ದುಬೈ: ಯಾತ್ರಾ ಮಧ್ಯೆ ಅಪಘಾತವನ್ನು ನೋಡಿದಾಗ ತನ್ನ ವಾಹನವನ್ನು ಬದಿಗೆ ಸರಿಸಿ ಅಪಘಾತ ಸಂಭವಿಸಿದ ಸ್ಥಳಕ್ಕೆ ತೆರಲಿ ವೀಕ್ಷಿಸುವುದು ಹಲವರ ವಾಡಿಕೆಯಾಗಿದೆ. ಸಮಯವಿಲ್ಲದವರು ವೇಗವನ್ನು ನಿಯಂತ್ರಿಸಿ ಎಲ್ಲವನ್ನೂ ಸೂಕ್ಷ್ಮವಾಗಿ ವೀಕ್ಷಿಸಿ ತೆರಳುತ್ತಾರೆ. ಆದರೆ, ದುಬೈ ಪೊಲೀಸರು ಇಂತಹ ಕ್ರಮಗಳನ್ನು ಯಾವ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸೂಚಿಸಿದ್ದಾರೆ.
ಅಪಘಾತ ಸಂಭವಿಸಿದ ಸ್ಥಳದಲ್ಲಿ ನಿಲ್ಲುವವರಿಗೆ 1000 ದಂಡ ವಿಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಇತ್ತೀಚೆಗೆ ದುಬೈ-ಅಲ್ ಐನ್ ರಸ್ತೆಯಲ್ಲಿ ನಡೆದ ಅಪಘಾತದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಿತಿ ಮೀರಿದ ವೇಗದಿಂದ ಬಂದ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮತ್ತೊಂದು ವಾಹನಕ್ಕೆ ಗುದ್ದಿ ಒಂಭತ್ತು ಮಂದಿ ಗಾಯಗೊಂಡರು. ಆದರೆ ಅಪಘಾತ ಸಂಭವಿಸಿದ ಕೂಡಲೇ, ಹಲವರು ಅಲ್ಲಿ ಸೇರಿಕೊಂಡ ಕಾರಣ ಪೊಲೀಸ್ ಗಸ್ತು ವಾಹನ ಮತ್ತು ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ತಲುಪಲು ಕಷ್ಟಪ್ಪಡುವಂತಾಗಿತ್ತು.
ಇದು ಅಮಾನವೀಯ ಕೃತ್ಯವೆಂದು ಪೊಲೀಸರು ವಿವರಿಸಿದರು. ಅಪಘಾತದಲ್ಲಿ ಗಾಯಗೊಂಡವರ ಜೀವಗಳಿಗೆ ಅಪಾಯ ಉಂಟಾಗುವ ಸಂಭವವಿದೆ.
ಅಲ್ ಐನ್ ಟ್ರಾಫಿಕ್ ನಿರ್ದೇಶಕ ಕರ್ನಲ್ ಅಹ್ಮದ್ ಅಲ್ ಸುವೈದಿ, ಸಂಚಾರಕ್ಕೆ ಅಡ್ಡಿಯುಂಟುಮಾಡುವ ಮತ್ತು ಅಂಬ್ಯುಲೆನ್ಸ್ಗೆ ತಲುಪಲು ಸಾಧ್ಯವಿಲ್ಲದಂತೆ ಮಾಡುವ ಈ ಅಮಾನವೀಯತೆಯನ್ನು ಒಪ್ಪಿಕೊಳ್ಳುವುದು ಸಾಧ್ಯವಿಲ್ಲ ಎಂದರು.
ಅಪಘಾತ ನಡೆದ ಪ್ರದೇಶದಲ್ಲಿ ನೋಡುತ್ತಾ ನಿಲ್ಲುವವರಿಗೆ ಪೆನಾಲ್ಟಿ ವಿಧಿಸುವ ಕಾನೂನು 2017 ರಿಂದ ದೇಶದಲ್ಲಿ ಜಾರಿಯಲ್ಲಿದೆ. ಇದೀಗ ಪೆನಾಲ್ಟಿಯನ್ನು 1000 ದಿರ್ಹಂಗೆ ಸಂಚಾರ ಅಧಿಕಾರಿಗಳು ಹೆಚ್ಚಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ