ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಫಲಾನುಭವಿಗಳು ಇನ್ಮುಂದೆ ಕಡ್ಡಾಯವಾಗಿ ಮರು ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯೋಜನೆಗಳಲ್ಲಿ ಪಾರದರ್ಶಕತೆ ತರಲು ಹಾಗೂ ದುರ್ಬಳಕೆ ತಡೆಯಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮೃತಪಟ್ಟವರ ಖಾತೆಗೆ ₹100 ಕೋಟಿ ಜಮೆ!
“ಇದುವರೆಗೆ ಮೃತಪಟ್ಟವರ ಖಾತೆಗೆ ಸುಮಾರು 100 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಹರು ಮತ್ತೊಮ್ಮೆ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಫಲಾನುಭವಿಗಳು ಪ್ರಸ್ತುತ ಯಾವ ಬ್ಯಾಂಕ್ ಖಾತೆಯಲ್ಲಿ ಹಣ ಪಡೆಯುತ್ತಿದ್ದಾರೆ ಎಂಬ ನಿಖರ ಮಾಹಿತಿ ಸರ್ಕಾರಕ್ಕೆ ಲಭ್ಯವಾಗಬೇಕಿದೆ” ಎಂದು ಅವರು ವಿವರಿಸಿದರು.
ಇದೇ ವೇಳೆ ಗೃಹಜ್ಯೋತಿ ಯೋಜನೆ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, “ಪ್ರಸ್ತುತ 1.64 ಲಕ್ಷ ಜನ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಅವರೆಲ್ಲರಿಗೂ ಸರ್ಕಾರದಿಂದ ಪ್ರತ್ಯೇಕ ಗುರುತಿನ ಚೀಟಿ (ID Card) ನೀಡಲಾಗುವುದು. ನಾವು ಕೇವಲ ವಾಸದ ಮನೆಗಳಿಗೆ (ಗೃಹ ಬಳಕೆ) ಮಾತ್ರ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಅದನ್ನು ವಾಣಿಜ್ಯ (ಕಮರ್ಷಿಯಲ್) ಉದ್ದೇಶಗಳಿಗೆ ಬಳಸಿಕೊಳ್ಳಲು ಅವಕಾಶವಿಲ್ಲ” ಎಂದು ಎಚ್ಚರಿಸಿದರು.
ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕೆ ಕಟ್ಟುನಿಟ್ಟಿನ ಕ್ರಮ
ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಶೂನ್ಯಕ್ಕೆ ಇಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಾರಿದ ಡಿ.ಕೆ. ಶಿವಕುಮಾರ್, ಸಾರ್ವಜನಿಕರು ಯಾರೂ ಕೂಡ ಒಂದು ರೂಪಾಯಿ ಲಂಚ ಕೊಡುವ ಅಗತ್ಯವಿಲ್ಲ ಎಂದರು.
ಅಧಿಕಾರಿಗಳ ಮೇಲೆ ಒತ್ತಡ ಹೇರುವಂತಿಲ್ಲ: ರಾಜ್ಯದಲ್ಲಿ ಯಾವುದೇ ಕಾನೂನು ಬಾಹಿರ ಕೃತ್ಯಗಳಿಗೆ ಆಸ್ಪದ ನೀಡುವುದಿಲ್ಲ. ಅಧಿಕಾರಿಗಳ ಮೇಲೆ ಸಚಿವರಾಗಲಿ ಅಥವಾ ಶಾಸಕರಾಗಲಿ ಯಾವುದೇ ರೀತಿಯ ಒತ್ತಡ ಹೇರಬಾರದು.
ಕಚೇರಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಪ್ರತಿಯೊಂದು ಸರ್ಕಾರಿ ಕಚೇರಿಯ ನಾಮಫಲಕದಲ್ಲಿ ಕಡ್ಡಾಯವಾಗಿ ಓರ್ವ ಹಿರಿಯ ಅಧಿಕಾರಿಯ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಕಚೇರಿ ಸಿಬ್ಬಂದಿ ಯಾರೇ ಲಂಚ ಕೇಳಿದರೂ ಸಾರ್ವಜನಿಕರು ತಕ್ಷಣ ಆ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು.
“ಭ್ರಷ್ಟಾಚಾರ ಮುಕ್ತ ಕರ್ನಾಟಕ ಮತ್ತು ಪಾರದರ್ಶಕ ಆಡಳಿತವೇ ನಮ್ಮ ಸರ್ಕಾರದ ಪ್ರಮುಖ ಆಶಯವಾಗಿದೆ” ಎಂದು ಸಿಎಂ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ