ಪುತ್ತೂರು: ಎಸ್ ವೈ ಎಸ್ (SYS) ಕರ್ನಾಟಕ ರಾಜ್ಯ ಸಮಿತಿಯು ಹಮ್ಮಿಕೊಂಡಿರುವ ‘ಮಾದರಿ ಮದುವೆ’ ಅಭಿಯಾನದ ಸಮಾರೋಪ ಸಮಾವೇಶವು ಮೇ 2ರಂದು ಪುತ್ತೂರಿನಲ್ಲಿ ಅತ್ಯಂತ ವೈಭವದೊಂದಿಗೆ ನಡೆಯಲಿದೆ ಎಂದು ಎಸ್ಸೆಸ್ಸೆಫ್ (SSF) ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಸಮಾಜದಲ್ಲಿ ಸರಳ ಹಾಗೂ ಮಾದರಿ ಮದುವೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಂದು ಸಂಜೆ 4:00 ಗಂಟೆಗೆ ಪುತ್ತೂರಿನ ದರ್ಬೆ ವೃತ್ತದಿಂದ ಕಿಲ್ಲೆ ಮೈದಾನದವರೆಗೆ ಭವ್ಯ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಐತಿಹಾಸಿಕ ಜಾಥಾದಲ್ಲಿ ಸುನ್ನಿ ಸಂಘ ಕುಟುಂಬದ ವಿವಿಧ ಸ್ತರದ ನಾಯಕರು ಹಾಗೂ ಸಾವಿರಾರು ಸಂಖ್ಯೆಯ ಶಿಸ್ತುಬದ್ಧ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ನಂತರ ಸಂಜೆ 6:00 ಗಂಟೆಗೆ ಕಿಲ್ಲೆ ಮೈದಾನದಲ್ಲಿ ಸಮಾರೋಪ ಸಮ್ಮೇಳನ ಜರುಗಲಿದ್ದು, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್, ಕರ್ನಾಟಕ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್ ಹಾಗೂ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಮೌಲಾನಾ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಅವರು ಮಾದರಿ ಮದುವೆ ವಿಷಯದ ಕುರಿತು ವಿಶೇಷ ಪ್ರವಚನ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಹಲವಾರು ಉಲಮಾ-ಉಮರಾ ನೇತಾರರು, ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ರಂಗದ ಪ್ರಮುಖ ಗಣ್ಯರು ಉಪಸ್ಥಿತರಿರಲಿದ್ದಾರೆ.
ಜಿಲ್ಲಾ ವ್ಯಾಪ್ತಿಯ ಸುನ್ನಿ ಸಂಘ ಕುಟುಂಬದ ಎಲ್ಲಾ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು SSF ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ವಿನಂತಿಸಿದೆ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ