ಕೆಸಿಎಫ್ ಸಲ್ಮಾಬಾದ್ ಸೆಕ್ಟರ್ ಮಾಸಿಕ ಸ್ವಲಾತ್ ಹಾಗೂ ಮೌಲಿದ್ ಮಜ್ಲಿಸ್ ಐಸಿ ಶಿಕ್ಷಣ ವಿಭಾಗದ ಕಾರ್ಯದರ್ಶಿ ಖಲಂದರ್ ಉಸ್ತಾದ್ ರವರ ನೇತೃತ್ವದಲ್ಲಿ ನವಾಝ್ ಮುಡಿಮಾರ್ ರವರ ಅಧ್ಯಕ್ಷತೆಯಲ್ಲಿ ಫೖಝಲ್ ಮಾದಾಪುರ ಅವರ ನಿವಾಸದಲ್ಲಿ ಇಷಾಟೌನಿನಲ್ಲಿ ಯಶಸ್ವಿಯಾಗಿ ನಡೆಯಿತು. ರಾಷ್ಟ್ರೀಯ ಸಮಿತಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಅಶ್ರಫ್ ರೆಂಜಾಡಿಯವರು ಸ್ವಾಗತಿಸಿದರು. ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಲ್ಲಾಹು ಈ ಪ್ರಪಂಚದಲ್ಲಿ ಸರ್ವ ಸೃಷ್ಟಿಗಳನ್ನು ಸೃಷ್ಟಿಸುವುದಕ್ಕಿಂತ ಮೊತ್ತ ಮೊದಲಾಗಿ ಪ್ರವಾದಿ ﷺ ರವರ ಪ್ರಕಾಶವನ್ನಾಗಿದೆ ಸೃಷ್ಟಿಸಿರುವುದು. ಪ್ರವಾದಿ ﷺ ರವರ ಮೌಲಿದ್ ಮಜ್ಲಿಸಿನಲ್ಲಿ ಶಿಸ್ತು ಪಾಲನೆ ಅತೀ ಮುಖ್ಯವಾಗಿರಬೇಕು. ಇನ್ನಿತರ ಯಾವುದೇ ಕಾರ್ಯಗಳಲ್ಲಿ ತೊಡಗಿ ಕೊಳ್ಳವುದು ಒಮ್ಮೆಯೂ ಸಲ್ಲದು. ಕಾರಣ ಪ್ರವಾದಿ ﷺ ರವರನ್ನು ಗೌರವಿಸುವುದು, ಪ್ರೀತಿಸುವುದು ಸತ್ಯ ವಿಶ್ವಾಸಿಗೆ ಕಡ್ಡಾಯವಾಗಿದೆ ಎಂದು ಕೆಸಿಎಫ್ ನೋರ್ತ್ ಝೋನ್ ಶಿಕ್ಷಣ ಇಲಾಖೆಯ ಅಧ್ಯಕ್ಷರಾದ ಮುಹಮ್ಮದ್ ಸಖಾಫಿ ಉಸ್ತಾದರು ಉದ್ಭೋದನೆ ನೀಡಿದರು.

ಐಸಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಖಲಂದರ್ ಉಸ್ತಾದ್ ರವರನ್ನು ಸಲ್ಮಾಬಾದ್ ಸೆಕ್ಟರ್ ಕಾರ್ಯಕರ್ತರು ಶಾಲು ಹೊದಿಸಿ ಸನ್ಮಾನಿಸಿದರು. ರಾಷ್ಟ್ರೀಯ ಸಮಿತಿ ಎಕ್ಸಿಕ್ಯೂಟಿವ್ ಸದಸ್ಯರಾದ ಅಬೂಬಕರ್ ಮದನಿ ಮಂಚಿ, ಹನೀಫ್ ಮುಸ್ಲಿಯಾರ್ ರೆಂಜ, ಸಂಘಟನಾ ಇಲಾಖೆ ಅಧ್ಯಕ್ಷರಾದ ಮನ್ಸೂರ್ ಬೆಳ್ಮ, ವೃತ್ತಿಪರ ಇಲಾಖೆಯ ಕಾರ್ಯದರ್ಶಿ ತೌಫೀಖ್ ಬೆಳ್ತಂಗಡಿ, ಪಬ್ಲಿಕೇಶನ್ ವಿಂಗ್ ಅಧ್ಯಕ್ಷರಾದ ಫಝಲ್ ಸುರತ್ಕಲ್, ಕಾರ್ಯದರ್ಶಿ ಶಾಫಿ ಮಾದಾಪುರ, ಎಡ್ಮಿನ್ ವಿಂಗ್ ಅಧ್ಯಕ್ಷರಾದ ಮೂಸಾ ಪೖಂಬಚ್ಚಾಲ್ ಹಾಗೂ ಸಲ್ಮಾಬಾದ್ ಸೆಕ್ಟರಿನ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಹಮ್ಮದ್ ಸಖಾಫಿ ಉಸ್ತಾದರು ದುಆ ನೆರವೇರಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ