ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಮಧ್ಯಾಹ್ನ 12.54 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಸುಂಟಿಕೊಪ್ಪ, ಸೋಮವಾರಪೇಟೆ, ಶಾಂತಳ್ಳಿ, ಬೆಟ್ಟದಳ್ಳಿ, ಮಕ್ಕಂದೂರು ಭಾಗದಲ್ಲಿ ಜೋರು ಶಬ್ದದ ಬಳಿಕ ಭೂಮಿ ಅಲುಗಾಡಿದಂತಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ.ಮಡಿಕೇರಿಯ ಗಣಪತಿ ಬೀದಿ, ಮಹದೇವಪೇಟೆಯ ನಿವಾಸಿಗಳು ಶಬ್ದ ಕೇಳಿ ಮನೆಯಿಂದ ಹೊರಗೆ ಓಡಿ ಬಂದಿದ್ದರು.
ಸುಂಟಿಕೊಪ್ಪ, ಹರದೂರು, ಕೆದಕಲ್, ಮಾದಾಪುರದ ಕೆಲವು ಮನೆಗಳಲ್ಲಿ ಪಾತ್ರೆ, ಕುರ್ಚಿ, ಮಂಚಗಳು ಅಲುಗಾಡಿವೆ. ಬಂಡೆಯೊಂದು ಮನೆಗೆ ಅಪ್ಪಳಿಸಿದ ಅನುಭವ ಉಂಟಾದ ಕೂಡಲೇ ಆಚೆಗೆ ಓಡಿಬಂದೆವು ಎಂದು ಹರದೂರು ಗ್ರಾಮದ ಮೀನಾ ಮಾಹಿತಿ ನೀಡಿದರು. ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಭೂಮಿ ಸಡಿಲಗೊಂಡಿದೆ. ಅದೇ ಕಾರಣಕ್ಕೆ ಕಂಪಿಸಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
‘ಕುಶಾಲನಗರ ಸಮೀಪದ ಹಾರಂಗಿ ಜಲಾಶಯದ ಸಮೀಪವಿರುವ ಮಾಪನ ಕೇಂದ್ರದಲ್ಲಿ ಕಂಪನದ ತೀವ್ರತೆ ದಾಖಲಾಗಿಲ್ಲ. 1 ರಿಕ್ಟರ್ಗಿಂತ ಹೆಚ್ಚು ತೀವ್ರತೆಯಿದ್ದರೆ ಮಾತ್ರ ದಾಖಲಾಗುತ್ತದೆ. ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಪರಿಶೀಲಿಸಲಾಗುವುದು’ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಬಿ.ರೇಷ್ಮಾ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಫೆ.21(ನಾಳೆ)ರಿಂದ ಇತಿಹಾಸ ಪ್ರಸಿದ್ಧ ಕೊಡಗು ಎಮ್ನೆಮ್ಮಾಡು ಮಖಾಂ ಉರೂಸ್ ಆರಂಭ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಹಲೀಮ ಅಲ್ ಕಿಂದಿ ವುಮೆನ್ಸ್ ಅಕಾಡೆಮಿ’ಮರ್ಕಝ್ ಕೊಟ್ಟಮುಡಿ’ – ದ್ವಿತೀಯ ಪಿಯುಸಿಗೆ ಶೇ100 ಫಲಿತಾಂಶ
SYS 30ನೇ ವಾರ್ಷಿಕ ಸಮ್ಮೇಳನ ಪ್ರಚಾರ- ಕೊಡಗು ಜಿಲ್ಲಾ ಉಲಮಾ ಸಂಗಮ
ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಸಮಿತಿ- ನೂತನ ಸಾರಥಿಗಳು
‘ಪರಂಪರೆಯ ಪ್ರತಿನಿಧಿಗಳಾಗೋಣ’ : ಸಿದ್ಧಾಪುರದಲ್ಲಿ ನಡೆದ ಅದ್ದೂರಿ ಎಸ್ ವೈ ಎಸ್ ಯುವಜನೋತ್ಸವ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಅಶಾಂತಿ ಉಂಟು ಮಾಡುವವರಿಗೆ ಕಠಿಣ ಶಿಕ್ಷೆಯಾಗಲಿ: ಎಸ್ಸೆಸ್ಸೆಫ್ ಕೊಡಗು
ಕೊಡಗು ಎಸ್ಸೆಸ್ಸೆಫ್ ಕ್ಯಾಂಪಸ್ ಅಸ್ಸೆಂಬ್ಲಿ ಯಶಸ್ವಿ ಸಮಾಪ್ತಿ
ಕೊಡಗು ಸುನ್ನೀ ಸಮನ್ವಯ ಸಮಿತಿಯಿಂದ ಮೊಹಲ್ಲಾ ನಾಯಕರ ಸಂಗಮ