ಕಣ್ಣೂರು: ಕಣ್ಣೂರು ವಿಮಾನ ನಿಲ್ದಾಣದಿಂದ ಜಿದ್ದಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಅದನ್ನು ವಾಪಸ್ ಇಳಿಸಲಾಗಿದೆ. 180ಕ್ಕೂ ಹೆಚ್ಚು ಪ್ರಯಾಣಿಕರೊಂದಿಗೆ ಹಾರಾಟ ನಡೆಸಿದ್ದ ವಿಮಾನವು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ಕಣ್ಣೂರು ವಿಮಾನ ನಿಲ್ದಾಣದಿಂದ ಬೆಳಿಗ್ಗೆ 7.40ಕ್ಕೆ ಹೊರಟಿದ್ದ ಜಿದ್ದಾ ವಿಮಾನದಲ್ಲಿ ಪ್ರಯಾಣದ ಮಧ್ಯೆ ಯಾಂತ್ರಿಕ ದೋಷ ಕಂಡುಬಂದಿತ್ತು. ಸುಮಾರು ಎರಡು ಗಂಟೆಗಳ ನಂತರ ಪೈಲಟ್ಗಳು ಇಂಜಿನ್ ಮುನ್ನೆಚ್ಚರಿಕೆ ದೀಪವನ್ನು (engine warning light) ಗಮನಿಸಿದ ಹಿನ್ನೆಲೆಯಲ್ಲಿ ವಿಮಾನವನ್ನು ವಾಪಸ್ ಇಳಿಸಲು ನಿರ್ಧರಿಸಿದರು. ಮೊದಲು ಮಂಗಳೂರಿನಲ್ಲಿ ವಿಮಾನವನ್ನು ಇಳಿಸಲು ಪ್ರಯತ್ನ ನಡೆಸಲಾಯಿತಾದರೂ, ಅದು ಸಾಧ್ಯವಾಗದ ಕಾರಣ ಕಣ್ಣೂರಿಗೇ ವಾಪಸ್ ತರಲಾಯಿತು. ಆಕಾಶದಲ್ಲಿ ಸುತ್ತು ಹೊಡೆದು ಇಂಧನದ ಪ್ರಮಾಣವನ್ನು ಕಡಿಮೆ ಮಾಡಿದ ನಂತರವೇ ವಿಮಾನವನ್ನು ಮರಳಿ ಇಳಿಸಲಾಯಿತು.
“ವಿಮಾನವು ಕಣ್ಣೂರಿನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವನ್ನು ಪರಿಶೀಲಿಸಿದಾಗ ಇಂಧನ ಫಿಲ್ಟರ್ನಲ್ಲಿ (fuel filter) ದೋಷ ಕಂಡುಬಂದಿದ್ದು, ಆತಂಕ ಪಡುವಂತಹ ಯಾವುದೇ ಪರಿಸ್ಥಿತಿ ಇಲ್ಲ,” ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ