ಬೆಂಗಳೂರು: ರಮಝಾನ್ 21ನೇ ರಾತ್ರಿ, ಜಿಲ್ಲೆಯ ಅತ್ಯಂತ ದೊಡ್ಡ ಧಾರ್ಮಿಕ ಸಮ್ಮೇಳನವಾದ ರೂಹಾನಿ ಇಜ್ತಿಮ್ ಇಂದು ಸಂಜೆ 4 ಗಂಟೆಯಿಂದ ಖುದ್ದೂಸಾಬ್ ಈದ್ಗಾಹ್ ಮೈದಾನದಲ್ಲಿ ಆರಂಭವಾಗಲಿದೆ.
ಸಂಜೆ 4.30ಕ್ಕೆ ನಾಸಿರ್ ಅಹ್ಸನಿ ಉಸ್ತಾದರ ನೇತೃತ್ವದಲ್ಲಿ ಜೆ.ಸಿ ನಗರದಲ್ಲಿ ಝಿಯಾರತ್ ಮೂಲಕ ಕಾರ್ಯಕ್ರಮಕ್ಕೆ ಪ್ರಾರಂಭಿಸಲಾಗುವುದು.
ಸಂಜೆ 5ಕ್ಕೆ ಮಹ್ಲರತುಲ್ ಬದರಿಯಾ ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಬಶೀರ್ ಸಅದಿ ನೇತೃತ್ವದಲ್ಲಿ ನಡೆಯಲಿದೆ.
ಸಂಜೆ 6ಕ್ಕೆ ನಡೆಯುವ ಇಫ್ತಾರ್ ಸಮಾರಂಭವು ಸಯ್ಯದ್ ಇಬ್ರಾಹಿಂ ಬಾಫಖಿ ತಂಙಳ್ ಅಧ್ಯಕ್ಷತೆಯಲ್ಲಿ, ಮಾಜಿ ಕೇಂದ್ರ ಸಚಿವ ಸಿ.ಎಮ್. ಇಬ್ರಾಹಿಂ ಉದ್ಘಾಟಿಸುತ್ತಾರೆ. ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು.
ಮಗ್ರಿಬ್ ನಂತರ ಫ್ಯಾಮಿಲಿ ಮೀಟ್ನಲ್ಲಿ ಪ್ರಮುಖ ಉಪನ್ಯಾಸಕ ಮತ್ತು ಲೇಖಕ ಇಬ್ರಾಹಿಂ ಸಖಾಫಿ ಪುಝಕ್ಕಾಟ್ಟಿರಿ ತರಗತಿಯನ್ನು ನಡೆಸಲಿದ್ದಾರೆ.
ತರಾವೀಹ್ ನಿಸ್ಕಾರದ ನಂತರ ದಿಕ್ರ್ ದುವಾ ಮಜ್ಲಿಸ್ ಗೆ ಸಯ್ಯಿದ್ ಝೈನುಲ್ ಆಬಿದೀನ್ ಕೂರಿಕ್ಕುಝಿ ತಂಗಳ್ ನೇತೃತ್ವ ವಹಿಸಲಿದ್ದಾರೆ.
ರೂಹಾನಿ ಸಮ್ಮೇಳನವನ್ನು ಮುಸ್ಲಿಂ ಜಮಾಅತ್ ಅಧ್ಯಕ್ಷ ಹುಸೈನ್ ಮಿಸ್ಬಾಹಿ ಅಧ್ಯಕ್ಷತೆಯಲ್ಲಿ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ.
ಧಾರ್ಮಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಕ್ಷೇತ್ರಗಳ ವಿವಿಧ ವ್ಯಕ್ತಿತ್ವಗಳು ಭಾಗವಹಿಸುವ ಈ ಕಾರ್ಯಕ್ರಮಕ್ಕೆ ಖುದ್ದೂಸ್ ಸಾಬ್ ಈದ್ಗಾಹ್ ಮೈದಾನದಲ್ಲಿ ಸುಮಾರು ಐದು ಸಾವಿರ ಮಂದಿಗೆ ಇಫ್ತಾರ್ಗೆ ಎಲ್ಲಾ ವ್ಯವಸ್ಥೆ ಗಳನ್ನು ಮಾಡಲಾಗಿದೆ.

















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)