ಚಿಕ್ಕಮಗಳೂರು ಮಾರ್ಚ್ 04/2026 ರಂದು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನೀಡದೆ ದಿನಾಂಕ 19.07.2022 ರ ಸರ್ಕಾರದ ಆದೇಶ ಸಂಖ್ಯೆ RD/114/MuDaPra/2022 ಅನ್ವಯ, ಪವಿತ್ರ ಗುಹೆಯೊಳಗಿನ ಗೋರಿಗಳಿಗೆ ಗಂಧ ಲೇಪನ, ಚಾದರ್ ಸಮರ್ಪಣೆ, ಹೂವಿನ ಅಲಂಕಾರ ಹಾಗೂ ಇಸ್ಲಾಮಿಕ್ ವಿಧಿವಿಧಾನಗಳ ಪ್ರಕಾರ ಪ್ರಾರ್ಥನೆ ಮಾಡಲು ಅವಕಾಶ ಇದ್ದು ಸಹ ಸರ್ಕಾರದ ವಿರುದ್ಧವಾಗಿ ನಡೆದುಕೊಂಡಿದೆ .


ಹಾಗೂ ಮಾನ್ಯ ಸುಪ್ರೀಂ ಕೋರ್ಟ್ ಆದೇಶ SLP (C) No. 10131/2023 ಅನುಸರಿಸಿ ಪರಂಪರೆಯ ವಿಧಿವಿಧಾನಗಳನ್ನು ಆಚರಿಸಲು ಶಾಖಾದ್ರಿ ಯವರಿಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಅನುಮತಿಸಿರುವ ಆದೇಶಕ್ಕೆ ಸಂಪೂರ್ಣ ಉಲ್ಲಂಘನೆ ಮಾಡಿದೆ ಎಂದು ಜಿಲ್ಲಾ ಮುಸ್ಲಿಂ ಒಕ್ಕೂಟದ ಮುಖಂಡರಾದ ಆಲ್ ಹಾಜ್ ಫೈರೋಜ್ ಅಹಮದ್ ರಜ್ವಿ ರವರು ದೂರಿದ್ದಾರೆ .
ಸರ್ಕಾರದ ಆದೇಶ ಮತ್ತು ಶತಮಾನಗಳ ಸಂಪ್ರದಾಯದಂತೆ ಶಾಂತಿಯುತವಾಗಿ ಉರುಸ್ ಆಚರಣೆ ನಡೆಯಬೇಕು ಎಂಬುದು ನಮ್ಮ ಒತ್ತಾಯದೊಂದಿಗೆ ಇಂದು ಬಾಬಾ ಬುಡನ್ ದರ್ಗಾದಲ್ಲಿ ಸಂದಲ್ ಮತ್ತು ಉರುಸ್ ಕಾರ್ಯಕ್ರಮವು ಆಯೋಜಿಸಲಾಗಿತ್ತು ಆದರೆ ಜಿಲ್ಲಾಡಳಿತವು ಇಸ್ಲಾಂ ಧರ್ಮದ ಸೂಫಿ ಸಂತರ ಸಂಪ್ರದಾಯದಂತೆ ನೆರವೇರಿಸಲು ಅವಕಾಶ ಮಾಡಿ ಕೊಡಲು ನಿರಾಕರಿಸಿತು ಆದ್ದರಿಂದ ಶಾಖಾದ್ರಿ ಮತ್ತು ಸಮುದಾಯದ ವತಿಯಿಂದ ಉರುಸ್ ಕಾರ್ಯಕ್ರಮವನ್ನು ಬಹಿಷ್ಕರಿಸಿಲಾಯಿತು ಜಿಲ್ಲಾಡಳಿತವು ಸರ್ಕಾರದ ಆದೇಶದ ವಿರುದ್ಧ ಮತ್ತು ನ್ಯಾಯಾಲಯದ ಉಲ್ಲಂಘನೆ ಮಾಡಿದೆ ಅದಾಗಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಶಾಖಾದ್ರಿ ಯವರು ಮಾನ್ಯ ಗೌಸ್ ಮೊಹಿದ್ದೀನ್ ಶಾಖಾದ್ರಿ ಮತ್ತು ಸಮುದಾಯದ ಮುಖಂಡರ ಪರವಾಗಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮುಖ್ಯಸ್ಥರಾದ ಆಲ್ ಹಾಜ್ ಮೊಹಮ್ಮದ್ ಶಾಹಿದ್ ರಜ್ವಿ ರವರು ನಿರ್ಧರಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ