ಕುಂಬ್ರದ ಮಣ್ಣಿನಲ್ಲಿ ಮುಳಕೆಯೊಡೆದು, ಜನರ ಪ್ರೀತಿ-ವಿಶ್ವಾಸವನ್ನು ಸಂಪಾದಿಸಿಕೊಂಡು ಯಶಸ್ವಿಯಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿರುವ ಇಂಡಿಯನ್ ಇವೆಂಟ್ ಆ್ಯಂಡ್ ವೆಡ್ಡಿಂಗ್ಸ್ ಶಾಮಿಯಾನ ಸಂಸ್ಥೆಯ ಗೋಡೌನ್ಗೆ ಇಂದು ಅಂತರಾಷ್ಟ್ರೀಯ ಖ್ಯಾತಿಯ ವಾಗ್ಮಿ, ಸಾವಿರಾರು ಅಭಿಮಾನಿಗಳನ್ನು ಹೊಂದಿರುವ ಜನಪ್ರಿಯ ಧಾರ್ಮಿಕ ಪ್ರಭಾಷಕ ಉಸ್ತಾದ್ ಸಿರಾಜುದ್ದೀನ್ ಖಾಸಿಮಿ (ಪತ್ತಾನಾಪುರಂ, ಕೇರಳ) ಭೇಟಿ ನೀಡಿ ಸಂಸ್ಥೆಯ ಬೆಳವಣಿಗೆಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಪಾಲುದಾರ ಇಕ್ಬಾಲ್ ಬಾಳಿಲ, “ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಸಿರಾಜುದ್ದೀನ್ ಖಾಸಿಮಿ ಉಸ್ತಾದರು ನಮ್ಮ ಸಂಸ್ಥೆಗೆ ಭೇಟಿ ನೀಡಿರುವುದು ನಮಗೆ ಅಪಾರ ಸಂತೋಷದ ವಿಷಯ. ಅವರ ದುಆ ಮತ್ತು ಮಾರ್ಗದರ್ಶನ ಸದಾ ನಮ್ಮೊಂದಿಗೆ ಇರಲಿ” ಎಂದು ಹಾರೈಸಿದರು.
ಬಳಿಕ ಉಸ್ತಾದ್ ಸಿರಾಜುದ್ದೀನ್ ಖಾಸಿಮಿ ಅವರನ್ನು ಕುಂಬ್ರದ ಹಿರಿಯ ಸಮಾಜಮುಖಿ ನಾಯಕ ಅಬ್ದುಲ್ ರಹ್ಮಾನ್ ಹಾಜಿ ಅರ್ಯಡ್ಕ ಅವರು ಶಾಲು ಹೊದಿಸಿ ಗೌರವಿಸಿದರು. ಉಸ್ತಾದರೊಂದಿಗೆ ಆಗಮಿಸಿದ್ದ ಖ್ಯಾತ ವಾಗ್ಮಿ ಅಬ್ರಾರಿ ಉಸ್ತಾದ್ ಅವರನ್ನೂ ಇದೇ ಸಂದರ್ಭದಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪಾಲುದಾರ ಮುಕ್ತಾರ್ ಕುಂಬ್ರ, ಉದ್ಯಮಿ ಶರಫುದ್ದೀನ್ ಕುಂಬ್ರ, ಮ್ಯಾನೇಜ್ಮೆಂಟ್ ತಂಡದ ನಿಝಾಮುದ್ದೀನ್ ಬಾಳಿಲ, ಅಶ್ರಫ್ ಸನ್ ಶೖನ್ ಕುಂಬ್ರ ಸೇರಿದಂತೆ ಹಲವಾರು ಗಣ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಹತ್ತನೇ ವರ್ಷದ ಸಂಭ್ರಮದಲ್ಲಿರುವ ಇಂಡಿಯನ್ ಇವೆಂಟ್ ಆ್ಯಂಡ್ ವೆಡ್ಡಿಂಗ್ಸ್ ಸಂಸ್ಥೆಯ ಮುಂದಿನ ಪಯಣ ಇನ್ನಷ್ಟು ಯಶಸ್ವಿಯಾಗಲಿ ಎಂದು ಉಸ್ತಾದರು ದುವಾ ನೆರವೇರಿಸಿ ಶುಭ ಹಾರೈಸಿದರು.
















ಇನ್ನಷ್ಟು ಸುದ್ದಿಗಳು
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ