ಟೆಹ್ರಾನ್: ಅಮೆರಿಕದೊಂದಿಗಿನ ಸಂಘರ್ಷ ಉಲ್ಬಣಗೊಂಡರೆ ವಿಶ್ವದ ನಾಲ್ಕನೇ ಅತಿದೊಡ್ಡ ಹಡಗು ಮಾರ್ಗವಾದ ಬಾಬ್ ಅಲ್-ಮಂದಬ್ ಜಲಸಂಧಿಯನ್ನು ತಡೆಯುವುದಾಗಿ ಇರಾನ್ ಎಚ್ಚರಿಸಿದೆ. ಇರಾನ್ ನಿಯಂತ್ರಣದಲ್ಲಿರುವ ಖಾರ್ಗ್ ದ್ವೀಪ ಸೇರಿದಂತೆ ಪ್ರಮುಖ ಸ್ಥಳಗಳ ಮೇಲೆ ಅಮೆರಿಕ ಅಥವಾ ಇಸ್ರೇಲ್ ದಾಳಿ ನಡೆಸಿದರೆ ಕಠಿಣ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಇರಾನ್ ತಿಳಿಸಿದೆ.
ಪ್ರಸ್ತುತ ಹಾರ್ಮುಜ್ ಜಲಸಂಧಿಯಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಹೇರಿರುವ ಇರಾನ್, ಇದರ ಬೆನ್ನಲ್ಲೇ ಸುಯೆಜ್ ಕಾಲುವೆಗೆ ಸಂಪರ್ಕ ಕಲ್ಪಿಸುವ ಬಾಬ್ ಅಲ್-ಮಂದಬ್ ಮಾರ್ಗವನ್ನೂ ಬಂದ್ ಮಾಡುವುದಾಗಿ ಘೋಷಿಸಿದೆ.
ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ
- ವಿಶ್ವದ ಸಮುದ್ರ ಮಾರ್ಗದ ತೈಲ ಸಾಗಣೆಯ ಶೇ. 12ರಷ್ಟು ಭಾಗ ಈ ಬಾಬ್ ಅಲ್-ಮಂದಬ್ ಮೂಲಕವೇ ನಡೆಯುತ್ತದೆ.
- ಕೆಂಪು ಸಮುದ್ರ ಮತ್ತು ಏಡನ್ ಕೊಲ್ಲಿಯನ್ನು ಸಂಪರ್ಕಿಸುವ ಈ ಮಾರ್ಗವು ಸ್ಥಗಿತಗೊಂಡರೆ ಜಾಗತಿಕ ಆರ್ಥಿಕತೆಯ ಮೇಲೆ ತೀವ್ರ ಪೆಟ್ಟು ಬೀಳಲಿದೆ.
- ಯೆಮನ್ನ ಹೂತಿ ಬಂಡುಕೋರರ ನೆರವಿನೊಂದಿಗೆ ಈ ಪ್ರದೇಶವನ್ನು ನಿಯಂತ್ರಿಸಲು ಇರಾನ್ ಯೋಜಿಸಿದೆ.
ಅಮೆರಿಕ ಮತ್ತು ಇಸ್ರೇಲ್ ಪಡೆಗಳಿಗೆ ಪಾಠ ಕಲಿಸಲು ಈ ಜಲಸಂಧಿಯ ನಿಯಂತ್ರಣ ಅಗತ್ಯ ಎಂದು ಇರಾನ್ನ ತಸ್ನಿಮ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಹೂತಿ ಪಡೆಯಾದ ‘ಅನ್ಸಾರುಲ್ಲಾ’ ಈ ಕಾರ್ಯಾಚರಣೆಗೆ ಸಂಪೂರ್ಣ ಸಜ್ಜಾಗಿದೆ ಎಂದು ವರದಿಗಳು ಸೂಚಿಸಿವೆ. ಇರಾನ್ನ ವ್ಯೂಹಾತ್ಮಕ ದ್ವೀಪಗಳನ್ನು ವಶಪಡಿಸಿಕೊಳ್ಳಲು ಶತ್ರು ರಾಷ್ಟ್ರಗಳು ಸಂಚು ರೂಪಿಸುತ್ತಿವೆ ಎಂಬ ಗುಪ್ತಚರ ಮಾಹಿತಿ ಇದೆ ಎಂದು ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಘರ್ ಖಾಲಿಬಾಫ್ ತಿಳಿಸಿದ್ದಾರೆ. ಅಲ್ಲದೆ, ಈ ಸಂಚಿಗೆ ಯಾವುದೇ ನೆರೆಹೊರೆಯ ರಾಷ್ಟ್ರಗಳು ಬೆಂಬಲ ನೀಡಿದರೆ, ಆ ದೇಶಗಳ ಮೂಲಸೌಕರ್ಯಗಳನ್ನು ನಾಶಪಡಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ರೇಲ್ ಸೈನ್ಯ ಗಾಜಾದಲ್ಲಿ ನಡೆಸಿದ ನರಮೇಧ : ಎರಡು ವರ್ಷಗಳಲ್ಲಿ 20,000 ಮಕ್ಕಳ ಹತ್ಯೆ- ವಿಶ್ವಸಂಸ್ಥೆ ವರದಿ
ಮಕ್ಕಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಧೂಳಿನ ಬಿರುಗಾಳಿ ಮುಂದುವರಿಕೆ- ಹಲವು ಭಾಗಗಳಲ್ಲಿ ಮಳೆ
ಶಾಂತಿ ಮರೀಚಿಕೆ…?: ಲೆಬನಾನ್ನಲ್ಲಿ ದಾಳಿ ತೀವ್ರಗೊಳಿಸಿದ ಇಸ್ರೇಲ್- ಮತ್ತೆ ಹಾರ್ಮುಝ್ ಬಂದ್!
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ