ಅಬುಧಾಬಿ: ಯುಎಇಯ ಹಿಂದೂ ಮಂದಿರ ಬಿಎಪಿಎಸ್ (BAPS) ಹಾಗೂ ಪ್ರಮುಖ ಪ್ರವಾಸಿ ತಾಣವಾದ ದುಬೈ ಗ್ಲೋಬಲ್ ವಿಲೇಜ್ ಅನ್ನು ಅನಿರ್ದಿಷ್ಟ ಅವಧಿಗೆ ಮುಚ್ಚಲಾಗಿದೆ. ದೇಶದ ಭದ್ರತಾ ಮಾರ್ಗಸೂಚಿಗಳನ್ನು ಪಾಲಿಸುವ ಮತ್ತು ಸಂದರ್ಶಕರ ಸುರಕ್ಷತೆಯನ್ನು ಖಚಿತಪಡಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಎಪಿಎಸ್ ಹಿಂದೂ ಮಂದಿರದ ಪ್ರಕಟಣೆ
ಪ್ರಸ್ತುತ ಸನ್ನಿವೇಶ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಮಂದಿರವನ್ನು ಸಾರ್ವಜನಿಕರಿಗಾಗಿ ಮುಚ್ಚಲಾಗುತ್ತಿದೆ ಎಂದು ಅಬುಧಾಬಿ ಬಿಎಪಿಎಸ್ ಹಿಂದೂ ಮಂದಿರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. “ಭಕ್ತರ ಮತ್ತು ಸಂದರ್ಶಕರ ಸುರಕ್ಷತೆಯೇ ನಮಗೆ ಪ್ರಮುಖ ಆದ್ಯತೆ” ಎಂದು ಮಂದಿರದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಸಂದರ್ಶಕರಿಗೆ ಪ್ರವೇಶವಿಲ್ಲದಿದ್ದರೂ, ವಿಶ್ವ ಶಾಂತಿ ಮತ್ತು ರಕ್ಷಣೆಗಾಗಿ ಸ್ವಾಮಿಜಿಗಳು ಮಂದಿರದ ಒಳಗಡೆ ಪ್ರಾರ್ಥನೆಗಳನ್ನು ಮುಂದುವರಿಸಲಿದ್ದಾರೆ. ಮಂದಿರವನ್ನು ಪುನಃ ತೆರೆಯುವ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಶಾಂತಿ ಕಾಪಾಡಬೇಕು ಮತ್ತು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ವಿನಂತಿಸಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಗ್ಲೋಬಲ್ ವಿಲೇಜ್ ಬಂದ್
ಇದೇ ವೇಳೆ, ಅಧಿಕೃತ ಮಾರ್ಗಸೂಚಿಗಳಿಗೆ ಅನುಗುಣವಾಗಿ ಮುನ್ನೆಚ್ಚರಿಕಾ ಕ್ರಮವಾಗಿ ದುಬೈ ಗ್ಲೋಬಲ್ ವಿಲೇಜ್ ಅನ್ನು ಸಹ ಮುಚ್ಚಲಾಗಿದೆ. ಮುಂದಿನ ಸೂಚನೆ ಬರುವವರೆಗೆ ಪ್ರವಾಸಿಗರಿಗೆ ಇಲ್ಲಿ ಪ್ರವೇಶವಿರುವುದಿಲ್ಲ. ಗ್ಲೋಬಲ್ ವಿಲೇಜ್ ಪುನಃ ತೆರೆಯುವ ಕುರಿತಾದ ಇತ್ತೀಚಿನ ಮಾಹಿತಿಗಾಗಿ ಸಂದರ್ಶಕರು ಅಧಿಕೃತ ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳನ್ನು ಗಮನಿಸುತ್ತಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು