ದೇರಳಕಟ್ಟೆ: ಮುಹ್ಯಿದ್ದೀನ್ ಜುಮಾ ಮಸೀದಿ ಹಾಗೂ ರಹ್ಮಾನಿಯ ಮದ್ರಸ ಅಡ್ಕರೆಪಡ್ಪು ಬೆಳ್ಮ ಇದರ ವತಿಯಿಂದ ಪ್ರವಾದಿ ಪೈಗಂಬರ್ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ 1500ನೇ ಜನ್ಮ ದಿನಾಚರಣೆಯ ಪ್ರಯುಕ್ತ ಪೊಲೀಸರ ಜತೆ ಮದ್ರಸ ಮಕ್ಕಳ ವಿಶೇಷ ಚರ್ಚಾ ಕೂಟ ಕೋಣಾಜೆ ಠಾಣಾ ಸಬ್ ಇನ್ಸ್ಪೆಕ್ಟರ್ ನಾಗರಾಜ ಎಸ್. ರವರ ನೇತೃತ್ವದಲ್ಲಿ ನಡೆಯಿತು.
ಗಾಂಜಾ, ಆಫೀಮು, ಅಮಲು ಪದಾರ್ಥ, ಹದಿಹರೆಯ ಬಾಲಕ ಬಾಲಕಿಯರ ವಾಹನ ಚಾಲನೆ, ಮಕ್ಕಳ ಮೇಲಿನ ದೌರ್ಜನ್ಯ ಮುಂತಾದ ಅನೇಕ ವಿಷಯಗಳ ಕುರಿತು ಮಾಹಿತಿ ನೀಡಿದರು. ಕೊಣಾಜೆ ಠಾಣಾ ಪೊಲೀಸ್ ಸಿಬ್ಬಂದಿ ಶರಣಪ್ಟ, ಜಮಾಅತ್ ಖತೀಬ್ ಮುಹಮ್ಮದ್ ಹಿಕಮಿ, ಮುಖ್ಯ ಅಧ್ಯಾಪಕರಾದ ಹನೀಫ್ ಸಅದಿ, ಅಧ್ಯಾಪಕರಾದ ಕೆ. ಎಚ್. ಇಸ್ಮಾಈಲ್ ಮುಸ್ಲಿಯಾರ್, ಅಬ್ದುಲ್ ಹಮೀದ್ ಮದನಿ, ಜಮಾಅತ್ ಅಧ್ಯಕ್ಷ ಜಾಫರ್, ಕಾರ್ಯದರ್ಶಿ ಮುಸ್ತಫ, ಕೋಶಾಧಿಕಾರಿ ಮುಹಮ್ಮದ್, ಉಸ್ತುವಾರಿ ಎ.ಬಿ. ಹುಸೈನ್, ಉಪಾಧ್ಯಕ್ಷರುಗಳಾದ ಅಬ್ದುಲ್ ಖಾದರ್, ಹೈದರ್, ಜತೆ ಕಾರ್ಯದರ್ಶಿಗಳಾದ ಅಬೂಬಕರ್, ಅಬ್ದುರ್ರವೂಫ್, ಅಬ್ದುಲ್ ಸಲಾಂ ಕಮಿಟಿ ಸದಸ್ಯರಾದ ಆದಂ ಮುಸ್ಲಿಯಾರ್, ಮುಹಮ್ಮದ್, ಅಬ್ಬಾಸ್ ಬಾಕಿಮಾರ್, ಮಸೀದಿ ನಿರ್ಮಾಣ ಸಮಿತಿ ಅಧ್ಯಕ್ಷ ಸಿದ್ದೀಕ್, ಉಪಾಧ್ಯಕ್ಷ ಅಬ್ದುರ್ರಹೀಮ್, ವೈಸ್ ಕನ್ವೀನರ್ ನಿಯಾಝ್ ಮುಂತಾದವರು ಉಪಸ್ಥಿತರಿದ್ದರು.
ಇದರ ಭಾಗವಾಗಿ ನಡೆದ ಹಲವಾರು ವಿಶೇಷ ಕಾರ್ಯಕ್ರಮಗಳಾದ ಆರೋಗ್ಯ ಮತ್ತು ಆಹಾರ ತರಗತಿ, ಹಳೇ ವಿದ್ಯಾರ್ಥಿ ಸಂಗಮ, ಹಿರಿಯರ ಜತೆ ಸ್ನೇಹ ಸಂಗಮ, ಮದ್ರಸ ಮಕ್ಕಳ ಮೀಲಾದ್ ಸಂಗಮ, F A. Box ಉದ್ಘಾಟನೆ, ಕೈ ಬರಹ ಮಾಸಿಕ ಬಿಡುಗಡೆ ಮುಂತಾದ ಕಾರ್ಯಕ್ರಮಗಳು ನಡೆಯಿತು. ಅಧ್ಯಾಪಕ ಮುಹಮ್ಮದ್ ಮುಸ್ತಫ ಸಅದಿ ಹರೇಕಳ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ