ಬೆಂಗಳೂರು: ರಮಝಾನ್ 21ನೇ ರಾತ್ರಿ, ಜಿಲ್ಲೆಯ ಅತ್ಯಂತ ದೊಡ್ಡ ಧಾರ್ಮಿಕ ಸಮ್ಮೇಳನವಾದ ರೂಹಾನಿ ಇಜ್ತಿಮ್ ಇಂದು ಸಂಜೆ 4 ಗಂಟೆಯಿಂದ ಖುದ್ದೂಸಾಬ್ ಈದ್ಗಾಹ್ ಮೈದಾನದಲ್ಲಿ ಆರಂಭವಾಗಲಿದೆ.
ಸಂಜೆ 4.30ಕ್ಕೆ ನಾಸಿರ್ ಅಹ್ಸನಿ ಉಸ್ತಾದರ ನೇತೃತ್ವದಲ್ಲಿ ಜೆ.ಸಿ ನಗರದಲ್ಲಿ ಝಿಯಾರತ್ ಮೂಲಕ ಕಾರ್ಯಕ್ರಮಕ್ಕೆ ಪ್ರಾರಂಭಿಸಲಾಗುವುದು.
ಸಂಜೆ 5ಕ್ಕೆ ಮಹ್ಲರತುಲ್ ಬದರಿಯಾ ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಬಶೀರ್ ಸಅದಿ ನೇತೃತ್ವದಲ್ಲಿ ನಡೆಯಲಿದೆ.
ಸಂಜೆ 6ಕ್ಕೆ ನಡೆಯುವ ಇಫ್ತಾರ್ ಸಮಾರಂಭವು ಸಯ್ಯದ್ ಇಬ್ರಾಹಿಂ ಬಾಫಖಿ ತಂಙಳ್ ಅಧ್ಯಕ್ಷತೆಯಲ್ಲಿ, ಮಾಜಿ ಕೇಂದ್ರ ಸಚಿವ ಸಿ.ಎಮ್. ಇಬ್ರಾಹಿಂ ಉದ್ಘಾಟಿಸುತ್ತಾರೆ. ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು.
ಮಗ್ರಿಬ್ ನಂತರ ಫ್ಯಾಮಿಲಿ ಮೀಟ್ನಲ್ಲಿ ಪ್ರಮುಖ ಉಪನ್ಯಾಸಕ ಮತ್ತು ಲೇಖಕ ಇಬ್ರಾಹಿಂ ಸಖಾಫಿ ಪುಝಕ್ಕಾಟ್ಟಿರಿ ತರಗತಿಯನ್ನು ನಡೆಸಲಿದ್ದಾರೆ.
ತರಾವೀಹ್ ನಿಸ್ಕಾರದ ನಂತರ ದಿಕ್ರ್ ದುವಾ ಮಜ್ಲಿಸ್ ಗೆ ಸಯ್ಯಿದ್ ಝೈನುಲ್ ಆಬಿದೀನ್ ಕೂರಿಕ್ಕುಝಿ ತಂಗಳ್ ನೇತೃತ್ವ ವಹಿಸಲಿದ್ದಾರೆ.
ರೂಹಾನಿ ಸಮ್ಮೇಳನವನ್ನು ಮುಸ್ಲಿಂ ಜಮಾಅತ್ ಅಧ್ಯಕ್ಷ ಹುಸೈನ್ ಮಿಸ್ಬಾಹಿ ಅಧ್ಯಕ್ಷತೆಯಲ್ಲಿ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ.
ಧಾರ್ಮಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಕ್ಷೇತ್ರಗಳ ವಿವಿಧ ವ್ಯಕ್ತಿತ್ವಗಳು ಭಾಗವಹಿಸುವ ಈ ಕಾರ್ಯಕ್ರಮಕ್ಕೆ ಖುದ್ದೂಸ್ ಸಾಬ್ ಈದ್ಗಾಹ್ ಮೈದಾನದಲ್ಲಿ ಸುಮಾರು ಐದು ಸಾವಿರ ಮಂದಿಗೆ ಇಫ್ತಾರ್ಗೆ ಎಲ್ಲಾ ವ್ಯವಸ್ಥೆ ಗಳನ್ನು ಮಾಡಲಾಗಿದೆ.

















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ