ದುಬೈ: ಏಷ್ಯನ್ ರಾಷ್ಟ್ರಗಳಲ್ಲಿನ ಕರೆನ್ಸಿ ಮತ್ತು ಬಂಗಾರದ ಬೆಲೆ ಕುಸಿತವು ಗಲ್ಫ್ನಲ್ಲಿ ನೆಲೆಸಿರುವ ಅನಿವಾಸಿಗರ ನಿದ್ರೆ ಕೆಡಿಸಿದೆ. ಊರಿಗೆ ಹಣ ಕಳುಹಿಸಬೇಕೇ ಅಥವಾ ಬಂಗಾರ ಖರೀದಿಸಬೇಕೇ ಎಂಬ ಗೊಂದಲಕ್ಕೆ ಸಿಲುಕಿದ್ದಾರೆ.
ಬಂಗಾರಕ್ಕೆ 6ಶೇಕಡಾ ಕುಸಿತವು ಪ್ರಸಕ್ತ ವರ್ಷದಲ್ಲಿ ಕಂಡು ಬಂದಿದೆ.ಈ ಮಧ್ಯೆ ಭಾರತ ಮತ್ತು ಪಾಕಿಸ್ತಾನದ ಕರೆನ್ಸಿಗಳ ಮೌಲ್ಯವು ಬಾರೀ ಕುಸಿತವನ್ನೂ ಕಂಡಿದೆ.
ಒಂದು ದಿರ್ಹಂಗೆ 18.70 ಭಾರತೀಯ ರೂಪಾಯಿ ಲಭಿಸುವ ಅವಸ್ಥೆ ಕೂಡ ಕಂಡುಬಂದಿದ್ದು, ಈ ರೀತಿ ಕುಸಿತವು ಬಂಗಾರ ಮಾರಾಟದಲ್ಲಿ ಪ್ರಭಾವ ಬೀರಲಿದೆ ಎಂದು ಸ್ಕೈ ಜುವೆಲ್ಲರಿಯ ನಿರ್ವಾಹಕ ಸಿರಿಯಕ್ ವರ್ಗೀಸ್ ಹೆಳಿದ್ದಾರೆ. ಅದೇ ವೇಳೆ ಮೌಲ್ಯ ವರ್ಧಿತ ಸೇವೆಯು ಮತ್ತೊಂದು ಸವಾಲಾಗಿ ಪರಿಣಮಿಸಿದೆ.
22 ಕ್ಯಾರೆಟ್ ಬಂಗಾರ ಪ್ರತೀ ಗ್ರಾಂಗೆ 142 ದಿರ್ಹಂ ಕ್ರಯವಿದೆ. ಕಳೆದ ವರ್ಷ ಇದು 150 ದಿರ್ಹಂ ಆಗಿತ್ತು. ಶುಕ್ರವಾರ ದಿನಗಳಲ್ಲಿ ಭಾರೀ ಮಾರಾಟ ನಡೆಯುತ್ತಿರುವುದಾಗಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನ ಡೈರೆಕ್ಟರ್ ಕೆ.ಪಿ. ಅಬ್ದುಸ್ಸಲಾಂ ಹೇಳಿದರು. ಬಂಗಾರ ಮತ್ತು ರೂಪಾಯಿ ಮೌಲ್ಯ ಇನ್ನಷ್ಟು ಕುಸಿಯುವ ಸಂಭವವಿದೆ ಎಂದು ಅನುಮಾನಿಸಲಾಗಿದ್ದು, ಆದರೆ ಅದು ತಾತ್ಕಾಲಿಕವಾಗಿದ್ದು, ದಿಢೀರನೆ ಏರುವ ಸಂಭವವೂ ಇದೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ