janadhvani

Kannada Online News Paper

ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ

ಮಂಗಳೂರು : ಎಸ್‌ವೈಎಸ್ ರಾಜ್ಯ ಸಮಿತಿಯು ಆಯೋಜಿಸಿದ ಮಾದರಿ ಮದುವೆ ಅಭಿಯಾನದ ಸಮಾರೋಪ ಸಮ್ಮೇಳನವು ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆಯ ಹೃದಯ ಭಾಗವಾದ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ 2026 ಮೇ 2 ಶನಿವಾರದಂದು ಸಂಜೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ ಪಿ ಉಸ್ತಾದ್ ಆಗಮಿಸಲಿದ್ದು, ಝೈನುಲ್ ಉಲಮಾ ಮಾಣಿ ಉಸ್ತಾದರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶೈಖುನಾ ಪೇರೋಡ್ ಉಸ್ತಾದರು ಮುಖ್ಯ ಪ್ರಭಾಷಣಗೈಯಲಿದ್ದು, ಹಲವಾರು ಸಾದಾತುಗಳು, ಉಲಮಾ – ಉಮರಾ ನೇತಾರರು, ಸುನ್ನಿ ಸಂಘ ಕುಟುಂಬದ ನಾಯಕರು, ಚಿಂತಕರು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.‌

ಅಂದು ಅಪರಾಹ್ನ 3 ಕ್ಕೆ ಬೃಹತ್ ಕಾಲ್ನಡಿಗೆ ಜಾಗೃತಿ ಜಾಥಾವು ದರ್ಬೆಯಿಂದ ಆರಂಭಗೊಂಡು ಪುತ್ತೂರು ರಾಜ ಬೀದಿಯಲ್ಲಿ ಹಾದು ಸಮ್ಮೇಳನ ನಗರಿ ತಲುಪಲಿದೆ. ಜಿಲ್ಲೆಯ ಪ್ರತಿಷ್ಟಿತ ದಫ್, ಸ್ಕೌಟ್ ಹಾಗೂ ಎಸ್‌ವೈಎಸ್ ಇಸಾಬಾ ತಂಡವು ಭಾಗವಹಿಸಲಿದ್ದು ಜಾಥಾಗೆ ಮೆರಗು ನೀಡಲಿದೆ.

ನಾಳೆ ನಡೆಯುವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸುನ್ನಿ ಸಂಘ ಕುಟುಂಬದ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿರುತ್ತದೆ.

ಇದನ್ನೂ ಓದಿರಿ...