ಬೆಳ್ತಂಗಡಿ:ಮದುವೆಯ ಹೆಸರಿನಲ್ಲಿ ಇಂದು ಹಲವಾರು ಅನಾಚಾರಗಳು ನಡೆಯುತ್ತಿದ್ದು, ಮದುವೆಯನ್ನು ಹೆಚ್ಚು ಭಾರಗೊಳಿಸುವುದರೊಂದಿಗೆ, ಅನಿಸ್ಲಾಮಿಕತೆಗಳಿಂದ ಮದುವೆಯ ಬರಕತ್ತನ್ನು ನೀಗಿಸಲಾಗುತ್ತಿದೆ. ಇದಕ್ಕೊಂದು ಕಡಿವಾಣ ಹಾಕಬೇಕೆಂದುಕೊಂಡು SჄS ಕರ್ನಾಟಕ ರಾಜ್ಯ ಸಮಿತಿಯು ‘ಮಾದರಿ ಮದುವೆ: ಶತದಿನ ಅಭಿಯಾನ’ವನ್ನು ಹಮ್ಮಿಗೊಂಡಿದೆ.
ಆ ಪ್ರಯುಕ್ತ ಎಸ್.ವ್ಯೆ.ಎಸ್ ಬೆಳ್ತಂಗಡಿ ಝೋನ್ ಜಮಾಅತ್ ಪ್ರತಿನಿಧಿಗಳ ಸಂಗಮ ದಿನಾಂಕ 12.12.2025 ಶುಕ್ರವಾರ 3ಗಂಟೆಗೆ ಝೋನ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಸಖಾಫಿ ಆಲoದಿಲ ರವರ ಅಧ್ಯಕ್ಷತೆ ಯಲ್ಲಿ ಗುರುವಾಯನಕೆರೆ ಮಸೀದಿ ಹಾಲ್ ನಲ್ಲಿ ನಡೆಯಲಿರುವುದು.
ಅಸ್ಸಯ್ಯದ್ ಇಸ್ಮಾಯಿಲ್ ಅಲ್ ಹಾದಿ ತಂಗಳ್ ಉಜಿರೆ ಕಾರ್ಯಕ್ರಮದ ದುಆ ನೇತ್ರತ್ವವನ್ನು ನೀಡಲಿದ್ದಾರೆ. ಅಸ್ಸಯ್ಯದ್ ಅಬ್ದುಲ್ ರಹ್ಮಾನ್ ಬಾ-ಅಲವಿ ಸಾದಾತ್ ತಂಗಳ್ ಕುಪ್ಪೆಟ್ಟಿ ಉದ್ಘಾಟನೆ ಯೊಂದಿಗೆ ಚಾಲನೆ ನೀಡಲಿದ್ದಾರೆ. ಮತ್ತು
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ MSM ಅಬ್ದುಲ್ ರಶೀದ್ ಝ್ಯೆನಿ ಕಾಮಿಲ್ ಸಖಾಫಿ ಮಾದರಿ ಮದುವೆ ಬಗ್ಗೆ ವಿಷಯ ಮಂಡಿಸಲಿದ್ದಾರೆ.
ಬೆಳ್ತಂಗಡಿ ಝೋನ್ ವ್ಯಾಪ್ತಿಯ 60 ಮೊಹಲ್ಲಾ ಗಳಿಂದ ಖತೀಬರು, ಜಮಾಅತ್ ಪ್ರತಿನಿದಿಗಳು ಸೇರಿ ಸುಮಾರು 350ರಷ್ಟು ನಾಯಕರುಗಳು ಭಾಗವಹಿಸಲಿದ್ದಾರೆ. ಎಂದು ಝೋನ್ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ