ನವದೆಹಲಿ : ಹುಟ್ಟದೇ ಇರುವ ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ ಎಂದು ಹೇಳಿರುವ ಸುಪ್ರೀಂಕೋರ್ಟ್ ನ್ಯಾಯಪೀಠ, ಇಷ್ಟ ಇಲ್ಲದಿದ್ರೆ ತಾಯಿಯಾಗಬಾರದು ಎಂದು ಅಪ್ರಾಪ್ತೆಯ 30 ವಾರಗಳ ಗರ್ಭವನ್ನು ಕೊನೆಗೊಳಿಸಲು ಅನುಮತಿ ನೀಡಿದೆ.
ತನ್ನ ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ಮಹಿಳೆಗೆ ನ್ಯಾಯಾಂಗ ಒತ್ತಾಯಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್, ಅಪ್ರಾಪ್ತ ವಯಸ್ಸಿನ ಬಾಲಕಿಯ 30 ವಾರಗಳ ಗರ್ಭವನ್ನು ವೈದ್ಯಕೀಯವಾಗಿ ಕೊನೆಗೊಳಿಸಲು ಅನುಮತಿ ನೀಡಿದೆ.
ಬಾಲಕಿ ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಗರ್ಭ ಧರಿಸಿದ್ದಳು. ಪ್ರಸ್ತುತ ಅವಳು ಗರ್ಭವನ್ನು ಮುಂದುವರಿಸಲು ಬಯಸುತ್ತಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಲಯವು, ಆಕೆಯ ಪುನರುತ್ಪಾದಕ ಸ್ವಾಯತ್ತತೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಒತ್ತಿ ಹೇಳಿತು. ಆಕೆಯ ಇಚ್ಛೆಯ ವಿರುದ್ಧ ಗರ್ಭವನ್ನು ಮುಂದುವರಿಸಲು ಒತ್ತಾಯಿಸಲಾಗದು ಎಂದು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ದ್ವಿಸದಸ್ಯ ಪೀಠವು ಆದೇಶ ನೀಡಿದೆ.
ಬಾಲಕಿ ಅಪ್ರಾಪ್ತೆಯಾಗಿದ್ದಾಗ ಯುವಕನೊಂದಿಗಿನ ಸಂಬಂಧದಲ್ಲಿ ಗರ್ಭ ಧರಿಸಿದ್ದಳು. ಇದು ಸಮ್ಮತಿಯಿಂದ ಆಗಿರಲಿ ಅಥವಾ ಇಲ್ಲದಿರಲಿ, ಬಾಲಕಿ ಮಗುವನ್ನು ಹೊರುವ ಇಚ್ಛೆಯನ್ನು ಮದುವೆಯಾದ ಮಹಿಳೆಯಾಗಲಿ, ಮದುವೆಯಾಗದ ಯುವತಿಯಾಗಲಿ ಅಥವಾ ಅಪ್ರಾಪ್ತಿಯೇ ಆಗಲಿ ಅನಗತ್ಯ ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಕಾನೂನಿಗೂ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅರ್ಜಿ ಸಲ್ಲಿಸಿರುವ ಅಪ್ರಾಪ್ತ ಯುವತಿಯ ವಯಸ್ಸು ಮತ್ತು ಆಕೆಯ ಹಕ್ಕನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಪು ನೀಡಲಾಗಿದೆ. ಈ ಪ್ರಕರಣದಲ್ಲಿ ಆ ಯುವತಿಯದ್ದು ಉದ್ದೇಶಪೂರ್ವಕವಾದ ಗರ್ಭಧಾರಣೆ ಅಲ್ಲದ ಕಾರಣದಿಂದ ಮತ್ತು ಆ ಹುಡುಗಿ ಮಗುವನ್ನು ಹೆರಲು ಬಯಸದ ಕಾರಣದಿಂದ ಆಕೆಗೆ ಗರ್ಭಪಾತಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕೋರ್ಟ್ ಹೇಳಿದೆ.
ಹುಡುಗಿ 17ನೇ ವಯಸ್ಸಿನಲ್ಲಿ ಗರ್ಭ ಧರಿಸಿದ್ದಳು. ಆಕೆಗೆ ಈಗ 18 ವರ್ಷ. ಈಗ ಆಕೆಯ ಗರ್ಭಧಾರಣೆಯು 30 ವಾರಗಳನ್ನು ತಲುಪಿತ್ತು. ಸ್ನೇಹಿತನೊಂದಿಗಿನ ಸಂಬಂಧದಿಂದ ಆಕೆ ಗರ್ಭಿಣಿಯಾಗಿದ್ದು, ಮದುವೆಯಾಗದೆ ಗರ್ಭಧಾರಣೆಯನ್ನು ಮುಂದುವರಿಸುವುದು ಆ ಹುಡುಗಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಆಘಾತಕಾರಿಯಾಗಿದೆ ಎಂದು ವಾದಿಸಲಾಗಿತ್ತು. ಹೀಗಾಗಿ, ಬಾಲಕಿಗೆ ಗರ್ಭಪಾತ ಮಾಡಿಸಲು ಅನುಮತಿ ನೀಡಲಾಗಿದೆ.
ಭಾರತದ ಕಾನೂನಿನಲ್ಲಿ ಗರ್ಭಪಾತಕ್ಕೆ ಅನುಮತಿ ಇದೆಯೇ?
ಭಾರತದಲ್ಲಿ ಗರ್ಭಪಾತಕ್ಕೆ ಅನುಮತಿಯಿದೆ. 1971ರ ಮೆಡಿಕಲ್ ಟರ್ಮಿನೇಷನ್ ಆಫ್ ಪ್ರೆಗ್ನೆನ್ಸಿ ಕಾಯ್ದೆ ಪ್ರಕಾರ ಮಹಿಳೆಗೆ ಸುರಕ್ಷಿತ ಗರ್ಭಪಾತಕ್ಕೆ ಅನುಮತಿ ನೀಡಿದೆ.
ಕೆಲವೊಂದು ಸಂದರ್ಭದಲ್ಲಿ ಮಹಿಳೆ 24 ವಾರಗಳ ಗರ್ಭಿಣಿಯಾದರೂ ಗರ್ಭಪಾತ ಮಾಡಿಸಬಹುದು. ಇನ್ನು ತಾಯಿಯ ಪ್ರಾಣಕ್ಕೆ ಅಪಾಯವಿದ್ದಾಗ ಅಥವಾ ಮಗುವಿನಲ್ಲಿ ನ್ಯೂನತೆಯಿದ್ದಾಗ ಯಾವುದೇ ತಿಂಗಳಿನಲ್ಲಿ ಗರ್ಭಪಾತ ನೀಡಲು ಅನುಮತಿ ಇದೆ.
ಅತ್ಯಾಚಾರದಿಂದ ಗರ್ಭಿಣಿಯಾದರೆ ಆ ಗರ್ಭವನ್ನು ತೆಗೆದು ಹಾಕಲು ಅನುಮತಿ ನೀಡಲಾಗುವುದು. ಅಪ್ರಾಪ್ತ ಗರ್ಭಿಣಿಯಾದರೆ ಆ ಗರ್ಭವನ್ನು ತೆಗೆಸಲು ಅನುಮತಿ ನೀಡಲಾಗುವುದು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ತಬೂಕ್ ಘಟಕದ ವಾರ್ಷಿಕ ಮಹಾಸಭೆ
ಪಶ್ಚಿಮ ಏಷ್ಯಾ ಬಿಕ್ಕಟ್ಟು: ಗಲ್ಫ್ ರಾಷ್ಟ್ರಗಳಿಂದ 8.43 ಲಕ್ಷ ಭಾರತೀಯರು ವಾಪಸ್
ಶಾಫಿ ಸಅದಿ ವಿರುದ್ಧ ಸುಳ್ಳು ಸುದ್ದಿ ಪ್ರಕಟ: ‘ಮಿನಾರಂ’ ಡಿಜಿಟಲ್ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ
ಎಪ್ರಿಲ್ 12: ಮಾದರಿ ಮದುವೆ ಅಭಿಯಾನ ಸಮಾರೋಪದ ಪ್ರಚಾರಾರ್ಥ ಸಾಂಘಿಕ ನಾಯಕರ ಸಭೆ
ಕಾಟಿಪಳ್ಳ: ನೂತನ ಮದ್ರಸ ಕಟ್ಟಡ ಉದ್ಘಾಟನಾ ಸಮಾರಂಭ- ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮ
ಶರಫುಲ್ ಉಲಮಾ 7ನೇ ವಾರ್ಷಿಕ ಅನುಸ್ಮರಣೆ- ಮೇ 13, 14 ರಂದು ವಿವಿಧ ಕಾರ್ಯಕ್ರಮ
ಬಶೀರ್ ಕಿನ್ಯ ಅವರಿಗೆ ಸಮ್ಮೇಳನಾಧ್ಯಕ್ಷತೆಯ ಗೌರವ: ಸಾಹಿತ್ಯ ಲೋಕದ ಬಹುಭಾಷಾ ಪಂಡಿತನಿಗೆ ಒಲಿದ ಮನ್ನಣೆ
ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಪ್ರಯಾಣ- ಐತಿಹಾಸಿಕ ‘ಮಕ್ಕಳ ಸ್ನೇಹಿ ಸಾರಿಗೆ’ ಯೋಜನೆ ಸಿದ್ಧ
ಕಿನ್ಯಾ ‘ಗೋಲ್ಡನ್ ಹೆಲ್ತ್’ ಶಿಲಾನ್ಯಾಸ: ರೋಗ ಬರದಂತೆ ತಡೆಯುವ ಜನಜಾಗೃತಿ ಇಂದಿನ ಅಗತ್ಯ- ಸ್ಪೀಕರ್ ಯು.ಟಿ. ಖಾದರ್
ಡಿಕೆಎಸ್ಸಿ ಅಲ್-ಖೋಬರ್ ಘಟಕ: ಮಾಸಿಕ ಸಭೆ ಹಾಗೂ ಗಣ್ಯರಿಗೆ ಸನ್ಮಾನ