ರಿಯಾದ್: ದೇಶದ ವಿವಿಧ ಭಾಗಗಳಲ್ಲಿ ಬೇಸಿಗೆಯ ತಾಪಮಾನವು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಲ್ ಡೈರೆಕ್ಟರೇಟ್ ಆಫ್ ಸಿವಿಲ್ ಡಿಫೆನ್ಸ್ ವಾಹನ ಮಾಲೀಕರಿಗೆ ತುರ್ತು ಸುರಕ್ಷತಾ ಎಚ್ಚರಿಕೆಯನ್ನು ನೀಡಿದೆ. ವಾಹನಗಳ ಒಳಗೆ ಸುಲಭವಾಗಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಅಜಾಗರೂಕತೆಯಿಂದ ಇಡುವುದರಿಂದ ಭಾರಿ ಅಗ್ನಿ ಅವಘಡಗಳು ಸಂಭವಿಸಬಹುದು. ಇದು ಜೀವ ಮತ್ತು ಆಸ್ತಿಗೆ ತೀವ್ರ ಬೆದರಿಕೆಯಾಗಿದೆ ಎಂದು ಸಿವಿಲ್ ಡಿಫೆನ್ಸ್ ನೆನಪಿಸಿದೆ.
ಪೋರ್ಟಬಲ್ ಚಾರ್ಜರ್ಗಳು, ಫೋನ್ ಬ್ಯಾಟರಿಗಳಂತಹ ಎಲೆಕ್ಟ್ರಾನಿಕ್ ಉತ್ಪನ್ನಗಳು ಅಪಘಾತಗಳಿಗೆ ಕಾರಣವಾಗಬಹುದು. ಲೈಟರ್ಗಳು, ಸಣ್ಣ ಗ್ಯಾಸ್ ಸಿಲಿಂಡರ್ಗಳು/ಕ್ಯಾನಿಸ್ಟರ್ಗಳಂತಹ ಬೆಂಕಿ ಅವಘಡಕ್ಕೆ ಕಾರಣವಾಗುವ ವಸ್ತುಗಳನ್ನು ವಾಹನಗಳ ಒಳಗೆ ಇಡಬಾರದು. ಪರ್ಫ್ಯೂಮ್ಗಳು ಮತ್ತು ಲಿಕ್ವಿಡ್ ಹ್ಯಾಂಡ್ ಸ್ಯಾನಿಟೈಸರ್ಗಳು ಸಹ ಅಪಾಯವನ್ನು ಉಂಟುಮಾಡುವಂಥವುಗಳಾಗಿವೆ.
ದೀರ್ಘಕಾಲದವರೆಗೆ ತೀವ್ರವಾದ ಶಾಖಕ್ಕೆ ಒಳಗಾಗುವುದರಿಂದ ಇವುಗಳು ಸ್ಫೋಟಗೊಳ್ಳುವ ಅಥವಾ ಹಠಾತ್ ಆಗಿ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆಯಿದೆ. ಅಪಘಾತಗಳನ್ನು ಗರಿಷ್ಠ ಮಟ್ಟದಲ್ಲಿ ಕಡಿಮೆ ಮಾಡಲು ಸಾರ್ವಜನಿಕರು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಸರಿಯಾಗಿ ಪಾಲಿಸಬೇಕು ಎಂದು ಸಿವಿಲ್ ಡಿಫೆನ್ಸ್ ಒತ್ತಿ ಹೇಳಿದೆ.
ಅಧಿಕೃತ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ನೀಡಲಾಗುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ವಿನಂತಿಸಿದ್ದಾರೆ. ಯಾವುದೇ ರೀತಿಯ ತುರ್ತು ಪರಿಸ್ಥಿತಿ ಅಥವಾ ಅಪಘಾತ ಸಂಭವಿಸಿದಲ್ಲಿ, ಸಹಾಯಕ್ಕಾಗಿ ತುರ್ತು ಸಂಖ್ಯೆಗಳನ್ನು ಸಂಪರ್ಕಿಸಬಹುದು. ಮಕ್ಕಾ, ಮದೀನಾ, ರಿಯಾದ್ ಮತ್ತು ಪೂರ್ವ ಪ್ರಾಂತ್ಯದಲ್ಲಿರುವವರು 911 ಸಂಖ್ಯೆಗೆ ಮತ್ತು ದೇಶದ ಇತರ ಪ್ರದೇಶಗಳಲ್ಲಿರುವವರು 998 ಎಂಬ ತುರ್ತು ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬೇಕಾಗಿದೆ.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ