ಪುತ್ತೂರು: ‘ ಅಶ್ರಫ್ ‘ ಹೆಸರಿನ ವ್ಯಕ್ತಿಗಳ ಕರ್ನಾಟಕ ಒಕ್ಕೂಟದ ಸಭೆ ಇಂದು ಅಧ್ಯಕ್ಷರಾದ ಅಶ್ರಫ್ ಕಲ್ಲೇಗ ಅವರ ನೇತೃತದಲ್ಲಿ ಪುತ್ತೂರಿನ ಗೋಲ್ಡನ್ ಗೇಟ್ ಹಾಲ್ ನಲ್ಲಿ ನಡೆಯಿತು. ಸಭೆಯನ್ನು ಅಶ್ರಫ್ ಬಾಖವಿ ಚಾಪಲ್ಲ ಅವರು ದುವಾ ಮೂಲಕ ನೆರವೇರಿಸಿ, ಅಶ್ರಫ್ ಎಂಬ ಹೆಸರಿನ ಮಹತ್ವ ಮತ್ತು ಅತ್ಯಂತ ಉನ್ನತೀಯನು ಎಂಬ ಇಸ್ಲಾಮೀ ಅರ್ಥೈಸುವಿಕೆ ಬಗ್ಗೆ ವಿವರಿಸಿದರು.
ಮುಖ್ಯ ಅತಿಥಿ ಯಾಗಿದ್ದ ಮಂಗಳೂರು ಮಾಜಿ ಮೇಯರ್ ಕೆ.ಅಶ್ರಫ್ ಮಾತನಾಡಿ ‘ ಅಶ್ರಫ್ ‘ ನಾಮಾಂಕಿತ ಜಿಲ್ಲಾವಾರು ವ್ಯಕ್ತಿಗಳನ್ನು ಹುಡುಕಿ ಒಕ್ಕೂಟದಲ್ಲಿ ಸೇರ್ಪಡಿಸಿ ಜಿಲ್ಲಾ ಮಟ್ಟದ ಕಾರ್ಯಕ್ರಮ ರೂಪಿಸಿ ಸಮಾಜಕ್ಕೆ ಪೂರಕ ಸಹಾಯವಾಗುವ ಕಾರ್ಯ ಯೋಜನೆ ರೂಪೀಕರಿಸಬೇಕು ಎಂದು ಕರೆ ನೀಡಿದರು. ಸಭೆಯಲ್ಲಿ ಕೇರಳ ರಾಜ್ಯ ಅಶ್ರಫ್ ಒಕ್ಕೂಟದ ಮುಖ್ಯಸ್ಥರಾದ ಅಶ್ರಫ್ ಕುಂಞಪ್ಪ, ಅಶ್ರಫ್ ಸೆಂಚುರಿ ಮಂಜೇರಿ ಮಂಡಲ, ಮತ್ತು ಎಮ್ ಕೆ ಎಮ್ ಅಶ್ರಫ್ ಕರ್ನೂರು ಮತ್ತು ಕರ್ನಾಟಕದ ಅಶ್ರಫ್ ಆಲಿ, ಸೋಮಾವಾರ ಪೇಟೆ ಕೊಡಗು, ಅಶ್ರಫ್ ಬಿಳಿಗೆರೆ ಕೊಡಗು. ಅಶ್ರಫ್ ಸಿ. ಎ.ಬಾವ, ಅಶ್ರಫ್ ಸಿಟಿ, ಅಶ್ರಫ್ ಕೊಲ್ಲಮುಡಿ, ಅಶ್ರಫ್ ವಿ. ಏಚ್.ವಿಟ್ಲ, ಅಶ್ರಫ್ ಶೇಡಿ ಗುಂಡಿ, ಅಶ್ರಫ್ ಕಲ್ಲುಗುಂಡಿ ಸುಳ್ಯ, ಅಶ್ರಫ್ ಮಂಚಿ, ಅಶ್ರಫ್ ಕೌನ್ಸಿಲರ್ ವಿಟ್ಲ, ಅಶ್ರಫ್ ಕಳಂಜ ಬೆಳ್ಳಾರೆ.ಅಶ್ರಫ್ ಜೆಸಿಬಿ ಮುಕ್ವೆ. ಅಶ್ರಫ್ ಸಿ. ಎಮ್ ಉಳ್ಳಾಲ, ಅಶ್ರಫ್ ಮಾಸ್ಟರ್, ಅಶ್ರಫ್ ಎಟಿಎಂ, ಅಶ್ರಫ್ ಪರ್ತಿಪ್ಪಾಡಿ, ಅಶ್ರಫ್ CH ಪುತ್ತೂರು, ಅಶ್ರಫ್ ಕಳೆಂಬಿ, ಅಡ್ವೊಕೇಟ್ ಪತ್ರಕರ್ತ ಮೊಹಮ್ಮದ್ ಹನೀಫ್. ಯು. ಮತ್ತಿತರರು ಉಪಸ್ಥಿತರಿದ್ದರು.ಉಪಾಧ್ಯಕ್ಷರಾದ ಅಶ್ರಫ್ ಆಗ್ನಾಡಿ ವಕೀಲರು ಕಾರ್ಯಕ್ರಮ ನಿರೂಪಿಸಿದರು.
ಅಶ್ರಫ್ ಕರ್ನಾಟಕ ಒಕ್ಕೂಟ, ಎಂಬುದು ಕರ್ನಾಟಕ ರಾಜ್ಯದ ಅಶ್ರಫ್ ನಾಮಾಂಕಿತ ವ್ಯಕ್ತಿಗಳ ಒಟ್ಟು ಸೇರುವಿಕೆ ಮತ್ತು ಸೇವಾ ಉದ್ದೇಶ ಹೊಂದಿದ್ದು, ನೆರೆರಾಜ್ಯ ಕೇರಳದಲ್ಲಿ ಅಶ್ರಫ್ ಕೂಟಾಯಿಮಾ ಎಂಬ ಹೆಸರಲ್ಲಿ ಹಿಂದಿನ ವರ್ಷಗಳಲ್ಲಿ ಸಮಾವೇಶ ನಡೆಸಿ ಯಶಸ್ವಿ ಪ್ರಯೋಗ ನಡೆಸಿದ್ದು ಇಲ್ಲಿ ಗಮನಾರ್ಹ ಎಂದು ಒಕ್ಕೂಟ ಸಭೆಯಲ್ಲಿ ಪ್ರಸ್ತಾಪ ವಾಗಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ