ಮುಂಬೈ, ಏಪ್ರಿಲ್ 27: ಇಲ್ಲಿನ ಪೈಧುನಿ ಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ರಾತ್ರಿ ಮನೆಯಲ್ಲಿ ಬಿರಿಯಾನಿ ಔತಣಕೂಟ ಮುಗಿಸಿ, ಕಲ್ಲಂಗಡಿ ಹಣ್ಣು ಸೇವಿಸಿದ ಕುಟುಂಬವು ಬೆಳಗಾಗುವಷ್ಟರಲ್ಲಿ ಇಹಲೋಕ ತ್ಯಜಿಸಿದೆ. ಕಲ್ಲಂಗಡಿ ಹಣ್ಣು ತಿಂದ ನಂತರ ಉಂಟಾದ ದೈಹಿಕ ಅಸ್ವಸ್ಥತೆಯಿಂದ ಅವರು ಮೃತಪಟ್ಟಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.
ಮೃತರನ್ನು ಅಬ್ದುಲ್ಲಾ ದೊಕಾಡಿಯಾ (40), ಅವರ ಪತ್ನಿ ನಸ್ರೀನ್ (35) ಮತ್ತು ಪುತ್ರಿಯರಾದ ಆಯಿಷಾ (16) ಹಾಗೂ ಜೈನಾಬ್ (13) ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ರಾತ್ರಿ ಅಬ್ದುಲ್ಲಾ ಅವರ ಕುಟುಂಬವು ಸಂಬಂಧಿಕರಿಗಾಗಿ ಬಿರಿಯಾನಿ ಔತಣಕೂಟವನ್ನು ಏರ್ಪಡಿಸಿತ್ತು. ಸಂಬಂಧಿಕರು ಸೇರಿದಂತೆ ಒಟ್ಟು ಒಂಬತ್ತು ಜನರು ಈ ಊಟದಲ್ಲಿ ಭಾಗಿಯಾಗಿದ್ದರು. ಆದರೆ, ಸಂಬಂಧಿಕರಿಗೆ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗಿಲ್ಲ.
ರಾತ್ರಿ ಸುಮಾರು 10:30ಕ್ಕೆ ಸಂಬಂಧಿಕರು ತೆರಳಿದ ನಂತರ, ಕುಟುಂಬದ ಸದಸ್ಯರು ಮಾತ್ರ ಕಲ್ಲಂಗಡಿ ಹಣ್ಣನ್ನು ತಿಂದಿದ್ದರು ಎನ್ನಲಾಗಿದೆ.
ನಂತರ ಬೆಳಗಿನ ಜಾವ 1:00 ಗಂಟೆಯ ಸುಮಾರಿಗೆ ನಾಲ್ವರಿಗೂ ತೀವ್ರವಾಗಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಹತ್ತಿರದ ಕ್ಲಿನಿಕ್ಗೆ ಮತ್ತು ನಂತರ ಸ್ಥಿತಿ ಗಂಭೀರವಾದ ಕಾರಣ ‘ಸರ್ ಜೆ.ಜೆ ಆಸ್ಪತ್ರೆ’ಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಿಗ್ಗೆ ಮೊದಲು 13 ವರ್ಷದ ಜೈನಾಬ್ ಮೃತಪಟ್ಟಳು. ನಂತರ ಅಬ್ದುಲ್ಲಾ, ನಸ್ರೀನ್ ಮತ್ತು ಆಯಿಷಾ ಕೂಡ ಇಹಲೋಕ ತ್ಯಜಿಸಿದ್ದಾರೆ.
ಆಹಾರ ವಿಷಪೂರಿತವಾದ ಕಾರಣ (Food Poisoning) ಈ ಮರಣ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸಂಬಂಧಿಕರಿಗೂ ಬಿರಿಯಾನಿ ಬಡಿಸಲಾಗಿತ್ತು, ಆದರೆ ಅವರು ಆರೋಗ್ಯವಾಗಿದ್ದಾರೆ. ಕುಟುಂಬದವರು ಮಾತ್ರ ಸೇವಿಸಿದ ಕಲ್ಲಂಗಡಿ ಹಣ್ಣು ಮರಣ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಪೊಲೀಸರು ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಅಲ್ಲದೆ, ಮನೆಯಲ್ಲಿದ್ದ ಆಹಾರದ ಅವಶೇಷಗಳನ್ನು ಮತ್ತು ಮೃತರ ಆಂತರಿಕ ಅಂಗಗಳ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (Forensic Lab) ಕಳುಹಿಸಲಾಗಿದೆ. ವರದಿ ಬಂದ ನಂತರವೇ ಮರಣದ ನಿಖರ ಕಾರಣ ತಿಳಿಯಲಿದೆ ಎಂದು ಡಿಸಿಪಿ ಪ್ರವೀಣ್ ಮುಂಡೆ ತಿಳಿಸಿದ್ದಾರೆ. ಜೆ.ಜೆ ಮಾರ್ಗ್ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಜೆ ಈ ಘಟನೆಯು ಸಾರ್ವಜನಿಕರಲ್ಲಿ ಹಣ್ಣು ಮತ್ತು ಆಹಾರ ಸೇವನೆಯ ಬಗ್ಗೆ ಆತಂಕ ಮೂಡಿಸಿದೆ.















ಇನ್ನಷ್ಟು ಸುದ್ದಿಗಳು
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ
ಸತತ 13ನೇ ವರ್ಷವೂ ದಾರುಲ್ ಇರ್ಶಾದ್ ಬಾಯ್ಸ್ ಹೈಸ್ಕೂಲ್ಗೆ 100% ಫಲಿತಾಂಶ
ದಕ್ಷ ಅಧಿಕಾರಿಯ ವರ್ಗಾವಣೆಗೆ ಬಲಾಢ್ಯರ ಪಿತೂರಿ- ಕಮೀಷನರ್ ಪರ ನಿಲ್ಲುತ್ತಾರಾ ಮಂಗಳೂರು ಜನತೆ?
ಮದೀನಾ ತಲುಪಿದ ಭಾರತದ ಮೊದಲ ಹಜ್ ತಂಡ- ಕೆಸಿಎಫ್ ನಿಂದ ಅದ್ಧೂರಿ ಸ್ವಾಗತ