ಕುವೈತ್: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಕುವೈಟ್- ಕೆಸಿಎಫ್ ಫೌಂಡೇಶನ್ ಡೇ ಆಚರಣೆ ಸಮಾರಂಭವು ದಿನಾಂಕ ಫೆಬ್ರವರಿ 13 ಶುಕ್ರವಾರ ಮಗ್ರಿಬ್ ನಮಾಝ್ ನಂತರ ಸಾಲ್ಮೀಯ ಸುನ್ನಿ ಸೆಂಟರ್ ನಲ್ಲಿ ಕೆಸಿಎಫ್ ಕುವೈಟ್ ರಾಷ್ಟ್ರೀಯ ಅಧ್ಯಕ್ಷರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ನೊಂದಿಗೆ ಆರಂಭವಾಯಿತು.

ಪ್ರಧಾನ ಕಾರ್ಯದರ್ಶಿ ಮುಸ್ತಫ ಉಳ್ಳಾಲ ಸ್ವಾಗತಿಸಿದರು.ಸಂಘಟನಾ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಬಾದುಶ ಸಖಾಫಿ ಉದ್ಘಾಟನೆಗೈದರು.ಶಿಕ್ಷಣ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಶಾಹುಲ್ ಹಮೀದ್ ಸಅದಿ ಝುಹ್ರಿ ಕೆಸಿಎಫ್ ಡೇ ಬಗ್ಗೆ ವಿವರಿಸಿದರು. ಆಡಳಿತ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಫಾರೂಕ್ ಸಖಾಫಿ ರಮಳಾನ್ ತಿಂಗಳ ಬಗ್ಗೆ ತರಗತಿ ನಡೆಸಿದರು. ಕೆಸಿಎಫ್ ಅಂತರರಾಷ್ಟ್ರೀಯ ಆಡಳಿತ ಇಲಾಖೆಯ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಾಡ್ ಸಂಘಟನಾ ಚರ್ಚಾಕೂಟದಲ್ಲಿ ವಿಷಯ ಮಂಡಿಸಿ ಉಪಯುಕ್ತ ಸಲಹೆ ನೀಡಿದರು.




ಕೆಸಿಎಫ್ಅಂತರರಾಷ್ಟ್ರೀಯ ನಾಯಕರಾದ ಜನಾಬ್ ಝಕರ್ರಿಯ್ಯಾ ಆನೆಕಲ್ ಮತ್ತು ಜನಾಬ್ ಯಾಕೂಬ್ ಕಾರ್ಕಳ ಕಾರ್ಯಕ್ರಮದ ಅವಲೋಕನ ನಡೆಸಿ ವಿಷಯ ಮಂಡಿಸಿದರು.ನೋರ್ತ್ ಝೋನ್ ಅಧ್ಯಕ್ಷರಾದ ಬಹುಮಾನ್ಯ ಕಾಸಿಂ ಉಸ್ತಾದ್ ಬೆಲ್ಮ ಹಾಗೂ ಸೌತ್ ಝೋನ್ ನಾಯಕರಾದ ಜನಾಬ್ ಶಫೀಕ್ ಬೊಂದೆಲ್ ಆಶಂಷ ಕೋರಿದರು. ಮಹಬುಲ ಸೆಕ್ಟರ್ ಕಾರ್ಯಕರ್ತ ಜನಾಬ್ ಅರ್ಬಾಝ್ ಇಸ್ಲಾಮಿಕ್ ಹಾಡು ಹಾಡಿ ನೆರೆದವರನ್ನು ಮನರಂಜಿಸಿದರು.
ವಿಶೇಷ ಅತಿಥಿಯಾಗಿ ಆಗಮಿಸಿದ ಎಸ್.ಎಸ್.ಎಫ್ ರಾಷ್ಟ್ರೀಯ ನಾಯಕರಾದ ಉಬೈದ್ ಸಖಾಫಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.ಅಧ್ಯಕ್ಷರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಹಿತನುಡಿಗೈದು ದುಆ ನಡೆಸಿಕೊಟ್ಟರು.ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜನಾಬ್ ಅಬ್ಬಾಸ್ ಬಳಂಜೆ ಧನ್ಯವಾದಗೈದರು. ಕೆಸಿಎಫ್ ಡೇ ಪ್ರಯುಕ್ತ ಎರಡು ಝೋನ್ ಗಳಲ್ಲಿ ಕಾರ್ಯಕರ್ತರ ನಡುವೆ ಕ್ರಿಕೆಟ್ ಪಂಧ್ಯಾಟ ನಡೆಸಲಾಗಿತ್ತು. ಕೊನೆಯಲ್ಲಿ
ತಬರುಕ್ ನೀಡಲಾಯಿತು.
ವರದಿ :ಪ್ರಕಾಶನ ಮತ್ತು ಪ್ರಚಾರ ವಿಭಾಗ ಕೆಸಿಎಫ್ ಕುವೈಟ್
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ತಬೂಕ್ ಘಟಕದ ವಾರ್ಷಿಕ ಮಹಾಸಭೆ
ಪಶ್ಚಿಮ ಏಷ್ಯಾ ಬಿಕ್ಕಟ್ಟು: ಗಲ್ಫ್ ರಾಷ್ಟ್ರಗಳಿಂದ 8.43 ಲಕ್ಷ ಭಾರತೀಯರು ವಾಪಸ್
ಶಾಫಿ ಸಅದಿ ವಿರುದ್ಧ ಸುಳ್ಳು ಸುದ್ದಿ ಪ್ರಕಟ: ‘ಮಿನಾರಂ’ ಡಿಜಿಟಲ್ ಪತ್ರಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ
ಎಪ್ರಿಲ್ 12: ಮಾದರಿ ಮದುವೆ ಅಭಿಯಾನ ಸಮಾರೋಪದ ಪ್ರಚಾರಾರ್ಥ ಸಾಂಘಿಕ ನಾಯಕರ ಸಭೆ
ಕಾಟಿಪಳ್ಳ: ನೂತನ ಮದ್ರಸ ಕಟ್ಟಡ ಉದ್ಘಾಟನಾ ಸಮಾರಂಭ- ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮ
ಶರಫುಲ್ ಉಲಮಾ 7ನೇ ವಾರ್ಷಿಕ ಅನುಸ್ಮರಣೆ- ಮೇ 13, 14 ರಂದು ವಿವಿಧ ಕಾರ್ಯಕ್ರಮ
ಬಶೀರ್ ಕಿನ್ಯ ಅವರಿಗೆ ಸಮ್ಮೇಳನಾಧ್ಯಕ್ಷತೆಯ ಗೌರವ: ಸಾಹಿತ್ಯ ಲೋಕದ ಬಹುಭಾಷಾ ಪಂಡಿತನಿಗೆ ಒಲಿದ ಮನ್ನಣೆ
ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಪ್ರಯಾಣ- ಐತಿಹಾಸಿಕ ‘ಮಕ್ಕಳ ಸ್ನೇಹಿ ಸಾರಿಗೆ’ ಯೋಜನೆ ಸಿದ್ಧ
ಕಿನ್ಯಾ ‘ಗೋಲ್ಡನ್ ಹೆಲ್ತ್’ ಶಿಲಾನ್ಯಾಸ: ರೋಗ ಬರದಂತೆ ತಡೆಯುವ ಜನಜಾಗೃತಿ ಇಂದಿನ ಅಗತ್ಯ- ಸ್ಪೀಕರ್ ಯು.ಟಿ. ಖಾದರ್
ಡಿಕೆಎಸ್ಸಿ ಅಲ್-ಖೋಬರ್ ಘಟಕ: ಮಾಸಿಕ ಸಭೆ ಹಾಗೂ ಗಣ್ಯರಿಗೆ ಸನ್ಮಾನ