ಮನಾಮ: ಪ್ರಾದೇಶಿಕ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಬಹ್ರೇನ್ ವೈಮಾನಿಕ ಮಾರ್ಗವನ್ನು (Airspace) ಪುನಃ ತೆರೆಯಲಾಗುವುದು ಎಂದು ಸಾರಿಗೆ ಮತ್ತು ದೂರಸಂಪರ್ಕ ಸಚಿವಾಲಯದ ನಾಗರಿಕ ವಿಮಾನಯಾನ ವ್ಯವಹಾರಗಳ ಇಲಾಖೆ ಘೋಷಿಸಿದೆ. ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ಸ್ಥಗಿತಗೊಂಡಿದ್ದ ಬಹ್ರೇನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ ಇನ್ನು ಮುಂದೆ ಸಹಜ ಸ್ಥಿತಿಗೆ ಮರಳಲಿದ್ದು, ವಿಮಾನ ಸೇವೆಗಳು ಪುನಾರಂಭಗೊಳ್ಳಲಿವೆ.
ಅನಿವಾಸಿಗಳಿಗೆ ಭಾರಿ ಸಮಾಧಾನ
ವಿಮಾನ ನಿಲ್ದಾಣ ಬಂದ್ ಆಗಿದ್ದರಿಂದ ತುರ್ತಾಗಿ ಊರಿಗೆ ಮರಳಬೇಕಿದ್ದ ಮತ್ತು ಕೆಲಸಕ್ಕೆ ಹಾಜರಾಗಬೇಕಿದ್ದ ಅನಿವಾಸಿ ಭಾರತೀಯರು ಸೇರಿದಂತೆ ಅನೇಕ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದರು. ನೇರ ವಿಮಾನ ಸೌಲಭ್ಯವಿಲ್ಲದ ಕಾರಣ ಸೌದಿ ಅರೇಬಿಯಾದ ದಮ್ಮಾಮ್ ಮೂಲಕ ದುಬಾರಿ ದರ ನೀಡಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇತ್ತು. ಇದೀಗ ವಿಮಾನಯಾನ ಪುನಾರಂಭಗೊಳ್ಳುತ್ತಿರುವುದು ವಲಸಿಗರಿಗೆ ದೊಡ್ಡ ಮಟ್ಟದ ನಿರಾಳತೆ ತಂದಿದೆ.
ಸುರಕ್ಷತೆಗೆ ಆದ್ಯತೆ
ವೈಮಾನಿಕ ಸಂಚಾರದ ವೇಳಾಪಟ್ಟಿಯ ಬಗ್ಗೆ ನಾಗರಿಕ ವಿಮಾನಯಾನ ಪ್ರಾಧಿಕಾರವು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಿದೆ. ಈ ಕುರಿತು ಮಾಹಿತಿ ನೀಡಿರುವ ವಿಭಾಗವು,
“ಪ್ರಯಾಣಿಕರ ಸುರಕ್ಷತೆ ನಮಗೆ ಮುಖ್ಯ. ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಅತ್ಯುನ್ನತ ಭದ್ರತಾ ಮಾನದಂಡಗಳೊಂದಿಗೆ ಸುಗಮ ವೈಮಾನಿಕ ಸೇವೆಯನ್ನು ನೀಡಲು ನಾವು ಬದ್ಧರಾಗಿದ್ದೇವೆ,” ಎಂದು ತಿಳಿಸಿದೆ.
ಬಹ್ರೇನ್ ವಿಮಾನ ನಿಲ್ದಾಣವು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಸಜ್ಜಾಗಿದ್ದು, ಶೀಘ್ರದಲ್ಲೇ ಆಗಸದಲ್ಲಿ ವಿಮಾನಗಳ ಹಾರಾಟ ಶುರುವಾಗಲಿದೆ.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?