ರಿಯಾದ್: ಸೌದಿ ಅರೇಬಿಯಾದಲ್ಲಿ ಪವಿತ್ರ ರಂಜಾನ್ ತಿಂಗಳ ಆಗಮನದ ಮುಂಚಿತವಾಗಿ ಮಸೀದಿಗಳಿಗೆ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಂಜಾನ್ ಸಮಯದಲ್ಲಿ ವಿಶ್ವಾಸಿಗಳಿಗೆ ಸುರಕ್ಷಿತ ಮತ್ತು ಆಧ್ಯಾತ್ಮಿಕ ವಾತಾವರಣವನ್ನು ಒದಗಿಸುವ ಪ್ರಯತ್ನಗಳ ಭಾಗವಾಗಿ ಈ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಉಮ್ ಅಲ್-ಖುರಾ ಕ್ಯಾಲೆಂಡರ್ ಪ್ರಕಾರ ಪ್ರಾರ್ಥನೆ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಇಶಾ-ಫಜ್ರ್ ಅಝಾನ್ ನಂತರ ಕೇವಲ 15 ನಿಮಿಷಗಳ ಬಳಿಕವೇ ನಮಾಜ್ ಪ್ರಾರಂಭಿಸಬೇಕು ಎಂದು ಶಿಫಾರಸು ಮಾಡಲಾಗಿದೆ. ಮಸೀದಿ ನೌಕರರ ಹಾಜರಾತಿಯನ್ನು ಕಡ್ಡಾಯಗೊಳಿಸಿರುವ ಸಚಿವಾಲಯ, ರಜೆ ಅಗತ್ಯವಿರುವವರು ಮುಂಚಿತವಾಗಿ ಬದಲಿಗಳನ್ನು ನೇಮಿಸಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದೆ. ರಂಜಾನ್ನ ಕೊನೆಯ ಹತ್ತು ದಿನಗಳ ಖಿಯಾಮುಲ್ಲೈಲಿ (ರಾತ್ರಿ ನಮಾಜ್)ಯನ್ನು ಬೆಳಗಿನ ಜಾವದ ಮುಂಚಿತವಾಗಿ ವಿಶ್ವಾಸಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.
ಮಸೀದಿಗಳಲ್ಲಿ ಇಅ್ತಿಕಾಫ್ನಲ್ಲಿ ಕುಳಿತುಕೊಳ್ಳುವವರು ಸರಿಯಾಗಿ ನೋಂದಾಯಿಸಿಕೊಳ್ಳಬೇಕು ಮತ್ತು ಅವರು ವಿದೇಶಿಯರಾಗಿದ್ದರೆ, ಪ್ರಾಯೋಜಕರ ಅನುಮತಿ ಪತ್ರವನ್ನು ಹೊಂದಿರಬೇಕು ಎಂದು ಸಚಿವಾಲಯ ತಿಳಿಸಿದೆ. ಮಸೀದಿ ಆವರಣದಲ್ಲಿ ಭಿಕ್ಷಾಟನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಯಾವುದೇ ಉಲ್ಲಂಘನೆಗಳು ಕಂಡುಬಂದರೆ ನೌಕರರು ತಕ್ಷಣ ಭದ್ರತಾ ಅಧಿಕಾರಿಗಳಿಗೆ ತಿಳಿಸಬೇಕು. ಸಚಿವಾಲಯವು ಮಸೀದಿಗಳ ದೈನಂದಿನ ತಪಾಸಣೆ ನಡೆಸುತ್ತದೆ ಮತ್ತು ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ