ಕುವೈತ್: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಕುವೈಟ್- ಕೆಸಿಎಫ್ ಫೌಂಡೇಶನ್ ಡೇ ಆಚರಣೆ ಸಮಾರಂಭವು ದಿನಾಂಕ ಫೆಬ್ರವರಿ 13 ಶುಕ್ರವಾರ ಮಗ್ರಿಬ್ ನಮಾಝ್ ನಂತರ ಸಾಲ್ಮೀಯ ಸುನ್ನಿ ಸೆಂಟರ್ ನಲ್ಲಿ ಕೆಸಿಎಫ್ ಕುವೈಟ್ ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ನೊಂದಿಗೆ ಆರಂಭವಾಯಿತು.

ಪ್ರಧಾನ ಕಾರ್ಯದರ್ಶಿ ಮುಸ್ತಫ ಉಳ್ಳಾಲ ಸ್ವಾಗತಿಸಿದರು.ಸಂಘಟನಾ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಬಾದುಶ ಸಖಾಫಿ ಉದ್ಘಾಟನೆಗೈದರು.ಶಿಕ್ಷಣ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಶಾಹುಲ್ ಹಮೀದ್ ಸಅದಿ ಝುಹ್ರಿ ಕೆಸಿಎಫ್ ಡೇ ಬಗ್ಗೆ ವಿವರಿಸಿದರು. ಆಡಳಿತ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಫಾರೂಕ್ ಸಖಾಫಿ ರಮಳಾನ್ ತಿಂಗಳ ಬಗ್ಗೆ ತರಗತಿ ನಡೆಸಿದರು. ಕೆಸಿಎಫ್ ಅಂತರರಾಷ್ಟ್ರೀಯ ಆಡಳಿತ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಾಡ್ ಸಂಘಟನಾ ಚರ್ಚಾಕೂಟದಲ್ಲಿ ವಿಷಯ ಮಂಡಿಸಿ ಉಪಯುಕ್ತ ಸಲಹೆ ನೀಡಿದರು.




ಕೆಸಿಎಫ್ಅಂತರರಾಷ್ಟ್ರೀಯ ನಾಯಕರಾದ ಜನಾಬ್ ಝಕರ್ರಿಯ್ಯಾ ಆನೆಕಲ್ ಮತ್ತು ಜನಾಬ್ ಯಾಕೂಬ್ ಕಾರ್ಕಳ ಕಾರ್ಯಕ್ರಮದ ಅವಲೋಕನ ನಡೆಸಿ ವಿಷಯ ಮಂಡಿಸಿದರು.ನೋರ್ತ್ ಝೋನ್ ಅಧ್ಯಕ್ಷರಾದ ಬಹುಮಾನ್ಯ ಕಾಸಿಂ ಉಸ್ತಾದ್ ಬೆಲ್ಮ ಹಾಗೂ ಸೌತ್ ಝೋನ್ ನಾಯಕರಾದ ಜನಾಬ್ ಶಫೀಕ್ ಬೊಂದೆಲ್ ಆಶಂಷ ಕೋರಿದರು. ಮಹಬುಲ ಸೆಕ್ಟರ್ ಕಾರ್ಯಕರ್ತ ಜನಾಬ್ ಅರ್ಬಾಝ್ ಇಸ್ಲಾಮಿಕ್ ಹಾಡು ಹಾಡಿ ನೆರೆದವರನ್ನು ಮನರಂಜಿಸಿದರು.
ವಿಶೇಷ ಅತಿಥಿಯಾಗಿ ಆಗಮಿಸಿದ ಎಸ್.ಎಸ್.ಎಫ್ ರಾಷ್ಟ್ರೀಯ ನಾಯಕರಾದ ಉಬೈದ್ ಸಖಾಫಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.ಅಧ್ಯಕ್ಷರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಹಿತನುಡಿಗೈದು ದುಆ ನಡೆಸಿಕೊಟ್ಟರು.ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜನಾಬ್ ಅಬ್ಬಾಸ್ ಬಳಂಜೆ ಧನ್ಯವಾದಗೈದರು. ಕೆಸಿಎಫ್ ಡೇ ಪ್ರಯುಕ್ತ ಎರಡು ಝೋನ್ ಗಳಲ್ಲಿ ಕಾರ್ಯಕರ್ತರ ನಡುವೆ ಕ್ರಿಕೆಟ್ ಪಂಧ್ಯಾಟ ನಡೆಸಲಾಗಿತ್ತು. ಕೊನೆಯಲ್ಲಿ
ತಬರುಕ್ ನೀಡಲಾಯಿತು.
ವರದಿ :ಪ್ರಕಾಶನ ಮತ್ತು ಪ್ರಚಾರ ವಿಭಾಗ ಕೆಸಿಎಫ್ ಕುವೈಟ್
















ಇನ್ನಷ್ಟು ಸುದ್ದಿಗಳು
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ