ಮಂಗಳೂರು: ಪಂಪ್ವೆಲ್ ಇಸ್ಲಾಮಿಕ್ ಕಲ್ಚರಲ್ ಸೆಂಟರ್ ನೇತೃತ್ವದಲ್ಲಿ ಮಂಗಳೂರಿನ ಅಡ್ಯಾರ್ ಕಣ್ಣೂರ್ ನಲ್ಲಿ ಸ್ಥಾಪನೆ ಗೊಳ್ಳಲಿರುವ ವಿವಿಧ ಶಿಕ್ಷಣ ಸಂಸ್ಥೆಗಳನ್ನು ಒಳಗೊಂಡ “ತಖ್ವಾ ಅಕಾಡೆಮಿ”ಯ ಶಿಲಾನ್ಯಾಸ ಕಾರ್ಯಕ್ರಮವು ಡಿಸೆಂಬರ್ ಎಂಟು ಸೋಮವಾರ ಬೆಳಗ್ಗೆ ಹತ್ತು ಗಂಟೆಗೆ ನಡೆಯಲಿದೆ.ಕುಂಬೋಲ್ ಸಯ್ಯಿದ್ ಕೆ ಎಸ್ ಆಟ್ಟಕೋಯ ತಂಙಳ್ ಶಿಲಾನ್ಯಾಸ ನಿರ್ವಹಿಸಲಿದ್ದಾರೆ,
ಝೖನುಲ್ ಉಲಮಾ ಮಾಣಿ ಉಸ್ತಾದ್ ಪ್ರಾರ್ಥನೆ ನಡೆಸಲಿದ್ದು, ಮರ್ಕಝ್ ನಾಲೆಜ್ ಸಿಟಿ ಆಡಳಿತ ನಿರ್ದೇಶಕರಾದ ಡಾ.ಅಬ್ದುಲ್ ಹಕೀಮ್ ಅಝ್ಹರಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಡಾ. ಯೇನೆಪೋಯ ಅಬ್ದುಲ್ಲ ಕುಂಞಿ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.
ಅಕಾಡೆಮಿಯ ಅಧೀನದಲ್ಲಿ ಹಿಫ್ಝುಲ್ ಖುರ್ ಆನ್ ಕಾಲೇಜು, ಪಬ್ಲಿಕ್ ಸ್ಕೂಲ್, ದಅವಾ ಕಾಲೇಜು, ಹಾಸ್ಟೆಲ್ ಮುಂತಾದ ಸಂಸ್ಥೆಗಳನ್ನು ಪ್ರಾರಂಭಿಸಿ, ನುರಿತ ಶಿಕ್ಷಣ ತಜ್ಞರ ಮಾರ್ಗದರ್ಶನದಲ್ಲಿ ಅಂತಾರಾಷ್ಟ್ರೀಯ ಗುಣ ಮಟ್ಟದ ವಿದ್ಯಾಭ್ಯಾಸ ನೀಡುವ ಗುರಿಯನ್ನು ಹೊಂದಲಾಗಿದೆ.
ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸ ಬೇಕಾಗಿ ತಖ್ವಾ ಅಕಾಡೆಮಿಯ ಸಂಚಾಲಕ ಹಾಗೂ ಕೋಶಾಧಿಕಾರಿ ಡಾ ಎಸ್ ಎಂ ರಶೀದ್ ಹಾಜಿ ಹಾಗೂ ಪ್ರಧಾನ ಕಾರ್ಯದರ್ಶಿ ಡಾ ಅಬ್ದುಲ್ ರಶೀದ್ ಸಖಾಫಿ ಝೖನೀ ಕಾಮಿಲ್ ವಿನಂತಿಸಿ ಕೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)