ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ದಮ್ಮಾಂ ವಲಯ ಅಧೀನದ ಜುಬೈಲ್ ಘಟಕದ ಮಹಾಸಭೆಯು ದಿನಾಂಕ 30, ಜನವರಿ 2026 ಶುಕ್ರವಾರ ಅಧ್ಯಕ್ಷರಾದ ಮುಹಮ್ಮದ್ ಅಲಿ ಕೃಷ್ಣಾಪುರ ಅವರ ಅಧ್ಯಕ್ಷತೆಯಲ್ಲಿ ಜುಬೈಲ್ ನಲ್ಲಿ ಜರಗಿತು.


ಜಾಫರ್ ಮುಂಡ್ಕೂರ್ ವಾರ್ಷಿಕ ವರದಿಯನ್ನು ಹಾಗೂ ಹಣಕಾಸು ಕಾರ್ಯದರ್ಶಿ ಅನ್ವರ್ ಪಡುಬಿದ್ರಿ ಯವರು ಪ್ರವರ್ತನಾ ವರದಿಯನ್ನು ಸಭೆಯಲ್ಲಿ ಮಂಡಿಸಿ ಸಭೆಯ ಅನುಮೋದನೆಯನ್ನು ಪಡೆದರು. ಡಿಕೆಯಸ್ಸಿ ದಮ್ಮಾಂ ವಲಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರೋಯಲ್ ಮುಕ್ವೆ ನೇತ್ರತ್ವದಲ್ಲಿ 2026-27 ನೇ ಸಾಲಿಗೆ ನೂತನ ಸಮಿತಿ ರಚಿಸಲಾಯಿತು.


ಮುಸ್ತಫಾ ಮೈನ ರವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಅನ್ವರ್ ಪಡುಬಿದ್ರಿ ಮತ್ತು ಜಾಫರ್ ಮುಂಡ್ಕೂರ್ ,ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಶ್ತಾಖ್ ಮಜ್ವಾನ ,ಕಾರ್ಯದರ್ಶಿಗಳಾಗಿ ಅಬ್ದುಲ್ ಹಕೀಮ್ ನೆಕ್ಕರೆ ,ಉಬೈದ್ ಸುರಿಬೈಲ್ ಮತ್ತು ಯಹ್ಯಾ ಕೆಸಿ ರೊಡ್ ರವರನ್ನು ,ಮತ್ತು ಹಣಕಾಸು ಕಾರ್ಯದರ್ಶಿ ಯಾಗಿ ಶಮೀರ್ ಪಲಿಮಾರ್ , ಸಮಿತಿಯ ಅಭಿವೃದ್ಧಿ ಅಧ್ಯಕ್ಷರಾಗಿ ಮುಹಮ್ಮದ್ ಅಲಿ ಕೃಷ್ಣಾಪುರ ಮತ್ತು ಸಂವಹನ ಕಾರ್ಯದರ್ಶಿಯಾಗಿ ಅಶ್ರಫ್ ನಾಳ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯ್ತು.
ಡಿಕೆಯಸ್ಸಿ ಕೇಂದ್ರ ಸಮಿತಿ ದಾಯಿ ಅಬ್ದುರ್ರಶೀದ್ ಸಅದಿ ದುಆ ನೆರವೇರಿಸಿದರು. ಡಿಕೆಯಸ್ಸಿ ದಮ್ಮಾಂ ವಲಯ ಆರ್ಗನೈಝರ್ ಝುಬೈರ್ ಸಖಾಫಿ ಯವರು ಖಿರಾಅತ್ ಪಠಿಸಿದರು. ಅನ್ವರ್ ಪಡುಬಿದ್ರಿ ಸ್ವಾಗತಿಸಿದರು.
ಈ ಕೆಳಗಿನ ಸದಸ್ಯರನ್ನು ಪ್ರಧಾನ ಸಲಹೆಗಾರನ್ನಾಗಿ ನೇಮಿಸಲಾಯಿತು .
ಕೆ ಎಚ್. ರಫೀಖ್ ಸೂರಿಂಜೆ
ಸುಲೈಮಾನ್ ಮಿಲನ್ ಸೂರಿಂಜೆ
ಅಬ್ದುಲ್ ಹಮೀದ್ ಉಳ್ಳಾಲ್
ಅಬ್ದುಲ್ ಹಮೀದ್ ಕಾಪು
ಅಬ್ದುಲ್ ಕರೀಂ ಪಾಣೆಮಂಗಳೂರು
ಹಾತಿಂ ಕೂಳೂರು
ಅಬೂಬಕ್ಕರ್ ಬರ್ವ
ಇಖ್ಬಾಲ್ ಮಲ್ಲೂರ್.
ಕೊನೆಯಲ್ಲಿ ಶಾಫಿ ಶುಐಬ್ ವಂದಿಸಿದರು .
DKSC ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಕಣ್ಣಂಗಾರ್, ದಮ್ಮಾಮ್ ವಲಯಾಧ್ಯಕ್ಷ ಅಬ್ದುಲ್ ಹಮೀದ್ ಕಾಪು, ಉಸ್ಮಾನ್ ಹೊಸಂಗಡಿ, ಜುಬೈಲ್ ಯೂತ್ ವಿಂಗ್ ಸಾಮಿತ್ ಪಡುಬಿದ್ರಿ, ದಮ್ಮಾಂ ಘಟಕ ಅಧ್ಯಕ್ಷ ಜಮಾಲ್ ಸ್ವಾಲಿಹ್ ಕಣ್ಣಂಗಾರ್, ತುಖ್ಬ ಘಟಕದ ಅಧ್ಯಕ್ಷ ಜೆಪ್ಪು ಮುಹಮ್ಮದ್ ಹನೀಫ್ ಸಭೆಯಲ್ಲಿ ಉಪಸ್ಥಿತರಿದ್ದರು .
ಡಿಕೆಯಸ್ಸಿ ದಮ್ಮಾಂ, ಅಲ್ ಖೋಬರ್, ತುಖ್ಬ, ಜುಬೈಲ್, ಫ್ಯಾಮಿಲಿ ಮುಲಾಖಾತ್ ಸಮಿತಿ ಮತ್ತು ಜುಬೈಲ್ ಯೂತ್ ವಿಂಗ್ ಘಟಕದ ಸದಸ್ಯರು ಸಮಾರಂಭದಲ್ಲಿ ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ