮಾಬಾದ್ ಸೆಕ್ಟರಿನ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಹಮ್ಮದ್ ಸಖಾಫಿ ಉಸ್ತಾದರು ದುಆ ನೆರವೇರಿಸಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ