ನವದೆಹಲಿ : ಹುಟ್ಟದೇ ಇರುವ ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ ಎಂದು ಹೇಳಿರುವ ಸುಪ್ರೀಂಕೋರ್ಟ್ ನ್ಯಾಯಪೀಠ, ಇಷ್ಟ ಇಲ್ಲದಿದ್ರೆ ತಾಯಿಯಾಗಬಾರದು ಎಂದು ಅಪ್ರಾಪ್ತೆಯ 30 ವಾರಗಳ ಗರ್ಭವನ್ನು ಕೊನೆಗೊಳಿಸಲು ಅನುಮತಿ ನೀಡಿದೆ.
ತನ್ನ ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ಮಹಿಳೆಗೆ ನ್ಯಾಯಾಂಗ ಒತ್ತಾಯಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್, ಅಪ್ರಾಪ್ತ ವಯಸ್ಸಿನ ಬಾಲಕಿಯ 30 ವಾರಗಳ ಗರ್ಭವನ್ನು ವೈದ್ಯಕೀಯವಾಗಿ ಕೊನೆಗೊಳಿಸಲು ಅನುಮತಿ ನೀಡಿದೆ.
ಬಾಲಕಿ ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಗರ್ಭ ಧರಿಸಿದ್ದಳು. ಪ್ರಸ್ತುತ ಅವಳು ಗರ್ಭವನ್ನು ಮುಂದುವರಿಸಲು ಬಯಸುತ್ತಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಲಯವು, ಆಕೆಯ ಪುನರುತ್ಪಾದಕ ಸ್ವಾಯತ್ತತೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಒತ್ತಿ ಹೇಳಿತು. ಆಕೆಯ ಇಚ್ಛೆಯ ವಿರುದ್ಧ ಗರ್ಭವನ್ನು ಮುಂದುವರಿಸಲು ಒತ್ತಾಯಿಸಲಾಗದು ಎಂದು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ದ್ವಿಸದಸ್ಯ ಪೀಠವು ಆದೇಶ ನೀಡಿದೆ.
ಬಾಲಕಿ ಅಪ್ರಾಪ್ತೆಯಾಗಿದ್ದಾಗ ಯುವಕನೊಂದಿಗಿನ ಸಂಬಂಧದಲ್ಲಿ ಗರ್ಭ ಧರಿಸಿದ್ದಳು. ಇದು ಸಮ್ಮತಿಯಿಂದ ಆಗಿರಲಿ ಅಥವಾ ಇಲ್ಲದಿರಲಿ, ಬಾಲಕಿ ಮಗುವನ್ನು ಹೊರುವ ಇಚ್ಛೆಯನ್ನು ಮದುವೆಯಾದ ಮಹಿಳೆಯಾಗಲಿ, ಮದುವೆಯಾಗದ ಯುವತಿಯಾಗಲಿ ಅಥವಾ ಅಪ್ರಾಪ್ತಿಯೇ ಆಗಲಿ ಅನಗತ್ಯ ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಕಾನೂನಿಗೂ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅರ್ಜಿ ಸಲ್ಲಿಸಿರುವ ಅಪ್ರಾಪ್ತ ಯುವತಿಯ ವಯಸ್ಸು ಮತ್ತು ಆಕೆಯ ಹಕ್ಕನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಪು ನೀಡಲಾಗಿದೆ. ಈ ಪ್ರಕರಣದಲ್ಲಿ ಆ ಯುವತಿಯದ್ದು ಉದ್ದೇಶಪೂರ್ವಕವಾದ ಗರ್ಭಧಾರಣೆ ಅಲ್ಲದ ಕಾರಣದಿಂದ ಮತ್ತು ಆ ಹುಡುಗಿ ಮಗುವನ್ನು ಹೆರಲು ಬಯಸದ ಕಾರಣದಿಂದ ಆಕೆಗೆ ಗರ್ಭಪಾತಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕೋರ್ಟ್ ಹೇಳಿದೆ.
ಹುಡುಗಿ 17ನೇ ವಯಸ್ಸಿನಲ್ಲಿ ಗರ್ಭ ಧರಿಸಿದ್ದಳು. ಆಕೆಗೆ ಈಗ 18 ವರ್ಷ. ಈಗ ಆಕೆಯ ಗರ್ಭಧಾರಣೆಯು 30 ವಾರಗಳನ್ನು ತಲುಪಿತ್ತು. ಸ್ನೇಹಿತನೊಂದಿಗಿನ ಸಂಬಂಧದಿಂದ ಆಕೆ ಗರ್ಭಿಣಿಯಾಗಿದ್ದು, ಮದುವೆಯಾಗದೆ ಗರ್ಭಧಾರಣೆಯನ್ನು ಮುಂದುವರಿಸುವುದು ಆ ಹುಡುಗಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಆಘಾತಕಾರಿಯಾಗಿದೆ ಎಂದು ವಾದಿಸಲಾಗಿತ್ತು. ಹೀಗಾಗಿ, ಬಾಲಕಿಗೆ ಗರ್ಭಪಾತ ಮಾಡಿಸಲು ಅನುಮತಿ ನೀಡಲಾಗಿದೆ.
ಭಾರತದ ಕಾನೂನಿನಲ್ಲಿ ಗರ್ಭಪಾತಕ್ಕೆ ಅನುಮತಿ ಇದೆಯೇ?
ಭಾರತದಲ್ಲಿ ಗರ್ಭಪಾತಕ್ಕೆ ಅನುಮತಿಯಿದೆ. 1971ರ ಮೆಡಿಕಲ್ ಟರ್ಮಿನೇಷನ್ ಆಫ್ ಪ್ರೆಗ್ನೆನ್ಸಿ ಕಾಯ್ದೆ ಪ್ರಕಾರ ಮಹಿಳೆಗೆ ಸುರಕ್ಷಿತ ಗರ್ಭಪಾತಕ್ಕೆ ಅನುಮತಿ ನೀಡಿದೆ.
ಕೆಲವೊಂದು ಸಂದರ್ಭದಲ್ಲಿ ಮಹಿಳೆ 24 ವಾರಗಳ ಗರ್ಭಿಣಿಯಾದರೂ ಗರ್ಭಪಾತ ಮಾಡಿಸಬಹುದು. ಇನ್ನು ತಾಯಿಯ ಪ್ರಾಣಕ್ಕೆ ಅಪಾಯವಿದ್ದಾಗ ಅಥವಾ ಮಗುವಿನಲ್ಲಿ ನ್ಯೂನತೆಯಿದ್ದಾಗ ಯಾವುದೇ ತಿಂಗಳಿನಲ್ಲಿ ಗರ್ಭಪಾತ ನೀಡಲು ಅನುಮತಿ ಇದೆ.
ಅತ್ಯಾಚಾರದಿಂದ ಗರ್ಭಿಣಿಯಾದರೆ ಆ ಗರ್ಭವನ್ನು ತೆಗೆದು ಹಾಕಲು ಅನುಮತಿ ನೀಡಲಾಗುವುದು. ಅಪ್ರಾಪ್ತ ಗರ್ಭಿಣಿಯಾದರೆ ಆ ಗರ್ಭವನ್ನು ತೆಗೆಸಲು ಅನುಮತಿ ನೀಡಲಾಗುವುದು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)