ಅಬುಧಾಬಿ: ಬಕ್ರೀದ್ ಹಬ್ಬದ ನಿಮಿತ್ತ ಯುಎಇಯ ವಿವಿಧ ಜೈಲುಗಳಲ್ಲಿರುವ ಸಾವಿರಾರು ಕೈದಿಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಯುಎಇ ಅಧ್ಯಕ್ಷರು ಮತ್ತು ವಿವಿಧ ಎಮಿರೇಟ್ಗಳ ಆಡಳಿತಗಾರರು ಆದೇಶಿಸಿದ್ದಾರೆ. ಕಾರುಣ್ಯ ಮತ್ತು ಸಾಮಾಜಿಕ ಐಕ್ಯತೆಯನ್ನು ಬೆಳೆಸುವ ಹಾಗೂ ಕೈದಿಗಳಿಗೆ ಜೀವನದಲ್ಲಿ ಎರಡನೇ ಅವಕಾಶ ನೀಡುವ ಭಾಗವಾಗಿ ಈ ಮಹತ್ತರ ಮಾನವೀಯ ಕ್ರಮ ಕೈಗೊಳ್ಳಲಾಗಿದೆ.
ಯುಎಇ ಅಧ್ಯಕ್ಷರಾದ ಶೈಖ್ ಮುಹಮ್ಮದ್ ಬಿನ್ ಝಾಯೆದ್ ಆಲ್ ನಹ್ಯಾನ್ ಅವರು ದೇಶದ ವಿವಿಧ ಸುಧಾರಣಾ ಮತ್ತು ಶಿಕ್ಷಾ ಕೇಂದ್ರಗಳಿಂದ 956 ಕೈದಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ಇವರು ವಿವಿಧ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವವರಾಗಿದ್ದಾರೆ. ಕೈದಿಗಳ ಬಿಡುಗಡೆಯ ಜೊತೆಗೆ, ಅವರ ಶಿಕ್ಷೆಯ ಅವಧಿಯಲ್ಲಿನ ಎಲ್ಲಾ ಆರ್ಥಿಕ ಹೊಣೆಗಾರಿಕೆಗಳು ಮತ್ತು ದಂಡಗಳನ್ನು ಸಹ ಪಾವತಿಸುವುದಾಗಿ ಯುಎಇ ಅಧ್ಯಕ್ಷರು ಘೋಷಿಸಿದ್ದಾರೆ. ಈ ಕ್ರಮವು ಕೌಟುಂಬಿಕ ಸಂಬಂಧಗಳನ್ನು ಗಟ್ಟಿಗೊಳಿಸಲು ಮತ್ತು ಸಮಾಜದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಸಹಾಯ ಮಾಡುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಕ್ರೀದ್ ಹಬ್ಬದ ಅಂಗವಾಗಿ ದುಬೈ ಆಡಳಿತಗಾರ ಶೈಖ್ ಮುಹಮ್ಮದ್ ಬಿನ್ ರಾಶಿದ್ ಆಲ್ ಮಕ್ತೂಮ್ ಅವರು ವಿವಿಧ ದೇಶಗಳ 836 ಕೈದಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ರಾಸ್ ಅಲ್ ಖೈಮಾ ಆಡಳಿತಗಾರ ಶೈಖ್ ಸೌದ್ ಬಿನ್ ಸಕರ್ ಆಲ್ ಖಾಸಿಮಿ ಅವರು ಜೈಲಿನಲ್ಲಿ ಉತ್ತಮ ನಡವಳಿಕೆ ತೋರಿದ 443 ಕೈದಿಗಳಿಗೆ ಕ್ಷಮಾದಾನ ಘೋಷಿಸಿದ್ದಾರೆ. ಅಜ್ಮಾನ್ ಆಡಳಿತಗಾರ ಶೈಖ್ ಹುಮೈದ್ ಬಿನ್ ರಾಶಿದ್ ಆಲ್ ನುಐಮಿ 230 ಕೈದಿಗಳನ್ನು ಬಿಡುಗಡೆ ಮಾಡಲು ಸೂಚನೆ ನೀಡಿದ್ದಾರೆ.
ಶಾರ್ಜಾ ಆಡಳಿತಗಾರ ಶೈಖ್ ಡಾ. ಸುಲ್ತಾನ್ ಬಿನ್ ಮುಹಮ್ಮದ್ ಆಲ್ ಖಾಸಿಮಿ ಅವರು ಹಬ್ಬದ ನಿಮಿತ್ತ 227 ಕೈದಿಗಳಿಗೆ ಬಿಡುಗಡೆ ಭಾಗ್ಯ ಕಲ್ಪಿಸಿದ್ದಾರೆ. ಉಮ್ ಅಲ್ ಕುವೈನ್ ಆಡಳಿತಗಾರ ಶೈಖ್ ಸೌದ್ ಬಿನ್ ರಶೀದ್ ಅಲ್ ಮುಅಲ್ಲಾ ಕೂಡ ಜೈಲಿನಿಂದ ಹಲವು ಕೈದಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಇಸ್ಲಾಂಪುರ ಹೆಸರನ್ನು ಶ್ರೀರಾಮಪುರ ಎಂದು ಬದಲಿಸಬೇಕು- ಬಿಜೆಪಿ ಶಾಸಕರ ಬೇಡಿಕೆಗೆ ಗ್ರಾಮಸ್ಥರ ವಿರೋಧ