ಬೆಳ್ತಂಗಡಿ; ಉಳ್ತೂರು ಮುಹಿಯುದ್ದೀನ್ ಜುಮಾ ಮಸ್ಜಿದ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮುರ್ಶಿದುಲ್ ಅನಾಂ ದರ್ಸ್ ಉಳ್ತೂರು ಇದರ ದರ್ಸ್ ವಾರ್ಷಿಕ, ಉನ್ನತ ವಿದ್ಯಾಭ್ಯಾಸಕ್ಕಾಗಿ ಯೂನಿವರ್ಸಿಟಿಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡಿಗೆ ಹಾಗೂ ಮರ್ಹೂಂ ಮುಹಮ್ಮದ್ ಫಾಳಿಲಿ ಅನುಸ್ಮರಣೆಯು ಜಮಾಅತ್ ಅಧ್ಯಕ್ಷರಾದ ಕೆ.ಎಚ್ ಅಝೀಝುದ್ದೀನ್ ರವರ ಅಧ್ಯಕ್ಷತೆಯಲ್ಲಿ ಮಸ್ಜಿದ್ ವಠಾರದಲ್ಲಿ ನಡೆಯಿತು.

ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಬಾಅಲವಿ ರವರು ಅನುಸ್ಮರಣೆಗೆ ನೇತೃತ್ವ ನೀಡಿ ದುಆಶೀರ್ವಚನ ನೀಡಿದರು. ಪಾಂಡಿಯಾಳ್ ಮುದರ್ರಿಸ್ ಉಸ್ತಾದ್ ಐ.ಎಂ.ಉಮರ್ ಅಹ್ಸನಿ ಇನೋಳಿ ಸಭೆಯನ್ನು ಉದ್ಘಾಟಿಸಿದರು. ಉಳ್ತೂರು ಮುದರ್ರಿಸ್ ಮುಹಮ್ಮದ್ ತೌಸೀಫ್ ಸಅದಿ ಹರೇಕಳ ರವರು ದಿಕ್ಸೂಚಿ ಭಾಷಣ ಮಾಡಿದರು. ಖ್ಯಾತ ವಾಗ್ಮಿ ಹಂಝ ಮಿಸ್ಬಾಹಿ ಓಟ್ಟಪಡವು ಮುಖ್ಯ ಭಾಷಣ ಮಾಡಿದರು. ಬಶೀರ್ ಲತೀಫಿ ಮದ್ದಡ್ಕ, ನೆಲ್ವಿಸ್ಟರ್ ಪಿಂಟೋ, ಚಂದ್ರಶೇಖರ್ ಭಟ್ ಮಾತನಾಡಿದರು. ಈ ಸಂದರ್ಭದಲ್ಲಿ ಉನ್ನತ ವಿದ್ಯಾಭ್ಯಾಸಕ್ಕಾಗಿ ಯೂನಿವರ್ಸಿಟಿಗಳಿಗೆ ತೆರಳುವ ವಿದ್ಯಾರ್ಥಿಗಳಾದ ಸಾಬಿತ್ ಎಮ್ಮೆಮ್ಮಾಡು, ಝೈನುಲ್ ಆಬಿದ್ ಕನಕಮಜಲು, ಹಾಶಿರ್ ಕೊಯ್ಯೂರು ರವರಿಗೆ ಬೀಳ್ಕೊಡಿಗೆ ನೀಡಲಾಯಿತು.
ಸಯ್ಯಿದ್ ಮುಸ್ತಫ ತಂಙಳ್ ಉಳ್ತೂರು, ಸಯ್ಯಿದ್ ಶರಪುದ್ದೀನ್ ತಂಙಳ್ ವೇಣೂರು, ನವಾಝ್ ಸಅದಿ ಕಕ್ಕೆಪದವು, ನಈಮುದ್ದೀನ್ ಅಝ್ಹರಿ ಪಿಲ್ಯ, ಪಿ.ಎ ಮುಹಮ್ಮದ್ ಮುಸ್ಲಿಯಾರ್ ಉಳ್ತೂರು, ತಾಜುದ್ದೀನ್ ಸಖಾಫಿ ಪುಲಾಬೆ, ಮನ್ಸೂರ್ ಸಖಾಫಿ ಕಬಕ ಗೋಳಿಯಂಗಡಿ, ಯು. ಅಬ್ಬಾಸ್ ಹಾಜಿ, ಯು.ಎಂ ಅಬ್ದುರಹ್ಮಾನ್, ಯು.ಎಂ ಸಯ್ಯದ್ ಹಸನ್, ಯು.ಎಚ್ ಇಬ್ರಾಹಿಂ, ಪಿ.ಇಸ್ಮಾಈಲ್ ಶಾಂತಿನಗರ, ಬಿ.ಮುಹಮ್ಮದ್, ರಶೀದ್ ಮಡಂತ್ಯಾರ್, ಸಯ್ಯಿದ್ ಸಲೀತ್ ತಂಙಳ್, ತೌಫೀಕ್ ವೇಣೂರು ಮುಂತಾದವರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಮುಈನಿ ಸ್ವಾಗತಿಸಿ, ಕೆ.ಎಚ್ ಸಿರಾಜುದ್ದೀನ್ ಝುಹ್ರಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ