ಪುತ್ತೂರು: ಎಸ್.ವೈ.ಎಸ್ (SYS) ರಾಜ್ಯ ಸಮಿತಿಯ ವತಿಯಿಂದ ಆಯೋಜಿಸಲಾದ ‘ಮಾದರಿ ಮದುವೆ’ ಜನ ಜಾಗೃತಿ ಆಂದೋಲನದ ಮಹತ್ವಪೂರ್ಣ ಸಮಾರೋಪ ಸಮಾರಂಭವು ಮೇ 2 ರಂದು ಶನಿವಾರ ಸಂಜೆ 4:00 ಗಂಟೆಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ನಡೆಯಲಿದೆ.
ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ (ಎ.ಪಿ. ಉಸ್ತಾದ್) ರವರ ಘನ ಸಾನಿಧ್ಯದಲ್ಲಿ ಈ ಸಮಾರಂಭವು ಜರುಗಲಿದೆ.
ಈ ಐತಿಹಾಸಿಕ ಸಮಾರೋಪ ಸಮಾರಂಭದ ವ್ಯಾಪಕ ಪ್ರಚಾರಾರ್ಥವಾಗಿ ಎಸ್.ವೈ.ಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿಯು ಜಿಲ್ಲಾದ್ಯಂತ ಬೃಹತ್ ‘ವಾಹನ ಸಂದೇಶ ಜಾಥಾ’ವನ್ನು ಹಮ್ಮಿಕೊಂಡಿದೆ.
25 ಕೇಂದ್ರಗಳಲ್ಲಿ ಸಂಚರಿಸಲಿರುವ ಜಾಥಾ:
ಎಸ್.ವೈ.ಎಸ್ ದ.ಕ. ವೆಸ್ಟ್ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷರಾದ ಮಹ್ಬೂಬ್ ಸಖಾಫಿ ಕಿನ್ಯ ರವರ ನೇತೃತ್ವದಲ್ಲಿ ಈ ವಾಹನ ಜಾಥಾವು ನಡೆಯಲಿದೆ. ಎಪ್ರಿಲ್ 28 ಮಂಗಳವಾರ ಮತ್ತು ಎಪ್ರಿಲ್ 29 ಬುಧವಾರದಂದು ಎರಡು ದಿನಗಳ ಕಾಲ ವೆಸ್ಟ್ ಜಿಲ್ಲಾ ವ್ಯಾಪ್ತಿಯ ಪ್ರಮುಖ 25 ಕೇಂದ್ರಗಳಲ್ಲಿ ಜಾಥಾವು ಸಂಚರಿಸಿ, ಸಮಾರೋಪ ಸಮಾರಂಭದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಿದೆ.
ಆಂದೋಲನದ ಯಶಸ್ಸಿಗೆ ಮತ್ತು ಸಮಾರೋಪ ಸಮಾರಂಭದ ಪೂರ್ವಭಾವಿ ಪ್ರಚಾರಕ್ಕಾಗಿ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್.ವೈ.ಎಸ್ ದ.ಕ. ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ
ಸತತ 13ನೇ ವರ್ಷವೂ ದಾರುಲ್ ಇರ್ಶಾದ್ ಬಾಯ್ಸ್ ಹೈಸ್ಕೂಲ್ಗೆ 100% ಫಲಿತಾಂಶ
ದಕ್ಷ ಅಧಿಕಾರಿಯ ವರ್ಗಾವಣೆಗೆ ಬಲಾಢ್ಯರ ಪಿತೂರಿ- ಕಮೀಷನರ್ ಪರ ನಿಲ್ಲುತ್ತಾರಾ ಮಂಗಳೂರು ಜನತೆ?