ವರದಿ : ನಾಸೀರ್ ಬೋವು
ತ್ವಾಇಫ್: ತಾಜುಲ್ ಫುಖಹಾ ಬೇಕಲ್ ಉಸ್ತಾದರು ನಾಮಕರಣ ಮಾಡಿ 2013 ಫೆಬ್ರವರಿ 15 ರಂದು ಸ್ಥಾಪನೆಗೊಂಡ ಗಲ್ಫ್ ಕನ್ನಡಿಗರ ಅಭಿಮಾನದ ಸಂಘಟನೆ: KCF ( ಕರ್ನಾಟಕ ಕಲ್ಚರಲ್ ಫೌಂಡೇಶನ್) ಗೆ ಇದೀಗ ಹದಿಮೂರ ಹರೆಯ.

ಸಾಧನೆಗಳ ಸರಣಿ
ಯುಎಇ, ಸೌದಿ, ಬಹರೈನ್, ಒಮಾನ್, ಕತಾರ್, ಕುವೈಟ್, ಇರಾಕ್, ಈಜಿಪ್ಟ್ , ಯುಕೆ, ಜಪಾನ್ ಹಾಗೂ ಮಲೇಶಿಯ ಸೇರಿ ಒಟ್ಟು ಹನ್ನೊಂದು ದೇಶಗಳಿಗೆ ಸಂಘಟನೆ ವಿಸ್ತಾರಗೊಂಡಿತು.
ಹದಿಮೂರು ವರ್ಷಗಳ ಹೃಸ್ವ ಕಾಲಾವಧಿಯಲ್ಲಿ 15 ಸಾವಿರ ಸದಸ್ಯರಿರುವ ಗಲ್ಫ್ ದೇಶದಲ್ಲೇ ಅತ್ಯಂತ ಬೃಹತ್ತಾದ ಕನ್ನಡಿಗರ ಸಂಘಟನೆಯೆನಿಸಿತು.
ಈ ನಿಟ್ಟಿನಲ್ಲಿ “ಸೇವೆ ನಮ್ಮ ಶಕ್ತಿ ಬದ್ಧತೆ ನಮ್ಮ ಗುರುತು” ಎಂಬ ದ್ಯೇಯದೊಂದಿಗೆ
KCF ತ್ವಾಇಫ್ ಸೆಕ್ಟರ್
ವತಿಯಿಂದ ಲೋಕಾನುಗ್ರಹಿ
ಮುಹಮ್ಮದ್ರಸೂಲುಲ್ಲಾಹಿ (ಸ ಅ)ರ ಪಾದಸ್ಪರ್ಶದಿಂದ ಅನುಗ್ರಹಿಸಲ್ಪಟ್ಟ ಪುಣ್ಯ ಭೂಮಿ ತ್ವಾಇಫ್ ನ, ರಈಸುಲ್ ಮುಫಸ್ಸಿರೀನ್ ಅಬ್ದುಲ್ಲಾ ಇಬ್ನು ಅಬ್ಬಾಸ್ (ರ ಅ )ರವರ ಮಕ್ಬರ ಝಿಯಾರತ್ ಮೂಲಕ “ಕೆಸಿಫ್ ಫೌಂಡೇಶನ್ ಡೇ” ಗೆ, ಚಾಲನೆ ನೀಡಲಾಯಿತು.
ಪ್ರಾರ್ಥನೆ ಅಶ್ರಫ್ ಸಖಾಫಿ ಕುಂಭಕ್ಕೋಡ್ ನೆರೆವೇರಿಸಿದರು. ಸಭಿಕರಿಗೆ ರಿಯಾಝ್ ಉಳ್ಳಾಲ ಸ್ವಾಗತಿಸಿದರು,
ಸಭೆಯನ್ನು ಸಲೀಮ್ ಪಲ್ಲಕುಡಲ್ ಉದ್ಘಾಟನೆ ಮಾಡಿದರು.
ನಂತರ ಅಧ್ಯಕ್ಷೀಯ ಭಾಷಣ ಮಾಡಿದ
ಅಬ್ದುಲ್ ರಝಾಕ್ ಕೊಡಂಗಾಯಿ
ಸಾಧನೆಯ ಹಾದಿಯಲ್ಲಿ ಉತ್ತಮವಾದ
ಕಾರ್ಯಾಚರಣೆಗಳೊಂದಿಗೆ ಮುನ್ನೇರುತ್ತಿರುವ
KCF ನ ಸಾಧನೆಗಳನ್ನು ವಿವರಿಸಿದರರು.
ಅಶ್ರಫ್ ಸಖಾಫಿ ಕುಂಭಕ್ಕೋಡ್ ಮಾತಾಡಿ
ಕೆಸಿಎಫ್ ನೊಂದಿಗಿರುವ ತಮ್ಮ ಆಳವಾದ ಸಂಬಂಧ
ಹಾಗೂ ಇದರಿಂದ ನಮಗೆ
ಅಲ್ಲಾಹುವಿನಿಂದ ದೊರೆಯುವ ಸತ್ಫಲಗಳ ಬಗ್ಗೆ
ಮಾರ್ಮಿಕವಾಗಿ ಪ್ರಸ್ತಾಪಿಸಿದರು.
ಅಯ್ಯೂಬ್ ಕುಂದಾಪುರ ಮತ್ತು ಸಿದ್ದೀಕ್ ಕನ್ಯಾರಕೋಡಿ ಶುಭ ಹಾರೈಸಿದರು,
ಕೊನೆಯಲ್ಲಿ ತೌಸೀಫ್ ಬೆಲ್ಮ ವಂದಿಸಿದರು.
ಅದೇ ರೀತಿ ನಾಯಕರ ಚುರುಕಿನ
ಕಾರ್ಯಾಚರಣೆಯಿಂದಾಗಿ ಹೆಚ್ಚಿನ ಸದಸ್ಯರನ್ನು
ಮತ್ತು ನಮ್ಮೊಂದಿಗೆ ವಿಶೇಷವಾಗಿ ಸಹಕರಿಸುವ
ಅಭಿಮಾನಿ ಹಿತೈಷಿಗಳನ್ನು ಭೇಟಿ ನೀಡಿ
ಸಿಹಿತಿಂಡಿ ವಿತರಿಸಿ, ಸಂಘಟನೆಯ ಅಭಿಪ್ರಾಯ,
ಅನಿಸಿಕೆ ಸಂಗ್ರಹಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)