ಬಂಟ್ವಾಳ: ಪಾಣೆಮಂಗಳೂರಿನ ಎಸ್.ಎಸ್ ಹಾಲ್ನಲ್ಲಿ ಇತ್ತೀಚೆಗೆ ನಡೆದ ಎಸ್.ವೈ.ಎಸ್ (SYS) ಬಂಟ್ವಾಳ ಝೋನ್ ವಾರ್ಷಿಕ ಕೌನ್ಸಿಲ್ ಸಭೆಯಲ್ಲಿ, ಮೇ 2ರ ಶನಿವಾರ ನಡೆಯಲಿರುವ ‘ಮಾದರಿ ಮದುವೆ ಜನಜಾಗೃತಿ ಅಭಿಯಾನ’ದ ಸಮಾರೋಪ ಸಮಾರಂಭವನ್ನು ಯಶಸ್ವಿಗೊಳಿಸಲು ಕರೆ ನೀಡಲಾಯಿತು.
ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಚಟ್ಟೆಕ್ಕಳ್ ದುಆ ನೆರವೇರಿಸಿದರು. ಝೋನ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಅಧ್ಯಕ್ಷತೆ ವಹಿಸಿದ್ದರು. ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯಲ್ಲಿ ಝೋನ್ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಕೊಳಕೆ ವರದಿ ವಾಚಿಸಿದರೆ, ಕೋಶಾಧಿಕಾರಿ ಅಶ್ರಫ್ ಪೆರಾಳ ಲೆಕ್ಕಪತ್ರ ಮಂಡಿಸಿದರು.
ಜಿಲ್ಲಾ ಉಪಾಧ್ಯಕ್ಷ ಹಾಫಿಳ್ ಯಾಕೂಬ್ ಸಅದಿ ನಾವೂರು ವೀಕ್ಷಕರಾಗಿ ಆಗಮಿಸಿ ತರಗತಿ ನಡೆಸಿಕೊಟ್ಟರು. ರಾಜ್ಯ ಉಪಾಧ್ಯಕ್ಷ ಇಬ್ರಾಹಿಂ ಖಲೀಲ್ ಮಾಲಿಕಿ ಶುಭಹಾರೈಸಿ ಮಾತನಾಡಿದರು.
ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ ಉಸ್ತಾದರ ಸಾನಿಧ್ಯದಲ್ಲಿ ಮೇ 2ರ ಶನಿವಾರ ಸಂಜೆ 4 ಗಂಟೆಗೆ ಪುತ್ತೂರು ದರ್ಭೆಯಿಂದ ಕಿಲ್ಲೆ ಮೈದಾನದವರೆಗೆ ಮಾದರಿ ಮದುವೆ ಜನಜಾಗೃತಿ ಜಾಥಾ ನಡೆಯಲಿದ್ದು, ಬಳಿಕ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಈ ಅಭಿಯಾನದಲ್ಲಿ ಇಸಾಬಾ ಸದಸ್ಯರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಇದೇ ಸಂದರ್ಭದಲ್ಲಿ ವಿನಂತಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಕೋಶಾಧಿಕಾರಿ ರಝಾಕ್ ಭಾರತ್, ಜಿಲ್ಲಾ ನಾಯಕರಾದ ರಶೀದ್ ಹಾಜಿ ವಗ್ಗ, ಅಶ್ರಫ್ ನಾರ್ಶ ಹಾಗೂ ಝೋನ್ ಪ್ರಮುಖರು ಉಪಸ್ಥಿತರಿದ್ದರು. ಅಲ್ತಾಫ್ ಕೊಳಕೆ ಸ್ವಾಗತಿಸಿ, ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ