ಉಳ್ಳಾಲ,ಜ.25: ಕಿನ್ಯಾ ಗ್ರಾಮದ ಕೇಂದ್ರ ಜುಮಾ ಮಸೀದಿಯ ಸನಿಹದಲ್ಲೇ ಯಶಸ್ವಿ ಕಾರ್ಯಾಚರಣೆಯೊಂದಿಗೆ ಮುನ್ನುಗ್ಗುತ್ತಿರುವ “ಗೋಲ್ಡನ್ ಹೆಲ್ತ್ ಫೌಂಡೇಶನ್ (ರಿ)”(ಆರೋಗ್ಯ ಮತ್ತು ವೈದ್ಯಕೀಯ ಸೇವಾ ಸಂಸ್ಥೆ) ಇದರ ನಾಯಕರು ಇಂದು ಕರ್ನಾಟಕ ವಿಧಾನಸಭೆಯ ಗೌರವಾನ್ವಿತ ಸ್ಪೀಕರ್ ಸನ್ಮಾನ್ಯ ಡಾ| ಯು.ಟಿ.ಖಾದರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.
ಸಂಸ್ಥೆಯ ಸ್ವಂತ ನಿವೇಶನದಲ್ಲಿ ಚಾರಿಟಿ ಆರೋಗ್ಯ ಕೇಂದ್ರ ಒಂದನ್ನು ಸ್ಥಾಪಿಸುವ ಸಲುವಾಗಿ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿಯ ಆರಂಭಿಕ ಹಂತವಾದ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ, ಸಂಸ್ಥೆಯ ಐದನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ವಿವಿಧ ವೈದ್ಯಕೀಯ ಸೇವಾ ಕಾರ್ಯಕ್ರಮಗಳ ಅನಾವರಣ ಕಾರ್ಯಕ್ರಮವು 2026 ಏಪ್ರಿಲ್ 5 ನೇ ತಾರೀಕು ಆದಿತ್ಯವಾರ
ನಡೆಯಲಿದೆ. ಸಂಸ್ಥೆಯ ಮಟ್ಟಿಗೆ ಅತ್ಯಂತ ಮಹತ್ತರವಾದ ಈ ಕಾರ್ಯಕ್ರಮಕ್ಕೆ
ಕರ್ನಾಟಕ ರಾಜ್ಯ ವಿಧಾನಸಭೆಯ ಘನವೆತ್ತ ಸ್ಪೀಕರ್ ಸನ್ಮಾನ್ಯ ಡಾ. ಯು. ಟಿ. ಖಾದರ್ ಸರ್
ರವರನ್ನು ಆಹ್ವಾನಿಸಲಾಯಿತು.
ಸನ್ಮಾನ್ಯ ಸ್ಪೀಕರ್ ರವರು ಸಂಸ್ಥೆಯ ಆರೋಗ್ಯ ಮತ್ತು ವೈದ್ಯಕೀಯ ಸೇವಾ ಚಟುವಟಿಕೆಗಳ ಕಳೆದ ಐದು ವರ್ಷಗಳ ವಿವರಗಳನ್ನು ಪಡೆದು ಅತೀವ ಸಂತೋಷವನ್ನು ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ತನ್ನ ವತಿಯಿಂದ ಹಲವು ವೈದ್ಯಕೀಯ ಯೋಜನೆಗಳನ್ನು ತಮ್ಮ ಸಂಸ್ಥೆಯ ಮೂಲಕ ಮಾಡಿಸಿ ಕೊಡುವುದಾಗಿ ಭರವಸೆಯನ್ನು ನೀಡಿದರು.
ನಿಯೋಗದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಮೂಸಾ ಅಬ್ಬಾಸ್ ಕುರಿಯಕ್ಕಾರ್, ಖಜಾಂಜಿಯವರಾದ ಹಾಜಿ ಅಬೂಬಕರ್ ಕಲ್ಲಾಂಡ, ಕಾರ್ಯದರ್ಶಿ ಅಬ್ದುಲ್ ಸಮದ್ ಕಿನ್ಯ, ಸಂಸ್ಥೆಯ ಸಂಚಾಲಕರಾದ
ಹಾಜಿ ಇಸ್ಮಾಯಿಲ್ ಪರಮಾಂಡ, ಜನಾಬ್ ಹಮೀದ್ ಕಿನ್ಯ, ಹಾಜಿ ಅಬ್ಬಾಸ್ ಫಿರೋಝ್ ಕಿನ್ಯ ಹಾಗೂ ಸಂಸ್ಥೆಯ ಸದಸ್ಯರಾದ ಜನಾಬ್ PSK ಇಬ್ರಾಹಿಂ ಪಾಲ್ಗೊಂಡಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ