ಮಂಗಳೂರು: ಇಲಾಖೆಯೊಳಗಿನ ಸಣ್ಣಪುಟ್ಟ ಗೊಂದಲಗಳ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷ್ನರ್ ವರ್ಗಾವಣೆ ವಿಚಾರ ಹೊರಬಾರದಂತೆ ಮಾಡಬೇಕೆಂದು ಡ್ರಗ್ಸ್ ಮುಕ್ತ ಸಮಾಜದ ಆಂದೋಲನದ ಸಾರಥಿ ಇಕ್ಬಾಲ್ ಬಾಳಿಲ ಅವರು ಡಿಜಿಪಿಗೆ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆಯ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರು ತಮ್ಮ ಮೇಲೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡಿಸಿಆರ್ ಎಸ್ಪಿ ಕಾಶಿನಾಥ್ ಅವರು ಡಿಜಿಪಿಗೆ ಪತ್ರ ಬರೆದಿರುವ ವಿಚಾರ ಕರಾವಳಿ ಭಾಗದಾದ್ಯಂತ ಆತಂಕದ ವಾತಾವರಣವನ್ನು ಉಂಟುಮಾಡಿದೆ.
ಈ ಹಿನ್ನೆಲೆದಲ್ಲಿ, ಎಸ್ಪಿ ಕಾಶಿನಾಥ್ ಅವರಿಗೆ ಯಾವುದೇ ರೀತಿಯ ಮಾನಸಿಕ ಹಿಂಸೆ ಅಥವಾ ಅನ್ಯಾಯವಾಗಿದ್ದರೆ, ಅದಕ್ಕೆ ನ್ಯಾಯಯುತ ಪರಿಹಾರವನ್ನು ಡಿಜಿಪಿ ಕಂಡುಕೊಳ್ಳಬಹುದು. ಆದರೆ ಯಾವುದೇ ಕಾರಣಕ್ಕೂ ವರ್ಗಾವಣೆ ವಿಚಾರ ಮುಂದಕ್ಕೆ ಬರಬಾರದು ಎಂದು ಇಕ್ಬಾಲ್ ಬಾಳಿಲ ಮನವಿಯಲ್ಲಿ ತಿಳಿಸಿದ್ದಾರೆ.
ಕಳೆದ ಒಂದು ವರ್ಷ ಹಿಂದೆ ಕರಾವಳಿ ಪ್ರದೇಶದಲ್ಲಿ ಕೋಮು ಕಲಹದ ವಾತಾವರಣ ಮತ್ತು ಮಾದಕ ವಸ್ತುಗಳ ಅಟ್ಟಹಾಸ ಗಂಭೀರ ಮಟ್ಟಕ್ಕೇರಿದ್ದ ಸಂದರ್ಭದಲ್ಲಿ, ಸುಧೀರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ಕಮಿಷ್ನರ್ ಆಗಿ ನೇಮಕ ಮಾಡಲಾಗಿತ್ತು. ಅವರ ನೇಮಕಾತಿಯ ನಂತರ, ಹಿಂದಿನಿಂದಲೂ ಇದ್ದ ಸೌಹಾರ್ದಯುತ ವಾತಾವರಣವನ್ನು ಪುನಃ ಸ್ಥಾಪಿಸುವಲ್ಲಿ ಹಾಗೂ ಡ್ರಗ್ಸ್ ಮಾಫಿಯಾಗಳನ್ನು ನಿಯಂತ್ರಿಸುವಲ್ಲಿ ಮಹತ್ತರ ಬದಲಾವಣೆ ಕಂಡುಬಂದಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಡ್ರಗ್ಸ್ ವಿರೋಧಿ ಆಂದೋಲನದ ಭಾಗವಾಗಿ ಹಲವಾರು ಬಾರಿ ಕಮಿಷ್ನರ್ ಜೊತೆ ಚರ್ಚೆ ನಡೆಸಿದ್ದು, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸಮಾಜಮುಖಿ ಚಟುವಟಿಕೆಗಳಿಗೆ ಅವರಿಂದ ಸಾಕಷ್ಟು ಪ್ರೇರಣೆ ಮತ್ತು ಸಹಕಾರ ದೊರೆತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಸುಧೀರ್ ಕುಮಾರ್ ರೆಡ್ಡಿ ಅವರ ಸೇವೆ ಅಗತ್ಯವಾಗಿದ್ದು, ಕೆಲವು ಅಪ್ರತ್ಯಕ್ಷ ಶಕ್ತಿಗಳ ಪ್ರಭಾವದಿಂದ ವರ್ಗಾವಣೆಗೆ ಪ್ರಯತ್ನಗಳು ನಡೆಯುತ್ತಿದ್ದರೆ, ಅದನ್ನು ಸರ್ಕಾರ ಗಂಭೀರವಾಗಿ ಪರಿಶೀಲಿಸಬೇಕು ಎಂದು ಮನವಿ ಮಾಡಲಾಗಿದೆ.
ಈ ಕುರಿತು ಮುಖ್ಯಮಂತ್ರಿಗಳು, ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳಿಗೆ ಕೂಡ ಪತ್ರ ಬರೆಯುವುದಾಗಿ ಇಕ್ಬಾಲ್ ಬಾಳಿಲ ತಿಳಿಸಿದ್ದಾರೆ. ಕರಾವಳಿ ಭಾಗದ ಶಾಂತಿಯನ್ನು ಬಯಸುವ ಜನತೆಗೆ ಸುಧೀರ್ ಕುಮಾರ್ ರೆಡ್ಡಿ ಅವರಂತಹ ಅಧಿಕಾರಿಯ ಅವಶ್ಯಕತೆ ಇದೆ ಎಂದು ಕೂಡ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ