ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಫಲಾನುಭವಿಗಳು ಇನ್ಮುಂದೆ ಕಡ್ಡಾಯವಾಗಿ ಮರು ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯೋಜನೆಗಳಲ್ಲಿ ಪಾರದರ್ಶಕತೆ ತರಲು ಹಾಗೂ ದುರ್ಬಳಕೆ ತಡೆಯಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮೃತಪಟ್ಟವರ ಖಾತೆಗೆ ₹100 ಕೋಟಿ ಜಮೆ!
“ಇದುವರೆಗೆ ಮೃತಪಟ್ಟವರ ಖಾತೆಗೆ ಸುಮಾರು 100 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಹರು ಮತ್ತೊಮ್ಮೆ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಫಲಾನುಭವಿಗಳು ಪ್ರಸ್ತುತ ಯಾವ ಬ್ಯಾಂಕ್ ಖಾತೆಯಲ್ಲಿ ಹಣ ಪಡೆಯುತ್ತಿದ್ದಾರೆ ಎಂಬ ನಿಖರ ಮಾಹಿತಿ ಸರ್ಕಾರಕ್ಕೆ ಲಭ್ಯವಾಗಬೇಕಿದೆ” ಎಂದು ಅವರು ವಿವರಿಸಿದರು.
ಇದೇ ವೇಳೆ ಗೃಹಜ್ಯೋತಿ ಯೋಜನೆ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, “ಪ್ರಸ್ತುತ 1.64 ಲಕ್ಷ ಜನ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಅವರೆಲ್ಲರಿಗೂ ಸರ್ಕಾರದಿಂದ ಪ್ರತ್ಯೇಕ ಗುರುತಿನ ಚೀಟಿ (ID Card) ನೀಡಲಾಗುವುದು. ನಾವು ಕೇವಲ ವಾಸದ ಮನೆಗಳಿಗೆ (ಗೃಹ ಬಳಕೆ) ಮಾತ್ರ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಅದನ್ನು ವಾಣಿಜ್ಯ (ಕಮರ್ಷಿಯಲ್) ಉದ್ದೇಶಗಳಿಗೆ ಬಳಸಿಕೊಳ್ಳಲು ಅವಕಾಶವಿಲ್ಲ” ಎಂದು ಎಚ್ಚರಿಸಿದರು.
ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕೆ ಕಟ್ಟುನಿಟ್ಟಿನ ಕ್ರಮ
ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಶೂನ್ಯಕ್ಕೆ ಇಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಾರಿದ ಡಿ.ಕೆ. ಶಿವಕುಮಾರ್, ಸಾರ್ವಜನಿಕರು ಯಾರೂ ಕೂಡ ಒಂದು ರೂಪಾಯಿ ಲಂಚ ಕೊಡುವ ಅಗತ್ಯವಿಲ್ಲ ಎಂದರು.
ಅಧಿಕಾರಿಗಳ ಮೇಲೆ ಒತ್ತಡ ಹೇರುವಂತಿಲ್ಲ: ರಾಜ್ಯದಲ್ಲಿ ಯಾವುದೇ ಕಾನೂನು ಬಾಹಿರ ಕೃತ್ಯಗಳಿಗೆ ಆಸ್ಪದ ನೀಡುವುದಿಲ್ಲ. ಅಧಿಕಾರಿಗಳ ಮೇಲೆ ಸಚಿವರಾಗಲಿ ಅಥವಾ ಶಾಸಕರಾಗಲಿ ಯಾವುದೇ ರೀತಿಯ ಒತ್ತಡ ಹೇರಬಾರದು.
ಕಚೇರಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಪ್ರತಿಯೊಂದು ಸರ್ಕಾರಿ ಕಚೇರಿಯ ನಾಮಫಲಕದಲ್ಲಿ ಕಡ್ಡಾಯವಾಗಿ ಓರ್ವ ಹಿರಿಯ ಅಧಿಕಾರಿಯ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಕಚೇರಿ ಸಿಬ್ಬಂದಿ ಯಾರೇ ಲಂಚ ಕೇಳಿದರೂ ಸಾರ್ವಜನಿಕರು ತಕ್ಷಣ ಆ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು.
“ಭ್ರಷ್ಟಾಚಾರ ಮುಕ್ತ ಕರ್ನಾಟಕ ಮತ್ತು ಪಾರದರ್ಶಕ ಆಡಳಿತವೇ ನಮ್ಮ ಸರ್ಕಾರದ ಪ್ರಮುಖ ಆಶಯವಾಗಿದೆ” ಎಂದು ಸಿಎಂ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ