ಮಂಗಳೂರು : ಎಸ್ವೈಎಸ್ ರಾಜ್ಯ ಸಮಿತಿಯು ಆಯೋಜಿಸಿದ ಮಾದರಿ ಮದುವೆ ಅಭಿಯಾನದ ಸಮಾರೋಪ ಸಮ್ಮೇಳನವು ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆಯ ಹೃದಯ ಭಾಗವಾದ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ 2026 ಮೇ 2 ಶನಿವಾರದಂದು ಸಂಜೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ ಪಿ ಉಸ್ತಾದ್ ಆಗಮಿಸಲಿದ್ದು, ಝೈನುಲ್ ಉಲಮಾ ಮಾಣಿ ಉಸ್ತಾದರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶೈಖುನಾ ಪೇರೋಡ್ ಉಸ್ತಾದರು ಮುಖ್ಯ ಪ್ರಭಾಷಣಗೈಯಲಿದ್ದು, ಹಲವಾರು ಸಾದಾತುಗಳು, ಉಲಮಾ – ಉಮರಾ ನೇತಾರರು, ಸುನ್ನಿ ಸಂಘ ಕುಟುಂಬದ ನಾಯಕರು, ಚಿಂತಕರು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.
ಅಂದು ಅಪರಾಹ್ನ 3 ಕ್ಕೆ ಬೃಹತ್ ಕಾಲ್ನಡಿಗೆ ಜಾಗೃತಿ ಜಾಥಾವು ದರ್ಬೆಯಿಂದ ಆರಂಭಗೊಂಡು ಪುತ್ತೂರು ರಾಜ ಬೀದಿಯಲ್ಲಿ ಹಾದು ಸಮ್ಮೇಳನ ನಗರಿ ತಲುಪಲಿದೆ. ಜಿಲ್ಲೆಯ ಪ್ರತಿಷ್ಟಿತ ದಫ್, ಸ್ಕೌಟ್ ಹಾಗೂ ಎಸ್ವೈಎಸ್ ಇಸಾಬಾ ತಂಡವು ಭಾಗವಹಿಸಲಿದ್ದು ಜಾಥಾಗೆ ಮೆರಗು ನೀಡಲಿದೆ.
ನಾಳೆ ನಡೆಯುವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸುನ್ನಿ ಸಂಘ ಕುಟುಂಬದ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿರುತ್ತದೆ.















ಇನ್ನಷ್ಟು ಸುದ್ದಿಗಳು
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ