ಕೋಝಿಕೋಡ್: ಕೇರಳದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಇತಿಹಾಸ ಬರೆಯುವ ನಿಟ್ಟಿನಲ್ಲಿ, ಮರ್ಕಸ್ ನಾಲೆಡ್ಜ್ ಸಿಟಿಯಲ್ಲಿರುವ ಮರ್ಕಝ್ ಯುನಾನಿ ಮೆಡಿಕಲ್ ಕಾಲೇಜಿಗೆ ಅನುದಾನಿತ (Aided) ಮಾನ್ಯತೆ ನೀಡಲು ರಾಜ್ಯ ಸಚಿವ ಸಂಪುಟ ಸಭೆಯು ಮಹತ್ವದ ತೀರ್ಮಾನ ಕೈಗೊಂಡಿದೆ. ಕೇರಳದ ಏಕೈಕ ಯುನಾನಿ ವೈದ್ಯಕೀಯ ಕಾಲೇಜು ಎಂಬ ಹೆಗ್ಗಳಿಕೆ ಹೊಂದಿರುವ ಈ ಸಂಸ್ಥೆಗೆ ಸರ್ಕಾರಿ ಮಾನ್ಯತೆ ದೊರೆತಿರುವುದು ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ಒಂದು ನಿರ್ಣಾಯಕ ಮೈಲಿಗಲ್ಲಾಗಿದೆ.
ಹಿನ್ನೆಲೆ ಮತ್ತು ಬೆಳವಣಿಗೆ:
ಮರ್ಕಝುಸ್ಸಖಾಫತಿ ಸುನ್ನಿಯ್ಯ ಸಂಸ್ಥೆಯ ಅಡಿಯಲ್ಲಿ 2010 ರಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಪ್ರಾರಂಭಿಸಲಾಯಿತು. ಸಾರ್ವಜನಿಕರಿಗೆ ಯುನಾನಿ ಚಿಕಿತ್ಸಾ ಪದ್ಧತಿಯಲ್ಲಿ ಉನ್ನತ ಗುಣಮಟ್ಟದ ವೃತ್ತಿಪರ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಈ ಕಾಲೇಜನ್ನು ಸ್ಥಾಪಿಸಲಾಯಿತು. ಪ್ರಸ್ತುತ ಈ ಸಂಸ್ಥೆಯು ಕೇಂದ್ರ ಆಯುಷ್ ಸಚಿವಾಲಯ ಮತ್ತು ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗದ (NCISM) ಮಾನ್ಯತೆಯನ್ನು ಪಡೆದಿದ್ದು, ಕೇರಳ ಆರೋಗ್ಯ ವಿಶ್ವವಿದ್ಯಾಲಯದ (KUHS) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.
ಸಂಪರ್ಕ ಮತ್ತು ಸೌಲಭ್ಯ:
ಕೋಝಿಕೋಡ್ ಜಿಲ್ಲೆಯ ಪುದುಪ್ಪಾಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 766 ರ ಪಕ್ಕದಲ್ಲಿರುವ ಮರ್ಕಝ್ ನಾಲೆಡ್ಜ್ ಸಿಟಿಯಲ್ಲಿ ಈ ಕಾಲೇಜು ನೆಲೆಸಿದೆ. ಇದು ಕೋಝಿಕೋಡ್ ರೈಲ್ವೆ ನಿಲ್ದಾಣದಿಂದ 40 ಕಿ.ಮೀ ಮತ್ತು ಕರಿಪುರ್ ವಿಮಾನ ನಿಲ್ದಾಣದಿಂದ 60 ಕಿ.ಮೀ ದೂರದಲ್ಲಿದೆ. ಬೆಂಗಳೂರು ಮತ್ತು ಚೆನ್ನೈ ಅಂತಹ ಪ್ರಮುಖ ನಗರಗಳನ್ನು ಸಂಪರ್ಕಿಸುವ ಹೆದ್ದಾರಿಯಲ್ಲೇ ಕಾಲೇಜು ಇರುವುದರಿಂದ ಹೊರ ರಾಜ್ಯಗಳ ವಿದ್ಯಾರ್ಥಿಗಳಿಗೂ ಇಲ್ಲಿಗೆ ತಲುಪಲು ಸುಲಭವಾಗಿದೆ.
ವಿದ್ಯಾರ್ಥಿಗಳಿಗೆ ಪ್ರಯೋಜನ:
ಅನುದಾನಿತ (Aided) ಮಾನ್ಯತೆ ದೊರೆಯುವುದರಿಂದ ಆಗುವ ಪ್ರಮುಖ ಲಾಭಗಳು ಹೀಗಿವೆ:
- ಕಡಿಮೆ ವೆಚ್ಚದ ಶಿಕ್ಷಣ: ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಯುನಾನಿ ಮೆಡಿಸಿನ್ (BUMS) ಅಭ್ಯಾಸ ಮಾಡಲು ಅವಕಾಶ ಸಿಗಲಿದೆ.
- ವೈವಿಧ್ಯಮಯ ಚಿಕಿತ್ಸೆ: ಆಯುರ್ವೇದ ಮತ್ತು ಹೋಮಿಯೋಪತಿಗೆ ನೀಡಲಾಗುವಷ್ಟೇ ಪ್ರಾಮುಖ್ಯತೆ ಇನ್ನು ಮುಂದೆ ಯುನಾನಿ ಪದ್ಧತಿಗೂ ದೊರೆಯಲಿದ್ದು, ರಾಜ್ಯದ ಆರೋಗ್ಯ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲಿದೆ.
- ಸಂಶೋಧನೆಗೆ ಒತ್ತು: ಈ ನಿರ್ಧಾರವು ಸಂಶೋಧನಾ ಕ್ಷೇತ್ರದಲ್ಲಿ ಮತ್ತು ಸುಧಾರಿತ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವಲ್ಲಿ ದೊಡ್ಡ ಬದಲಾವಣೆ ತರುವ ನಿರೀಕ್ಷೆಯಿದೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ