ಜಿದ್ದಾ: ಪವಿತ್ರ ರಂಜಾನ್ ಮಾಸದ ಹಿನ್ನೆಲೆಯಲ್ಲಿ ಮಸೀದಿಗಳಲ್ಲಿ ಶಾಂತಿಯುತ ಮತ್ತು ಆಧ್ಯಾತ್ಮಿಕ ವಾತಾವರಣವನ್ನು ಕಾಪಾಡುವ ನಿಟ್ಟಿನಲ್ಲಿ ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಮಸೀದಿಗಳಲ್ಲಿ ಪ್ರಾರ್ಥನೆ ಮತ್ತು ಖುರ್ಆನ್ ಪಠಣಕ್ಕೆ ಹೆಚ್ಚಿನ ಮಹತ್ವವಿರುವುದರಿಂದ, ಅಲ್ಲಿನ ಏಕಾಗ್ರತೆಗೆ ಭಂಗ ತಾರದಂತೆ ವಿಶ್ವಾಸಿಗಳು ಸಹಕರಿಸಬೇಕು ಎಂದು ಸಚಿವಾಲಯ ಮನವಿ ಮಾಡಿದೆ. ಈ ಕುರಿತಾದ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:
- ಮಕ್ಕಳ ಪ್ರವೇಶಕ್ಕೆ ನಿಯಂತ್ರಣ: ಮಸೀದಿಯಲ್ಲಿ ಪ್ರಾರ್ಥನೆಯಲ್ಲಿ ತೊಡಗಿರುವವರ ಏಕಾಗ್ರತೆಗೆ ಅಡ್ಡಿಯಾಗುವ ಸಾಧ್ಯತೆ ಇರುವುದರಿಂದ, ಸಣ್ಣ ಮಕ್ಕಳನ್ನು (ವಿವೇಚನಾ ಶಕ್ತಿ ಬಾರದ ವಯಸ್ಸಿನವರು) ಮಸೀದಿಗೆ ಕರೆತರುವುದನ್ನು ತಪ್ಪಿಸಬೇಕು ಎಂದು ಸಚಿವಾಲಯ ತಿಳಿಸಿದೆ.
- ಸರಳ ತರಾವೀಹ್ ನಮಾಜ್: ಪ್ರವಾದಿ ಚರ್ಯೆಯಂತೆ (ಸುನ್ನತ್) ತರಾವೀಹ್ ಪ್ರಾರ್ಥನೆಗಳನ್ನು ಸರಳವಾಗಿ ಮತ್ತು ಮಿತವಾದ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಇಮಾಮ್ಗಳಿಗೆ ಸೂಚಿಸಲಾಗಿದೆ.
- ಪ್ರಾರ್ಥನೆಗಳ ದೀರ್ಘತೆ ಕಡಿಮೆಗೊಳಿಸುವುದು: ಖುನೂತ್ ಸೇರಿದಂತೆ ವಿವಿಧ ಪ್ರಾರ್ಥನೆಗಳನ್ನು ಹೆಚ್ಚು ದೀರ್ಘವಾಗಿಸದೆ, ಸರಳವಾಗಿ ನಡೆಸಬೇಕು.
- ವೃದ್ಧರ ಹಿತರಕ್ಷಣೆ: ವೃದ್ಧರು ಮತ್ತು ಅನಾರೋಗ್ಯ ಪೀಡಿತರಿಗೆ ತೊಂದರೆಯಾಗದಂತೆ ಆರಾಧನಾ ಕ್ರಮಗಳನ್ನು ರೂಪಿಸುವುದು ಅತ್ಯಗತ್ಯ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಮಸೀದಿಗಳಲ್ಲಿ ಶಿಸ್ತು ಮತ್ತು ಆಧ್ಯಾತ್ಮಿಕ ಘನತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಸುಧಾರಣೆಗಳನ್ನು ತರಲಾಗಿದ್ದು, ಎಲ್ಲಾ ವಿಶ್ವಾಸಿಗಳು ಮತ್ತು ಮಸೀದಿ ಸಮಿತಿಗಳು ಇದಕ್ಕೆ ಸಹಕರಿಸಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ