ಕುವೈತ್ ಸಿಟಿ: ಕುವೈತ್ನ ವಿದ್ಯುತ್ ಮತ್ತು ನೀರು ಸಂಸ್ಕರಣಾ ಘಟಕವೊಂದರ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಮೂಲದ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ದಾಳಿಯಿಂದಾಗಿ ಪ್ಲಾಂಟ್ನ ಸರ್ವಿಸ್ ಕಟ್ಟಡವೊಂದು ತೀವ್ರವಾಗಿ ಜಖಂಗೊಂಡಿದೆ ಎಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೇ ತುರ್ತು ತಂಡಗಳು ಮತ್ತು ತಾಂತ್ರಿಕ ತಜ್ಞರು ಸ್ಥಳಕ್ಕೆ ಧಾವಿಸಿ ದುರಸ್ತಿ ಕಾರ್ಯ ಆರಂಭಿಸಿದ್ದು, ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಮೃತಪಟ್ಟ ಭಾರತೀಯ ಕಾರ್ಮಿಕನ ಬಗ್ಗೆ ಹೆಚ್ಚಿನ ವಿವರಗಳು ಇನ್ನು ಲಭ್ಯವಾಗಿಲ್ಲ. ಈ ದುರಂತಕ್ಕೆ ಕುವೈತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮೃತರ ಕುಟುಂಬಕ್ಕೆ ಅತೀವ ದುಃಖ ಮತ್ತು ಸಾಂತ್ವನಗಳನ್ನು ತಿಳಿಸಿರುವ ರಾಯಭಾರ ಕಚೇರಿಯು, ಅಗತ್ಯವಿರುವ ಎಲ್ಲಾ ನೆರವು ನೀಡಲು ಕುವೈತ್ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ತಿಳಿಸಿದೆ.
ಸೇವೆಗಳಿಗೆ ಅಡ್ಡಿಯಿಲ್ಲ: ವಿದ್ಯುತ್ ಮತ್ತು ನೀರು ಸರಬರಾಜು ಜಾಲಕ್ಕೆ ಯಾವುದೇ ಅಡ್ಡಿಯಾಗಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮ: ಪ್ಲಾಂಟ್ನ ಕಾರ್ಯಕ್ಷಮತೆಯನ್ನು ಕಾಪಾಡಿಕೊಳ್ಳಲು ಸಚಿವಾಲಯವು ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಸಾರ್ವಜನಿಕರಿಗೆ ಮನವಿ: ಸಾರ್ವಜನಿಕರು ಶಾಂತವಾಗಿರಬೇಕು ಮತ್ತು ಯಾವುದೇ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಸಚಿವಾಲಯ ವಿನಂತಿಸಿದೆ.
ಮಾಹಿತಿಗಳನ್ನು ಕೇವಲ ಅಧಿಕೃತ ಮೂಲಗಳಿಂದ ಮಾತ್ರ ಪಡೆದುಕೊಳ್ಳಬೇಕು ಮತ್ತು ಈ ಬಗ್ಗೆ ಪಾರದರ್ಶಕವಾಗಿ ಮಾಹಿತಿ ನೀಡಲಾಗುವುದು ಎಂದು ವಿದ್ಯುತ್, ನೀರು ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ವಕ್ತಾರರಾದ ಫಾತಿಮಾ ಜೌಹರ್ ಹಯಾತ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಸೀಸನ್: ಮಕ್ಕಾ ಪ್ರವೇಶದ ಅನುಮತಿ ಪತ್ರ ವಿತರಣೆ ಆರಂಭ
ಗಲ್ಫ್ ವಲಯದಲ್ಲಿ ಶಾಂತಿಯ ಹೊಸ ಪರ್ವ – ಕದನ ವಿರಾಮ ನಿರ್ಧಾರಕ್ಕೆ ಜಿಸಿಸಿ ಪೂರ್ಣ ಬೆಂಬಲ
ಬಹ್ರೇನ್ ವೈಮಾನಿಕ ಮಾರ್ಗ ಮುಕ್ತ- ವಿಮಾನಯಾನ ಪುನಾರಂಭಕ್ಕೆ ಹಸಿರು ನಿಶಾನೆ
ದಾಳಿಯ ಭೀತಿ: ಸೌದಿ-ಬಹ್ರೇನ್ ‘ಕಾಸ್ವೇ’ ಬಂದ್- ಸಂಚಾರ ಸಂಪೂರ್ಣ ಸ್ಥಗಿತ
ಸೌದಿ ಅರೇಬಿಯಾ: ಇನ್ನೂ 69 ಹುದ್ದೆಗಳಲ್ಲಿ ಶೇ.100 ಸ್ವದೇಶೀಕರಣ ಜಾರಿ
ಸೌದಿ: ನಾಳೆಯಿಂದ ಭಾರಿ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಎಚ್ಚರಿಕೆ
ಇರಾನ್ ದಾಳಿ; ವಿಶ್ವದ ಅತಿದೊಡ್ಡ ‘ಎಮಿರೇಟ್ಸ್ ಗ್ಲೋಬಲ್ ಅಲ್ಯೂಮಿನಿಯಂ’ ಕಾರ್ಯಾಚರಣೆ ಸ್ಥಗಿತ
ಹಜ್-ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಪವಿತ್ರ ಮಕ್ಕಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣ
ಚಾಲನೆ ವೇಳೆ ತಿಂಡಿ ಮತ್ತು ಮೇಕಪ್ಗೆ ಬ್ರೇಕ್- ಸೌದಿ ಸಂಚಾರಿ ವಿಭಾಗದ ಕಟ್ಟುನಿಟ್ಟಿನ ಸೂಚನೆ
ಯುದ್ಧದ ಸನ್ನಿವೇಶದಲ್ಲಿ ಸುಲಿಗೆ: ಸೌದಿ ಪ್ರವಾಸಿಗರನ್ನು ಲೂಟಿ ಮಾಡುತ್ತಿರುವ ವಿಮಾನಯಾನ ಸಂಸ್ಥೆಗಳು