ದೇರಳಕಟ್ಟೆ: ಮುಹ್ಯಿದ್ದೀನ್ ಜುಮಾ ಮಸೀದಿ ಹಾಗೂ ರಹ್ಮಾನಿಯ ಮದ್ರಸ ಅಡ್ಕರೆಪಡ್ಪು ಬೆಳ್ಮ ಇದರ ವತಿಯಿಂದ ಪ್ರವಾದಿ ಪೈಗಂಬರ್ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ 1500ನೇ ಜನ್ಮ ದಿನಾಚರಣೆಯ ಪ್ರಯುಕ್ತ ಪೊಲೀಸರ ಜತೆ ಮದ್ರಸ ಮಕ್ಕಳ ವಿಶೇಷ ಚರ್ಚಾ ಕೂಟ ಕೋಣಾಜೆ ಠಾಣಾ ಸಬ್ ಇನ್ಸ್ಪೆಕ್ಟರ್ ನಾಗರಾಜ ಎಸ್. ರವರ ನೇತೃತ್ವದಲ್ಲಿ ನಡೆಯಿತು.
ಗಾಂಜಾ, ಆಫೀಮು, ಅಮಲು ಪದಾರ್ಥ, ಹದಿಹರೆಯ ಬಾಲಕ ಬಾಲಕಿಯರ ವಾಹನ ಚಾಲನೆ, ಮಕ್ಕಳ ಮೇಲಿನ ದೌರ್ಜನ್ಯ ಮುಂತಾದ ಅನೇಕ ವಿಷಯಗಳ ಕುರಿತು ಮಾಹಿತಿ ನೀಡಿದರು. ಕೊಣಾಜೆ ಠಾಣಾ ಪೊಲೀಸ್ ಸಿಬ್ಬಂದಿ ಶರಣಪ್ಟ, ಜಮಾಅತ್ ಖತೀಬ್ ಮುಹಮ್ಮದ್ ಹಿಕಮಿ, ಮುಖ್ಯ ಅಧ್ಯಾಪಕರಾದ ಹನೀಫ್ ಸಅದಿ, ಅಧ್ಯಾಪಕರಾದ ಕೆ. ಎಚ್. ಇಸ್ಮಾಈಲ್ ಮುಸ್ಲಿಯಾರ್, ಅಬ್ದುಲ್ ಹಮೀದ್ ಮದನಿ, ಜಮಾಅತ್ ಅಧ್ಯಕ್ಷ ಜಾಫರ್, ಕಾರ್ಯದರ್ಶಿ ಮುಸ್ತಫ, ಕೋಶಾಧಿಕಾರಿ ಮುಹಮ್ಮದ್, ಉಸ್ತುವಾರಿ ಎ.ಬಿ. ಹುಸೈನ್, ಉಪಾಧ್ಯಕ್ಷರುಗಳಾದ ಅಬ್ದುಲ್ ಖಾದರ್, ಹೈದರ್, ಜತೆ ಕಾರ್ಯದರ್ಶಿಗಳಾದ ಅಬೂಬಕರ್, ಅಬ್ದುರ್ರವೂಫ್, ಅಬ್ದುಲ್ ಸಲಾಂ ಕಮಿಟಿ ಸದಸ್ಯರಾದ ಆದಂ ಮುಸ್ಲಿಯಾರ್, ಮುಹಮ್ಮದ್, ಅಬ್ಬಾಸ್ ಬಾಕಿಮಾರ್, ಮಸೀದಿ ನಿರ್ಮಾಣ ಸಮಿತಿ ಅಧ್ಯಕ್ಷ ಸಿದ್ದೀಕ್, ಉಪಾಧ್ಯಕ್ಷ ಅಬ್ದುರ್ರಹೀಮ್, ವೈಸ್ ಕನ್ವೀನರ್ ನಿಯಾಝ್ ಮುಂತಾದವರು ಉಪಸ್ಥಿತರಿದ್ದರು.
ಇದರ ಭಾಗವಾಗಿ ನಡೆದ ಹಲವಾರು ವಿಶೇಷ ಕಾರ್ಯಕ್ರಮಗಳಾದ ಆರೋಗ್ಯ ಮತ್ತು ಆಹಾರ ತರಗತಿ, ಹಳೇ ವಿದ್ಯಾರ್ಥಿ ಸಂಗಮ, ಹಿರಿಯರ ಜತೆ ಸ್ನೇಹ ಸಂಗಮ, ಮದ್ರಸ ಮಕ್ಕಳ ಮೀಲಾದ್ ಸಂಗಮ, F A. Box ಉದ್ಘಾಟನೆ, ಕೈ ಬರಹ ಮಾಸಿಕ ಬಿಡುಗಡೆ ಮುಂತಾದ ಕಾರ್ಯಕ್ರಮಗಳು ನಡೆಯಿತು. ಅಧ್ಯಾಪಕ ಮುಹಮ್ಮದ್ ಮುಸ್ತಫ ಸಅದಿ ಹರೇಕಳ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ