ದುಬೈ: ಸ್ನೇಹಿತರ ನಡುವಿನ ಗಲಾಟೆಯನ್ನು ಶಾಂತಗೊಳಿಸಲು ಹೋದ ಮಲಯಾಳಿ ಯುವಕನೋರ್ವ ದುಬೈನಲ್ಲಿ ಚೂರಿ ಇರಿತಕ್ಕೆ ಬಲಿಯಾಗಿರುವ ದಾರುಣ ಘಟನೆ ವರದಿಯಾಗಿದೆ.
ಕೋಝಿಕ್ಕೋಡ್ ಜಿಲ್ಲೆಯ ಚೆರುವಣ್ಣೂರು ಮಧುರ ಬಜಾರ್ ನಿವಾಸಿ, ನಜಾತ್ ಮಂಜಿಲ್ನ ಜಸೀಲ್ (32) ಮೃತಪಟ್ಟ ದುರ್ದೈವಿ. ಕಳೆದ ಮೂರು ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದ ಇವರು, ತಾವು ವಾಸವಿದ್ದ ರೂಮಿನಲ್ಲಿ ಇಬ್ಬರು ಸ್ನೇಹಿತರ ನಡುವೆ ನಡೆಯುತ್ತಿದ್ದ ತೀವ್ರ ವಾಕ್ಸಮರವನ್ನು ತಡೆಯಲು ಮಧ್ಯಪ್ರವೇಶಿಸಿದ್ದರು. ಈ ಸಂದರ್ಭದಲ್ಲಿ ಸ್ನೇಹಿತನೊಬ್ಬ ಚೂರಿಯಿಂದ ಇರಿದಿದ್ದರಿಂದ ಜಸೀಲ್ ಅವರ ಕುತ್ತಿಗೆಗೆ ಗಂಭೀರ ಗಾಯವಾಗಿತ್ತು.
ವಿಷಯ ತಿಳಿದ ಕೂಡಲೇ ದುಬೈ ಪೊಲೀಸರು ಸ್ಥಳಕ್ಕೆ ಆಗಮಿಸಿ ಜಸೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ, ಅತಿಯಾದ ರಕ್ತಸ್ರಾವದಿಂದಾಗಿ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತದೇಹವನ್ನು ದುಬೈನ ಅಲ್ ರಾಶಿದಿಯಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?