ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮುಸ್ಲಿಂ ಸಮುದಾಯದ ಮದುವೆ ಸಮಾರಂಭ ಶರೀಅತ್ ಮಿತಿ ಮೀರಿ ಹೋಗುತ್ತಿದ್ದು,ದುಂದುವೆಚ್ಚವೂ ಹೆಚ್ಚುತ್ತಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಎಸ್ ವೈ ಎಸ್ ನಡೆಸುವ ಮಾದರಿ ಮದುವೆ ಎಂಬ ಶತದಿನ ಅಭಿಯಾನದ ಪ್ರಯುಕ್ತ ದ.ಕ.ವೆಸ್ಟ್ ಜಿಲ್ಲಾ ಸಮಿತಿ ಡಿಸೆಂಬರ್ 16 ಮಂಗಳವಾರ ಪಂಪ್ವೆಲ್ DKC ಹಾಲ್ ನಲ್ಲಿ ಖತೀಬರಿಗಾಗಿ ‘ಖುತಬಾ ಸಂಗಮ’ ಹಮ್ಮಿಕೊಂಡಿದೆ.
ಖ್ಯಾತ ವಿದ್ವಾಂಸ, ವಾಗ್ಮಿ, ಚಿಂತಕ ಇಬ್ರಾಹೀಂ ಸಖಾಫಿ ಪುಝಕ್ಕಾಟಿರಿ ವಿಷಯ ಮಂಡನೆ ನಡೆಸಲಿದ್ದಾರೆ. ಮೊಹಲ್ಲಾಗಳ ಧಾರ್ಮಿಕ ನಾಯಕತ್ವದ ಮುಂಚೂಣಿಯಲ್ಲಿರುವ ಖತೀಬರುಗಳು ಈ ವಿಚಾರವಾಗಿ ಹೆಚ್ಚಿನ ಮಾಹಿತಿ ಪಡೆದು ಜನರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ಹೊಂದಿರುತ್ತಾರೆ.ಆ ಮೂಲಕ ಸಮಾಜವನ್ನು ಸರಿದಾರಿಗೆ ತರಲು ಸಾಧ್ಯವಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಖತೀಬರು,ಇಮಾಮರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಎಸ್ ಜೆ ಎಂ ಸೌತ್ ಜಿಲ್ಲಾ ಸಮಿತಿ ಕರೆ ನೀಡಿದೆ.

















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ