ಕುವೈತ್ ಸಿಟಿ: ಕುವೈತ್ನ ವಿದ್ಯುತ್ ಮತ್ತು ನೀರು ಸಂಸ್ಕರಣಾ ಘಟಕವೊಂದರ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಮೂಲದ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ದಾಳಿಯಿಂದಾಗಿ ಪ್ಲಾಂಟ್ನ ಸರ್ವಿಸ್ ಕಟ್ಟಡವೊಂದು ತೀವ್ರವಾಗಿ ಜಖಂಗೊಂಡಿದೆ ಎಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೇ ತುರ್ತು ತಂಡಗಳು ಮತ್ತು ತಾಂತ್ರಿಕ ತಜ್ಞರು ಸ್ಥಳಕ್ಕೆ ಧಾವಿಸಿ ದುರಸ್ತಿ ಕಾರ್ಯ ಆರಂಭಿಸಿದ್ದು, ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಮೃತಪಟ್ಟ ಭಾರತೀಯ ಕಾರ್ಮಿಕನ ಬಗ್ಗೆ ಹೆಚ್ಚಿನ ವಿವರಗಳು ಇನ್ನು ಲಭ್ಯವಾಗಿಲ್ಲ. ಈ ದುರಂತಕ್ಕೆ ಕುವೈತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮೃತರ ಕುಟುಂಬಕ್ಕೆ ಅತೀವ ದುಃಖ ಮತ್ತು ಸಾಂತ್ವನಗಳನ್ನು ತಿಳಿಸಿರುವ ರಾಯಭಾರ ಕಚೇರಿಯು, ಅಗತ್ಯವಿರುವ ಎಲ್ಲಾ ನೆರವು ನೀಡಲು ಕುವೈತ್ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ತಿಳಿಸಿದೆ.
ಸೇವೆಗಳಿಗೆ ಅಡ್ಡಿಯಿಲ್ಲ: ವಿದ್ಯುತ್ ಮತ್ತು ನೀರು ಸರಬರಾಜು ಜಾಲಕ್ಕೆ ಯಾವುದೇ ಅಡ್ಡಿಯಾಗಿಲ್ಲ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮ: ಪ್ಲಾಂಟ್ನ ಕಾರ್ಯಕ್ಷಮತೆಯನ್ನು ಕಾಪಾಡಿಕೊಳ್ಳಲು ಸಚಿವಾಲಯವು ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಸಾರ್ವಜನಿಕರಿಗೆ ಮನವಿ: ಸಾರ್ವಜನಿಕರು ಶಾಂತವಾಗಿರಬೇಕು ಮತ್ತು ಯಾವುದೇ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಸಚಿವಾಲಯ ವಿನಂತಿಸಿದೆ.
ಮಾಹಿತಿಗಳನ್ನು ಕೇವಲ ಅಧಿಕೃತ ಮೂಲಗಳಿಂದ ಮಾತ್ರ ಪಡೆದುಕೊಳ್ಳಬೇಕು ಮತ್ತು ಈ ಬಗ್ಗೆ ಪಾರದರ್ಶಕವಾಗಿ ಮಾಹಿತಿ ನೀಡಲಾಗುವುದು ಎಂದು ವಿದ್ಯುತ್, ನೀರು ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ವಕ್ತಾರರಾದ ಫಾತಿಮಾ ಜೌಹರ್ ಹಯಾತ್ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ