ಮಂಗಳೂರು, ಮಾ.19: ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಶವ್ವಾಲ್ ತಿಂಗಳ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ, ಕರಾವಳಿ ಸೇರಿದಂತೆ ನಾಡಿನಾದ್ಯಂತ ನಾಳೆ (ಮಾ. 20, ಶುಕ್ರವಾರ) ಪವಿತ್ರ ‘ಈದುಲ್ ಫಿತರ್’ ಹಬ್ಬವನ್ನು ಸಂಭ್ರಮದಿಂದ ಆಚರಿಸುವಂತೆ ಖಾಝಿಗಳು ಕರೆ ನೀಡಿದ್ದಾರೆ.
ರಮಳಾನ್ ತಿಂಗಳ 29ನೇ ಉಪವಾಸದ ದಿನವಾದ ಇಂದು ಚಂದ್ರ ದರ್ಶನವಾಗಿರುವುದರಿಂದ, ನಾಳೆ ಶವ್ವಾಲ್ ಮಾಸದ ಪ್ರಥಮ ದಿನವಾಗಿದ್ದು ಈದ್ ಆಚರಣೆ ಅಧಿಕೃತಗೊಂಡಿದೆ. ಈ ಕುರಿತು ಅಖಿಲ ಭಾರತ ಸುನ್ನೀ ಜಮ್ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಹಾಗೂ ಉಳ್ಳಾಲ ಖಾಝಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ (ಕಾಂತಪುರಂ ಉಸ್ತಾದ್), ಮಂಗಳೂರು ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಹಾಗೂ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಮಾಣಿ ಉಸ್ತಾದ್ ಅವರ ಕಚೇರಿಗಳಿಂದ ಹೊರಡಿಸಿದ ಪ್ರಕಟಣೆಯಲ್ಲಿ ವಿಶ್ವಾಸಿಗಳಿಗೆ ಹಬ್ಬದ ಶುಭಾಶಯ ಕೋರಿದ್ದಾರೆ.
ತ್ಯಾಗ ಮತ್ತು ಶಿಸ್ತಿನ ಸಮಾರೋಪ
ಕಳೆದ ಒಂದು ತಿಂಗಳ ಕಾಲ ಕಠಿಣ ಉಪವಾಸ ವ್ರತ, ದಾನ-ಧರ್ಮ ಹಾಗೂ ವಿಶೇಷ ಪ್ರಾರ್ಥನೆಗಳಲ್ಲಿ ತೊಡಗಿದ್ದ ಮುಸ್ಲಿಂ ಬಾಂಧವರಿಗೆ ಈದುಲ್ ಫಿತರ್ ಸಾರ್ಥಕತೆಯ ಕ್ಷಣವಾಗಿದೆ. ಕೆಡುಕುಗಳಿಂದ ದೂರವಿದ್ದು, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ನಿರಂತರ ಶ್ರಮಕ್ಕೆ ಈ ಹಬ್ಬವು ಮೌಲ್ಯದ ಮುದ್ರೆ ಒತ್ತುತ್ತದೆ.
ಮಾನವೀಯತೆಯ ‘ಫಿತರ್ ಝಕಾತ್’
ಈದ್ ದಿನದಂದು ಸಮಾಜದಲ್ಲಿ ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬ ಉದಾತ್ತ ಉದ್ದೇಶದಿಂದ ‘ಫಿತರ್ ಝಕಾತ್’ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಆಯಾ ಭಾಗದ ಮುಖ್ಯ ಆಹಾರ ಧಾನ್ಯಗಳನ್ನು ಬಡವರಿಗೆ ಹಂಚುವ ಮೂಲಕ ಹಬ್ಬದ ಸಡಗರದಲ್ಲಿ ಎಲ್ಲರನ್ನೂ ಒಳಗೊಳ್ಳುವುದು ಈ ಸಂಪ್ರದಾಯದ ವಿಶೇಷ.
ನಾಡಿನ ಸರ್ವರಿಗೂ ಈದುಲ್ ಫಿತರ್ ಹಬ್ಬದ ಶುಭಾಶಯಗಳು
ಪರಸ್ಪರ ಸ್ನೇಹ, ಸಹಬಾಳ್ವೆ ಮತ್ತು ಸೌಹಾರ್ದತೆಯನ್ನು ಸಾರುವ ಈ ಹಬ್ಬವು ಸಮಾಜದಲ್ಲಿ ಶಾಂತಿ-ನೆಮ್ಮದಿಯನ್ನು ಹೆಚ್ಚಿಸಲಿ. ಗಲ್ಫ್ ದೇಶಗಳಲ್ಲಿ ತಲೆದೋರಿರುವ ಯುದ್ಧದ ಕಾರ್ಮೋಡಗಳು ಆದಷ್ಟು ಬೇಗ ತಿಳಿಯಾಗಲಿ, ಶಾಂತಿ ಮತ್ತು ನೆಮ್ಮದಿಯ ವಾತಾವರಣ ಮರುಕಳಿಸಲಿ ಎಂದು ಪ್ರಾರ್ಥಿಸೋಣ.
ನಾಡಿನಲ್ಲೂ, ಒಮಾನ್ ಸಹಿತವಿರುವ ಗಲ್ಫ್ ರಾಷ್ಟ್ರಗಳಲ್ಲೂ ಈ ಬಾರಿ ಒಂದೇ ದಿನ ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಗುತ್ತಿದ್ದು ವಿಶೇಷ.
ಶುಭಾಶಯಗಳೊಂದಿಗೆ, ಜನಧ್ವನಿ ಪತ್ರಿಕಾ ಬಳಗ
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ