ಮಂಗಳೂರು: ಪಂಪ್ವೆಲ್ ಇಸ್ಲಾಮಿಕ್ ಕಲ್ಚರಲ್ ಸೆಂಟರ್ ನೇತೃತ್ವದಲ್ಲಿ ಮಂಗಳೂರಿನ ಅಡ್ಯಾರ್ ಕಣ್ಣೂರ್ ನಲ್ಲಿ ಸ್ಥಾಪನೆ ಗೊಳ್ಳಲಿರುವ ವಿವಿಧ ಶಿಕ್ಷಣ ಸಂಸ್ಥೆಗಳನ್ನು ಒಳಗೊಂಡ “ತಖ್ವಾ ಅಕಾಡೆಮಿ”ಯ ಶಿಲಾನ್ಯಾಸ ಕಾರ್ಯಕ್ರಮವು ಡಿಸೆಂಬರ್ ಎಂಟು ಸೋಮವಾರ ಬೆಳಗ್ಗೆ ಹತ್ತು ಗಂಟೆಗೆ ನಡೆಯಲಿದೆ.ಕುಂಬೋಲ್ ಸಯ್ಯಿದ್ ಕೆ ಎಸ್ ಆಟ್ಟಕೋಯ ತಂಙಳ್ ಶಿಲಾನ್ಯಾಸ ನಿರ್ವಹಿಸಲಿದ್ದಾರೆ,
ಝೖನುಲ್ ಉಲಮಾ ಮಾಣಿ ಉಸ್ತಾದ್ ಪ್ರಾರ್ಥನೆ ನಡೆಸಲಿದ್ದು, ಮರ್ಕಝ್ ನಾಲೆಜ್ ಸಿಟಿ ಆಡಳಿತ ನಿರ್ದೇಶಕರಾದ ಡಾ.ಅಬ್ದುಲ್ ಹಕೀಮ್ ಅಝ್ಹರಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಡಾ. ಯೇನೆಪೋಯ ಅಬ್ದುಲ್ಲ ಕುಂಞಿ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.
ಅಕಾಡೆಮಿಯ ಅಧೀನದಲ್ಲಿ ಹಿಫ್ಝುಲ್ ಖುರ್ ಆನ್ ಕಾಲೇಜು, ಪಬ್ಲಿಕ್ ಸ್ಕೂಲ್, ದಅವಾ ಕಾಲೇಜು, ಹಾಸ್ಟೆಲ್ ಮುಂತಾದ ಸಂಸ್ಥೆಗಳನ್ನು ಪ್ರಾರಂಭಿಸಿ, ನುರಿತ ಶಿಕ್ಷಣ ತಜ್ಞರ ಮಾರ್ಗದರ್ಶನದಲ್ಲಿ ಅಂತಾರಾಷ್ಟ್ರೀಯ ಗುಣ ಮಟ್ಟದ ವಿದ್ಯಾಭ್ಯಾಸ ನೀಡುವ ಗುರಿಯನ್ನು ಹೊಂದಲಾಗಿದೆ.
ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸ ಬೇಕಾಗಿ ತಖ್ವಾ ಅಕಾಡೆಮಿಯ ಸಂಚಾಲಕ ಹಾಗೂ ಕೋಶಾಧಿಕಾರಿ ಡಾ ಎಸ್ ಎಂ ರಶೀದ್ ಹಾಜಿ ಹಾಗೂ ಪ್ರಧಾನ ಕಾರ್ಯದರ್ಶಿ ಡಾ ಅಬ್ದುಲ್ ರಶೀದ್ ಸಖಾಫಿ ಝೖನೀ ಕಾಮಿಲ್ ವಿನಂತಿಸಿ ಕೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ