ಕುವೈತ್: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಕುವೈಟ್- ಕೆಸಿಎಫ್ ಫೌಂಡೇಶನ್ ಡೇ ಆಚರಣೆ ಸಮಾರಂಭವು ದಿನಾಂಕ ಫೆಬ್ರವರಿ 13 ಶುಕ್ರವಾರ ಮಗ್ರಿಬ್ ನಮಾಝ್ ನಂತರ ಸಾಲ್ಮೀಯ ಸುನ್ನಿ ಸೆಂಟರ್ ನಲ್ಲಿ ಕೆಸಿಎಫ್ ಕುವೈಟ್ ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ನೊಂದಿಗೆ ಆರಂಭವಾಯಿತು.

ಪ್ರಧಾನ ಕಾರ್ಯದರ್ಶಿ ಮುಸ್ತಫ ಉಳ್ಳಾಲ ಸ್ವಾಗತಿಸಿದರು.ಸಂಘಟನಾ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಬಾದುಶ ಸಖಾಫಿ ಉದ್ಘಾಟನೆಗೈದರು.ಶಿಕ್ಷಣ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಶಾಹುಲ್ ಹಮೀದ್ ಸಅದಿ ಝುಹ್ರಿ ಕೆಸಿಎಫ್ ಡೇ ಬಗ್ಗೆ ವಿವರಿಸಿದರು. ಆಡಳಿತ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಫಾರೂಕ್ ಸಖಾಫಿ ರಮಳಾನ್ ತಿಂಗಳ ಬಗ್ಗೆ ತರಗತಿ ನಡೆಸಿದರು. ಕೆಸಿಎಫ್ ಅಂತರರಾಷ್ಟ್ರೀಯ ಆಡಳಿತ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಾಡ್ ಸಂಘಟನಾ ಚರ್ಚಾಕೂಟದಲ್ಲಿ ವಿಷಯ ಮಂಡಿಸಿ ಉಪಯುಕ್ತ ಸಲಹೆ ನೀಡಿದರು.




ಕೆಸಿಎಫ್ಅಂತರರಾಷ್ಟ್ರೀಯ ನಾಯಕರಾದ ಜನಾಬ್ ಝಕರ್ರಿಯ್ಯಾ ಆನೆಕಲ್ ಮತ್ತು ಜನಾಬ್ ಯಾಕೂಬ್ ಕಾರ್ಕಳ ಕಾರ್ಯಕ್ರಮದ ಅವಲೋಕನ ನಡೆಸಿ ವಿಷಯ ಮಂಡಿಸಿದರು.ನೋರ್ತ್ ಝೋನ್ ಅಧ್ಯಕ್ಷರಾದ ಬಹುಮಾನ್ಯ ಕಾಸಿಂ ಉಸ್ತಾದ್ ಬೆಲ್ಮ ಹಾಗೂ ಸೌತ್ ಝೋನ್ ನಾಯಕರಾದ ಜನಾಬ್ ಶಫೀಕ್ ಬೊಂದೆಲ್ ಆಶಂಷ ಕೋರಿದರು. ಮಹಬುಲ ಸೆಕ್ಟರ್ ಕಾರ್ಯಕರ್ತ ಜನಾಬ್ ಅರ್ಬಾಝ್ ಇಸ್ಲಾಮಿಕ್ ಹಾಡು ಹಾಡಿ ನೆರೆದವರನ್ನು ಮನರಂಜಿಸಿದರು.
ವಿಶೇಷ ಅತಿಥಿಯಾಗಿ ಆಗಮಿಸಿದ ಎಸ್.ಎಸ್.ಎಫ್ ರಾಷ್ಟ್ರೀಯ ನಾಯಕರಾದ ಉಬೈದ್ ಸಖಾಫಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.ಅಧ್ಯಕ್ಷರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಹಿತನುಡಿಗೈದು ದುಆ ನಡೆಸಿಕೊಟ್ಟರು.ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜನಾಬ್ ಅಬ್ಬಾಸ್ ಬಳಂಜೆ ಧನ್ಯವಾದಗೈದರು. ಕೆಸಿಎಫ್ ಡೇ ಪ್ರಯುಕ್ತ ಎರಡು ಝೋನ್ ಗಳಲ್ಲಿ ಕಾರ್ಯಕರ್ತರ ನಡುವೆ ಕ್ರಿಕೆಟ್ ಪಂಧ್ಯಾಟ ನಡೆಸಲಾಗಿತ್ತು. ಕೊನೆಯಲ್ಲಿ
ತಬರುಕ್ ನೀಡಲಾಯಿತು.
ವರದಿ :ಪ್ರಕಾಶನ ಮತ್ತು ಪ್ರಚಾರ ವಿಭಾಗ ಕೆಸಿಎಫ್ ಕುವೈಟ್
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ