ಕುವೈತ್ ಸಿಟಿ: ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುವೈತ್ನಾದ್ಯಂತ ಎಲ್ಲಾ ಮಸೀದಿಗಳಲ್ಲಿ ತರಾವೀಹ್ ಮತ್ತು ಖಿಯಾಮ್ ನಮಾಜ್ಗಳನ್ನು ನಿಗದಿತ ಸಮಯದೊಳಗೆ ಪೂರೈಸಬೇಕು ಎಂದು ಔಕಾಫ್ ಸಚಿವಾಲಯ ತಿಳಿಸಿದೆ.
ನಮಾಜ್ ಸಮಯದ ಕುರಿತು ಪ್ರಮುಖ ಸೂಚನೆಗಳು:
ವಿಶ್ವಾಸಿಗಳ ಸುರಕ್ಷತೆ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಸಚಿವಾಲಯವು ಈ ಕೆಳಗಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ:
- ತರಾವೀಹ್ ನಮಾಜ್: ಇಂದು ರಾತ್ರಿಯಿಂದಲೇ ತರಾವೀಹ್ ನಮಾಜ್ ಆರಂಭವಾಗಲಿದ್ದು, ಇಶಾ ನಮಾಜ್ ನಂತರದ ಈ ಪ್ರಾರ್ಥನೆಯು 20 ನಿಮಿಷಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಬಾರದು ಎಂದು ಸೂಚಿಸಲಾಗಿದೆ.
- ಖಿಯಾಮ್ ನಮಾಜ್: ಮಧ್ಯರಾತ್ರಿ 12 ಗಂಟೆಗೆ ಆರಂಭವಾಗಿ 12:30ಕ್ಕೆ ಮುಕ್ತಾಯಗೊಳ್ಳಬೇಕು.
ಪ್ರಾಂತೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುವೈತ್ನಲ್ಲಿ ತರಾವೀಹ್ ನಮಾಜ್ ಅನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಮುಂದಿನ ಆದೇಶದವರೆಗೆ ಈ ಕ್ರಮ ಜಾರಿಯಲ್ಲಿರುತ್ತದೆ ಎಂದು ಈ ಹಿಂದೆ ಔಖಾಫ್ ಸಚಿವಾಲಯ ತಿಳಿಸಿತ್ತು. ಇದೀಗ ಕಟ್ಟುನಿಟ್ಟಿನ ಸೂಚನೆಗಳೊಂದಿಗೆ ಪ್ರಾರ್ಥನೆಗೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕೋರಲಾಗಿದೆ.
ಕುವೈತ್ ವಿರುದ್ಧ ಅವಹೇಳನಕಾರಿ ವೀಡಿಯೊ: ಮೂವರ ಬಂಧನ
ಏತನ್ಮಧ್ಯೆ, ಕುವೈತ್ ದೇಶವನ್ನು ವ್ಯಂಗ್ಯ ಮಾಡುವ ಮತ್ತು ಅವಹೇಳನ ಮಾಡುವ ರೀತಿಯಲ್ಲಿ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ.
ಇಂತಹ ಕಾನೂನು ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವಾಲಯ ಎಚ್ಚರಿಸಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ರಾಷ್ಟ್ರೀಯ ಜವಾಬ್ದಾರಿಯನ್ನು ಅರಿತು ವರ್ತಿಸಬೇಕು ಎಂದು ಸಚಿವಾಲಯ ಮನವಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು