ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ಮೇಲೆ ನಡೆದ ಕ್ಷಿಪಣಿ ದಾಳಿಯನ್ನು ತಡೆಯುವ ವೇಳೆ, ಕ್ಷಿಪಣಿಯ ಅವಶೇಷಗಳು ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಉತ್ತರ ಪ್ರದೇಶ ಮೂಲದ ಭಾರತೀಯ ಕಾರ್ಮಿಕ ಮೃತಪಟ್ಟಿದ್ದಾರೆ.
ಮೃತರನ್ನು ಉತ್ತರ ಪ್ರದೇಶದ ರವಿ ಗೋಪಾಲ್ ಎಂದು ಗುರುತಿಸಲಾಗಿದೆ. ಮಾರ್ಚ್ 18 ರಂದು ರಿಯಾದ್ ಮೇಲೆ ನಡೆದ ಕ್ಷಿಪಣಿ ದಾಳಿಯ ಸಂದರ್ಭದಲ್ಲಿ, ಸೌದಿ ರಕ್ಷಣಾ ಪಡೆಗಳು ಕ್ಷಿಪಣಿಯನ್ನು ಆಕಾಶದಲ್ಲೇ ಹೊಡೆದು ಉರುಳಿಸಿದ್ದವು. ಈ ವೇಳೆ ಅದರ ಅವಶೇಷಗಳು ರವಿ ಗೋಪಾಲ್ ಅವರ ಮೇಲೆ ಬಿದ್ದಿದೆ. ರವಿ ಗೋಪಾಲ್ ಅವರು ರಿಯಾದ್ನ ‘ನ್ಯೂ ಸನಾಯಿಯ’ ಎಂಬಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಮಾರ್ಚ್ 18 ರಂದು ರಿಯಾದ್ನ ಕೈಗಾರಿಕಾ ನಗರಿಯನ್ನು ಗುರಿಯಾಗಿಸಿಕೊಂಡು ನಾಲ್ಕು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಆಗಮಿಸಿದೆ. ಇವುಗಳನ್ನು ಸೌದಿ ವಾಯು ರಕ್ಷಣಾ ಪಡೆ ಯಶಸ್ವಿಯಾಗಿ ತಡೆಹಿಡಿದಿತ್ತು. ಕ್ಷಿಪಣಿ ಅವಶೇಷಗಳು ಕೆಳಗೆ ಬಿದ್ದ ಪರಿಣಾಮ ರವಿ ಗೋಪಾಲ್ ಸೇರಿದಂತೆ ನಾಲ್ವರು ವಿದೇಶಿ ಕಾರ್ಮಿಕರು ಗಾಯಗೊಂಡಿದ್ದರು. ರವಿ ಅವರು ತಾವು ವಾಸವಿದ್ದ ಕಟ್ಟಡದ ಮೇಲೆ ನಿಂತಿದ್ದಾಗ ಈ ಅವಘಡ ಸಂಭವಿಸಿದೆ.
ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಯಿತಾದರೂ, ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.
ರಾಯಭಾರ ಕಚೇರಿ ಸಂತಾಪ:
ರವಿ ಗೋಪಾಲ್ ಅವರ ನಿಧನಕ್ಕೆ ಸೌದಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮೃತರ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಈ ದುರದೃಷ್ಟಕರ ಘಟನೆಯಿಂದ ನಮಗೆ ತೀವ್ರ ದುಃಖವಾಗಿದೆ. ಮೃತರ ಕುಟುಂಬಕ್ಕೆ ನೆರವಾಗಲು ಮತ್ತು ಮೃತದೇಹವನ್ನು ತಾಯ್ನಾಡಿಗೆ ಕಳುಹಿಸುವ ಪ್ರಕ್ರಿಯೆಯನ್ನು ವೇಗಗೊಳಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ರಾಯಭಾರ ಕಚೇರಿ ಕಾರ್ಯನಿರ್ವಹಿಸುತ್ತಿದೆ,” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸೌದಿ ರಕ್ಷಣಾ ಸಚಿವಾಲಯವೂ ಈ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದು, ಗಾಯಗೊಂಡ ಇತರ ಕಾರ್ಮಿಕರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಖಚಿತಪಡಿಸಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ